AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು

ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ ಕೂಡ ಯೋಗಾಭ್ಯಾಸ ಮಾಡಿದ್ದಾರೆ.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು
ಯೋಗಾಭ್ಯಾಸದಲ್ಲಿ ತೊಡಗಿರುವ ಐಟಿಬಿಪಿ ಯೋಧರು..
TV9 Web
| Edited By: |

Updated on: Jun 21, 2021 | 9:27 AM

Share

ಇಂದು ಅಂತಾರಾಷ್ಟ್ರೀಯ ಯೋಗ ದಿನ. ಬೆಳಗ್ಗೆಯೇ ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಾಗೇ ಭಾರತ-ಚೀನಾ ಗಡಿಯಲ್ಲಿ ನಿಯೋಜಿಸಲ್ಪಟ್ಟಿರುವ ಇಂಡೋ-ಟಿಬೇಟಿಯನ್​ ಬಾರ್ಡರ್​ ಪೊಲೀಸ್​​​ (ಐಟಿಬಿಪಿ)ಸಿಬ್ಬಂದಿ 18000 ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಹಿಮ ಬೀಳುತ್ತಿದ್ದರೂ ಅದರ ಮಧ್ಯೆಯೇ ಐಟಿಬಿಪಿ ಸಿಬ್ಬಂದಿ ಯೋಗಾಭ್ಯಾಸ ಮಾಡಿದ ಫೋಟೋಗಳು ವೈರಲ್​ ಆಗುತ್ತಿವೆ. ಕಳೆದ ವರ್ಷವೂ ಸಹ ಐಟಿಬಿಪಿ ಸಿಬ್ಬಂದಿ ಲಡಾಖ್​ ಔಟ್​ಪೋಸ್ಟ್​​​ ರೇಂಜಿಂಗ್​​ನಲ್ಲಿರುವ 13,000 ಅಡಿ ಎತ್ತರದ ಪ್ರದೇಶದಲ್ಲಿ ಯೋಗ ಮಾಡಿದ್ದರು.

ಅಷ್ಟೇ ಅಲ್ಲ, ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ, ಕಳೆದ ವರ್ಷ ಚೀನಾ ಸೈನಿಕರೊಂದಿಗೆ ಸಂಘರ್ಷ ನಡೆದ ಗಾಲ್ವಾನ್​ ಕಣಿವೆಯ ಬಳಿಯೂ ಯೋಗಾಭ್ಯಾಸ ನಡೆಸಿದ್ದಾರೆ.

ITBP 2

ಯೋಗಾಭ್ಯಾಸದಲ್ಲಿ ತೊಡಗಿರುವ ಯೋಧರು

ಲಡಾಖ್​​ನಲ್ಲಂತೂ ವಿಪರೀತ ಚಳಿ. 30 ಡಿಗ್ರಿ ಸೆಲ್ಸಿಯಸ್​ ಕೊರೆವ ಚಳಿಯಲ್ಲೂ ಯೋಗಾಭ್ಯಾಸ ಮಾಡಿದ ಐಟಿಬಿಪಿ ಸಿಬ್ಬಂದಿಯ ಬದ್ಧತೆಗೆ ಇಡೀ ದೇಶ ಭೇಷ್​ ಎನ್ನುತ್ತಿದೆ. ಗಾಲ್ವಾನ್ ಸೇರಿ ಹಲವು ಪ್ರದೇಶಗಳಿಗೆ ಸಂಚರಿಸುವುದೇ ಕಷ್ಟವಾಗಿರುವಾಗ ಈ ಯೋಧರು ಶಸ್ತ್ರಾಸ್ತ್ರಗಳನ್ನು ಹೊತ್ತು ಸಾಗುತ್ತಾರೆ. ಅಂಥ ಚಳಿಯಲ್ಲೂ ಮುಂಜಾನೆ ಹಿಮದಲ್ಲೇ ಕುಳಿತು ಯೋಗಾಭ್ಯಾಸ ಮಾಡುವುದು ನಿಜಕ್ಕೂ ಹೆಮ್ಮೆ ತರುತ್ತಿದೆ ಎಂದು ನೆಟ್ಟಿಗರೂ ಅಭಿಪ್ರಾಯ ಪಟ್ಟಿದ್ದಾರೆ.

ITBP 1

ಐಟಿಬಿಪಿ ಯೋಗಾಭ್ಯಾಸ

ಇದನ್ನೂ ಓದಿ: International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?