AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ
ಬೆಟ್ಟದಲ್ಲಿ ಸಿಲುಕಿದ್ದವರ ರಕ್ಷಣೆ
TV9 Web
| Edited By: |

Updated on: Sep 02, 2021 | 6:53 PM

Share

ಉತ್ತರಾಖಂಡ್​​ನ ಮಿಲಮ್​​ ಸಮೀಪದಲ್ಲಿ, ಸಮುದ್ರ ಮಟ್ಟದಿಂದ 12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದ ನಾಲ್ವರನ್ನು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್ (ITBP) ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಅದ್ಯಾವುದೋ ಔಷಧೀಯ ಗಿಡಮೂಲಿಕೆ ತರಲೆಂದು ಸಮೀಪದ ಪರ್ವತ ಹತ್ತಿದ್ದರು. ಆದರೆ ಆ ಪರ್ವತದ ಮೂಲಕ ಹರಿಯುವ ನದಿ ಒಮ್ಮೆಲೇ ಉಕ್ಕಿ ಹರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿದ್ದರು. ಸುಮಾರು 7 ತಾಸು ಅಲ್ಲಿಯೇ ಇದ್ದ ಆ ನಾಲ್ವರನ್ನೂ ಇದೀಗ ರಕ್ಷಿಸಲಾಗಿದ್ದು, ವಿಡಿಯೋ ವೈರಲ್​ ಆಗಿದೆ.

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೂವರು ಪುರುಷರು ಮತ್ತು ಓರ್ವ ಮಹಿಳೆ ಇದ್ದರು. ಈ ಎಲ್ಲರನ್ನೂ ನದಿಯ ಆಚೆ ಬದಿಯಿಂದ ಈ ಕಡೆಗೆ ಹಗ್ಗದ ಮೂಲಕ ಕರೆತರಲಾಗಿದೆ.

ಗ್ರಾಮಸ್ಥರು ಒಂದಷ್ಟು ಗಿಡಮೂಲಿಕೆಗಳನ್ನು ತರಲು ಹೋಗಿದ್ದರು. ಆದರೆ ವಾಪಸ್​ ಬರುವಾಗ ದಾರಿ ತಪ್ಪಿದ್ದಾರೆ. ಈ ನದಿ ತುಂಬಿ ಹರಿದಿದ್ದರಿಂದ ವಾಪಸ್​ ಬರಲಾಗದೆ ಕಷ್ಟಪಟ್ಟಿದ್ದಾರೆ ಎಂದು ಐಟಿಬಿಪಿ ವಕ್ತಾರ ವಿವೇಕ್​ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ