AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ‘ಮೋದಿ ಕಿ ಗ್ಯಾರಂಟಿ’; ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ಧನ್ಯವಾದ ಸಲ್ಲಿಸಿದ ಭೂತಾನ್ ಪಿಎಂ

ನಮ್ಮನ್ನು ಭೇಟಿ ಮಾಡಿದ್ದಕ್ಕಾಗಿ ನನ್ನ ಸಹೋದರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಅವರ ಬಿಡುವಿಲ್ಲದ ವೇಳಾಪಟ್ಟಿಯಾಗಲೀ ಅಥವಾ ಪ್ರತಿಕೂಲ ಹವಾಮಾನವಾಗಲೀ ನಮ್ಮನ್ನು ಭೇಟಿ ಮಾಡುವ ಭರವಸೆಯನ್ನು ಪೂರೈಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಇದು ಮೋದಿ ಕಿ ಗ್ಯಾರಂಟಿ ಸಂಗತಿ ಎಂದು ಭೂತಾನ್ ಪಿಎಂ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದು ‘ಮೋದಿ ಕಿ ಗ್ಯಾರಂಟಿ’; ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ಧನ್ಯವಾದ ಸಲ್ಲಿಸಿದ ಭೂತಾನ್ ಪಿಎಂ
ಭೂತಾನ್ ಪ್ರಧಾನಿ ಜತೆ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Mar 23, 2024 | 7:30 PM

Share

ಥಿಂಪು ಮಾರ್ಚ್ 23: ಪ್ರತಿಕೂಲ ಹವಾಮಾನ ಮತ್ತು ಲೋಕಸಭೆ ಚುನಾವಣೆಗೆ ಮುನ್ನ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ತಮ್ಮ ದೇಶಕ್ಕೆ ಭೇಟಿ ನೀಡಿದ್ದಕ್ಕಾಗಿ ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ (Tshering Tobgay)ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ರಾಜ್ಯ ಪ್ರವಾಸದ ಭರವಸೆಯನ್ನು ಈಡೇರಿಸುವುದು ಮೋದಿ ಕಿ ಗ್ಯಾರಂಟಿ ಎಂದು ಅವರು ಹೇಳಿದರು.

ನಮ್ಮನ್ನು ಭೇಟಿ ಮಾಡಿದ್ದಕ್ಕಾಗಿ ನನ್ನ ಸಹೋದರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಅವರ ಬಿಡುವಿಲ್ಲದ ವೇಳಾಪಟ್ಟಿಯಾಗಲೀ ಅಥವಾ ಪ್ರತಿಕೂಲ ಹವಾಮಾನವಾಗಲೀ ನಮ್ಮನ್ನು ಭೇಟಿ ಮಾಡುವ ಭರವಸೆಯನ್ನು ಪೂರೈಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಇದು ಮೋದಿ ಕಿ ಗ್ಯಾರಂಟಿ ಸಂಗತಿ!” ಎಂದ ಪ್ರಧಾನಿ ಮೋದಿಯವರು ತಮ್ಮ ಭೇಟಿಯನ್ನು ಮುಗಿಸಿ ಭಾರತಕ್ಕೆ ಹೊರಟ ನಂತರ X ನ ಪೋಸ್ಟ್‌ನಲ್ಲಿ ಟೊಬ್ಗೇ ಹೇಳಿದ್ದಾರೆ.

ಟೊಬ್ಗೇ ಟ್ವೀಟ್

ಪಾರೋ ವಿಮಾನ ನಿಲ್ದಾಣದ ಮೇಲೆ ಪ್ರತಿಕೂಲ ಹವಾಮಾನದಿಂದಾಗಿ ತಮ್ಮ ಭೇಟಿಯನ್ನು ಮುಂದೂಡಿದ ಒಂದು ದಿನದ ನಂತರ ಪ್ರಧಾನಿ ಮೋದಿ ಭೂತಾನ್‌ಗೆ ಪ್ರಯಾಣ ಬೆಳೆಸಿದರು. ಶುಕ್ರವಾರ ಬೆಳಗ್ಗೆ ಪ್ರಧಾನಿ ಮೋದಿ ಅವರು ತಮ್ಮ ರಾಜ್ಯ ಭೇಟಿಯ ಸಂದರ್ಭದಲ್ಲಿ ಆತಿಥ್ಯ ನೀಡಿದ ಭೂತಾನ್ ಕಿಂಗ್ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಮತ್ತು ಪಿಎಂ ಟೋಬ್‌ಗೇ ಅವರಿಗೆ ಧನ್ಯವಾದ ಅರ್ಪಿಸಿದರು.

ಮೋದಿ ಟ್ವೀಟ್

ವಿಶೇಷ ಸೂಚಕವಾಗಿ,  ತೊಬ್ಗೇ ಅವರ ಜತೆ ಭೂತಾನ್ ರಾಜರು  ಪಾರೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಬೀಳ್ಕೊಡಲು ಬಂದಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, “ನಾನು ದೆಹಲಿಗೆ ಹೊರಡುವಾಗ ವಿಮಾನ ನಿಲ್ದಾಣಕ್ಕೆ ಬಂದಿರುವ ಹಿಸ್ ಮೆಜೆಸ್ಟಿ ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್‌ಗೈಲ್ ವಾಂಗ್‌ಚುಕ್ ಅವರ ವಿಶೇಷ ಉಪಸ್ಥಿತಿಯಿಂದ ನನ್ನನ್ನು ಗೌರವಿಸಲಾಗಿದೆ” ಎಂದು ಹೇಳಿದ್ದಾರೆ.

ಭೂತಾನ್‌ಗೆ ತನ್ನ ರಾಜ್ಯ ಭೇಟಿ ಬಹಳ ವಿಶೇಷವಾದದ್ದು ಎಂದು ವಿವರಿಸಿದ ಪ್ರಧಾನಿ ಮೋದಿ, ಭಾರತ ಯಾವಾಗಲೂ ಭೂತಾನ್‌ಗೆ ವಿಶ್ವಾಸಾರ್ಹ ಸ್ನೇಹಿತ ಮತ್ತು ಪಾಲುದಾರ ಎಂದು ಹೇಳಿದರು.

ಇದನ್ನೂ ಓದಿ: ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಅರವಿಂದ್ ಕೇಜ್ರಿವಾಲ್

” ಸನ್ಮಾನ್ಯ ರಾಜ, ಪ್ರಧಾನಿ ತೋಬ್ಗೇ ಮತ್ತು ಭೂತಾನ್‌ನ ಇತರ ಪ್ರತಿಷ್ಠಿತ ಜನರನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ನಮ್ಮ ಮಾತುಕತೆಗಳು ಭಾರತ-ಭೂತಾನ್ ಸ್ನೇಹಕ್ಕೆ ಇನ್ನಷ್ಟು ಚೈತನ್ಯವನ್ನು ನೀಡುತ್ತವೆ. ನಾನು ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು ನೀಡಿದ್ದಕ್ಕಾಗಿ ಕೃತಜ್ಞನಾಗಿದ್ದೇನೆ. ಭೂತಾನ್‌ನ ಅದ್ಭುತ ಜನರಿಗೆ ಅವರ ಪ್ರೀತಿ ಮತ್ತು ಆತಿಥ್ಯಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಭಾರತವು ಯಾವಾಗಲೂ ಭೂತಾನ್‌ಗೆ ವಿಶ್ವಾಸಾರ್ಹ ಸ್ನೇಹಿತ ಮತ್ತು ಪಾಲುದಾರನಾಗಿರಲಿದೆ” ಎಂದು ಮೋದಿ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Sat, 23 March 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು