AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷಗಳು ಸದನದಲ್ಲಿ ಚರ್ಚೆಯನ್ನೇ ನಡೆಸದೆ, ಸರ್ಕಾರ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸುವುದರಲ್ಲಿ ಅರ್ಥವಿಲ್ಲ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಸಂಸತ್ ಕಲಾಪಗಳಲ್ಲಿ ಚರ್ಚೆ ನಡೆಯಬೇಕು. ಚರ್ಚೆ ನಡೆದಾಗ ಸದಸ್ಯರ ಪ್ರಶ್ನೆಗಳಿಗೆ ಸರ್ಕಾರದ ಪರವಾಗಿ ಸಚಿವರು ಸದನದಲ್ಲಿ ಉತ್ತರ ಕೊಡಬಹುದು. ಸದನದಲ್ಲಿ ಕಲಾಪ ನಡೆಯದೇ ಸರ್ಕಾರ ಉತ್ತರಿಸುತ್ತಿಲ್ಲ ಎಂದರೆ ಹೇಗೆ..? ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ

ವಿಪಕ್ಷಗಳು ಸದನದಲ್ಲಿ ಚರ್ಚೆಯನ್ನೇ ನಡೆಸದೆ, ಸರ್ಕಾರ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸುವುದರಲ್ಲಿ ಅರ್ಥವಿಲ್ಲ : ಪ್ರಲ್ಹಾದ್ ಜೋಶಿ ವಾಗ್ದಾಳಿ
ಪ್ರಲ್ಹಾದ್ ಜೋಶಿ
TV9 Web
| Edited By: ಸಾಧು ಶ್ರೀನಾಥ್​|

Updated on: Feb 07, 2023 | 4:39 PM

Share

ನವದೆಹಲಿ: ಕಾಂಗ್ರೆಸ್ ಸೇರಿದಂತೆ ವಿಪಕ್ಷ ನಾಯಕರು ಮತ್ತು ಸದಸ್ಯರು (opposition) ಮೊದಲು ಸಂಸತ್ ಕಲಾಪಗಳಲ್ಲಿ ಪಾಲ್ಗೊಂಡು ಚರ್ಚೆ ನಡೆಸಲಿ. ಸದನದಲ್ಲಿ ಚರ್ಚೆಯೇ ನಡೆಯಲು ಬಿಡದೇ (Debate in the Parliament) ಸರ್ಕಾರ ಉತ್ತರಿಸುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ.

ದೆಹಲಿಯಲ್ಲಿಂದು ಬಿಜೆಪಿ ಸಂಸದೀಯ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಇಂದಿನಿಂದ ಸಂಸತ್ ನಲ್ಲಿ ಸುಗಮ ಕಲಾಪಕ್ಕೆ ಸಹಕರಿಸುವಂತೆ ವಿಪಕ್ಷ ನಾಯಕರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಸಂಸತ್ತಿನಲ್ಲಿ ಕಾಂಗ್ರೆಸ್ ನಡೆಯನ್ನು ಟೀಕಿಸಿದರು.

ಸಂಸತ್ ಕಲಾಪಗಳಲ್ಲಿ ಚರ್ಚೆ ನಡೆಯಬೇಕು. ಚರ್ಚೆ ನಡೆದಾಗ ಸದಸ್ಯರ ಪ್ರಶ್ನೆಗಳಿಗೆ ಸರ್ಕಾರದ ಪರವಾಗಿ ಸಚಿವರು ಸದನದಲ್ಲಿ ಉತ್ತರ ಕೊಡಬಹುದು. ಸದನದಲ್ಲಿ ಕಲಾಪ ನಡೆಯದೇ ಸರ್ಕಾರ ಉತ್ತರಿಸುತ್ತಿಲ್ಲ ಎಂದರೆ ಹೇಗೆ..? ಸರ್ಕಾರ ಉತ್ತರ ಕೊಡಲು ಸದನದ ಕಲಾಪಗಳಲ್ಲಿ ಚರ್ಚೆ ನಡೆಯಬೇಕಲ್ಲ. ವಿಪಕ್ಷಗಳು ಚರ್ಚೆ ನಡೆಸುವುದಕ್ಕೆ ತಯಾರಿಲ್ಲ. ಹೀಗಿರುವಾಗ ಸರ್ಕಾರದ ಮೇಲೆ ಗೂಬೆ ಕುರಿಸುವುದು ಸರಿಯಲ್ಲ ಎಂದರು.

ಬಜೆಟ್ ಮಂಡನೆ ಬಳಿಕ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಕೈಗೊಳ್ಳುವುದು ಸಂಸತ್ ನಲ್ಲಿ ಈ ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ವಿಪಕ್ಷಗಳು ರಾಷ್ಟ್ರಪತಿಯವರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಏನು ಹೇಳಬೇಕು ಸದನದಲ್ಲಿ ಹೇಳಲಿ. ಆಗ ಸುಗಮ ಕಲಾಪಕ್ಕೆ ಅವಕಾಶವಾಗುತ್ತದೆ. ಈ ನಿಟ್ಟಿನಲ್ಲಿ ವಿಪಕ್ಷಗಳು ಸಹಕರಿಸಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಬಜೆಟ್ ಬಗ್ಗೆ ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ಯಪಡಿಸಿದ್ದು, ಈ ಬಜೆಟ್ ನಲ್ಲಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ನೀಡಿರುವ ಯೋಜನೆಗಳ ಬಗ್ಗೆ ಸಂಸದರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಜನರೊಟ್ಟಿಗೆ ಸಂವಾದ ಕಾರ್ಯಕ್ರಮಗಳನ್ನ ನಡೆಸುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ ಎಂದು ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಿಳಿಸಿದರು.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು