AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಬಲ್ಪುರ ದೋಣಿ ದುರಂತ, ಸಾವು ಬಂದ್ರೂ, ತಬ್ಬಿಕೊಂಡ ಮಗನನ್ನು ಬಿಡದ ತಾಯಿ

ಜಬಲ್ಪುರದ ಬಾರ್ಗಿ ಅಣೆಕಟ್ಟಿನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಬಲ ಗಾಳಿ, ಅಲೆಗಳಿಂದಾಗಿ ದೋಣಿ ಮಗುಚಿತ್ತು. ನೀರೊಳಗೂ ಮಗುವನ್ನು ಬಿಗಿದಪ್ಪಿ ಮೃತಪಟ್ಟ ತಾಯಿಯ ದೃಶ್ಯ ಕರುಳು ಹಿಂಡುವಂತಿದೆ. ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ. ಈ ಘಟನೆ ಮಧ್ಯಪ್ರದೇಶದಲ್ಲಿ ದುಃಖ ಸೃಷ್ಟಿಸಿದೆ.

ಜಬಲ್ಪುರ ದೋಣಿ ದುರಂತ, ಸಾವು ಬಂದ್ರೂ, ತಬ್ಬಿಕೊಂಡ ಮಗನನ್ನು ಬಿಡದ ತಾಯಿ
ದೋಣಿImage Credit source: Newsbytes
ನಯನಾ ರಾಜೀವ್
|

Updated on: May 01, 2026 | 3:01 PM

Share

ಜಬಲ್ಪುರ, ಮೇ 1: ಮಧ್ಯಪ್ರದೇಶದ ಬಾರ್ಗಿ ಅಣೆಕಟ್ಟಿನಲ್ಲಿ ಕ್ರೂಸ್‌‍ ದೋಣಿ ಮುಳುಗಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನರ್ಮದಾ ನದಿಯ ಶಾಂತ ಅಲೆಗಳ ಮೇಲೆ ಸಾಗುತ್ತಿದ್ದ ಆ ಕ್ರೂಸ್ ದೋಣಿಯೇ ಅಲ್ಲಿದ್ದವರ ಪಾಲಿಗೆ ಯಮನಾಗಬಹುದು ಎನ್ನುವ ಕಲ್ಪನೆಯೂ ಇರಲಿಲ್ಲ. 30 ಜನರನ್ನು ಹೊತ್ತು ಹೊರಟಿದ್ದ ದೋಣಿ ಬಲವಾದ ಗಾಳಿ, ಅಲೆಯಿಂದಾಗಿ ಮಗುಚಿತ್ತು. ರಕ್ಷಣಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ನೀರಿನ ಆಳದಲ್ಲಿ ಮೃತದೇಹಗಳನ್ನು ಹುಡುಕುತ್ತಿದ್ದಾಗ ಕಂಡ ದೃಶ್ಯ ಅವರ ಕಣ್ಣಾಲಿಗಳನ್ನು ಒದ್ದೆ ಮಾಡಿತು.

ನಾಲ್ಕು ವರ್ಷದ ಪುಟ್ಟ ಮಗುವನ್ನು ಅವನ ತಾಯಿ ತನ್ನ ಎದೆಗೆ ಬಿಗಿಯಾಗಿ ಅಪ್ಪಿಕೊಂಡ ಸ್ಥಿತಿಯಲ್ಲೇ ಇಬ್ಬರೂ ಪ್ರಾಣಬಿಟ್ಟಿದ್ದರು. ಮಗುವನ್ನು ಸಾವಿನ ದವಡೆಯಿಂದ ಹೇಗಾದರೂ ಉಳಿಸಬೇಕೆಂಬ ಆ ತಾಯಿಯ ಹತಾಶ ಪ್ರಯತ್ನ ನೀರಿನ ಆಳದಲ್ಲೂ ಸ್ಥಿರವಾಗಿತ್ತು. ಇದೇ ಕುಟುಂಬದ ತಂದೆ ಮತ್ತು ಮಗಳು ಪಾರಾಗುವಲ್ಲಿ ಯಶಸ್ವಿಯಾಗಿದ್ದರೂ, ಪ್ರೀತಿಯ ತಾಯಿ ಮತ್ತು ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ.

ದೋಣಿ ಅಸಮತೋಲನಗೊಳ್ಳುತ್ತಿತ್ತು ಮತ್ತು ನೀರಿನಿಂದ ತುಂಬಲು ಪ್ರಾರಂಭಿಸಿತು, ಕಣ್ಣು ಮಿಟುಕಿಸುವಷ್ಟರಲ್ಲಿ ಎಲ್ಲರೂ ಕಣ್ಮರೆಯಾದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಅಂದಿನ ಭೀಕರತೆಯನ್ನು ನೆನೆದಿದ್ದಾರೆ. ಏಕಾಏಕಿ ಹವಾಮಾನ ವೈಪರೀತ್ಯದಿಂದ ಎದ್ದ ಬಿರುಗಾಳಿ ಆಡುತ್ತಾ ನಲಿಯುತ್ತಿದ್ದ ಪ್ರವಾಸಿಗರ ಚೀರಾಟಕ್ಕೆ ಕಾರಣವಾಯಿತು. ಯಾರಿಗೂ ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ದೋಣಿ ಜಲಸಮಾಧಿಯಾಗಿತ್ತು.

ಮತ್ತಷ್ಟು ಓದಿ: Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ

ಸೈಯದ್ ರಿಯಾಜ್ ಹುಸೇನ್ ಎಂಬುವವರು ಬದುಕುಳಿದ ರೀತಿ ಒಂದು ಪವಾಡವೇ ಸರಿ. ನನ್ನ ತಲೆ ಮಾತ್ರ ನೀರಿನ ಮೇಲಿರುವ ಸ್ಥಳದಲ್ಲಿ ನಾನು ಸಿಲುಕಿಕೊಂಡಿದ್ದೆ. ನನ್ನ ಹಿಂದೆ ದೇಹಗಳು ತೇಲುತ್ತಿರುವುದು ಕಾಣಿಸುತ್ತಿತ್ತು ಎಂದು ಅವರು ವಿವರಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಸಾವಿನ ನೆರಳಿನಲ್ಲಿ ಸಿಲುಕಿದ್ದ ಅವರನ್ನು ಅದೃಷ್ಟವಶಾತ್ ರಕ್ಷಣಾ ಪಡೆಗಳು ಗುರುತಿಸಿ ಬದುಕಿಸಿದವು. ಆದರೆ, ಅವರ ಕುಟುಂಬದವರು ಇನ್ನೂ ಕಾಣೆಯಾಗಿದ್ದು, ಅವರ ಹುಡುಕಾಟ ಮುಂದುವರಿದಿದೆ. ಮಗುವನ್ನು ಉಳಿಸಲು ಪ್ರಾಣವನ್ನೇ ಪಣಕ್ಕಿಟ್ಟ ಆ ತಾಯಿಯ ತ್ಯಾಗ ಶಾಶ್ವತವಾಗಿ ಜನರ ಮನದಲ್ಲಿ ಉಳಿಯಲಿದೆ.

ಕಾಣೆಯಾದ ಪ್ರಯಾಣಿಕರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರೆದಿದ್ದು, ಸೇನೆ, ಎನ್‌ಡಿಆರ್‌ಎಫ್‌‍ ಮತ್ತು ಎಸ್‌‍ಡಿಆರ್‌ಎಫ್‌‍ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ರಾಕೇಶ್‌ ಸಿಂಗ್‌ ತಿಳಿಸಿದ್ದಾರೆ. ಕ್ರೂಸ್‌‍ ದೋಣಿಯನ್ನು ನೀರಿನ ಮೂಲದಿಂದ ಹೊರತೆಗೆಯಲು ಹೈಡ್ರಾಲಿಕ್‌ ಕ್ರೇನ್‌ಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಲವಾದ ಗಾಳಿಯಿಂದಾಗಿ ನೀರು ಒಡೆದು ಹೋಯಿತು, ಇದರಿಂದಾಗಿ ಹಡಗಿನಲ್ಲಿದ್ದ ಅನೇಕರು ಎಚ್ಚರಿಕೆ ನೀಡಿ ದೋಣಿಯನ್ನು ದಡಕ್ಕೆ ಹಿಂತಿರುಗಿಸುವಂತೆ ಸಿಬ್ಬಂದಿಯನ್ನು ಕೇಳಿದರು.

ಆದಾಗ್ಯೂ, ಸಿಬ್ಬಂದಿಗೆ ಈ ಕೂಗುಗಳು ಕೇಳಿಸಲಿಲ್ಲ, ಮತ್ತು ದೋಣಿ ಅಲೆಯಿತು ಮತ್ತು ನಂತರ ಪಲ್ಟಿಯಾಯಿತು ಎಂದು ಅವರು ಹೇಳಿದರು, ಕೆಲವು ಸ್ಥಳೀಯರು ಹಗ್ಗದ ಸಹಾಯದಿಂದ ಲೈಫ್‌ ಜಾಕೆಟ್‌ ಧರಿಸಿದ ಕೆಲವು ಪ್ರಯಾಣಿಕರನ್ನು ರಕ್ಷಿಸಿದರು. ಪಿಟಿಐ ವೀಡಿಯೊಗಳೊಂದಿಗೆ ಮಾತನಾಡಿದ ಮಧ್ಯಪ್ರದೇಶ ಪ್ರವಾಸೋದ್ಯಮ ಸಚಿವ ಧರ್ಮೇಂದ್ರ ಭಾವ್‌ ಸಿಂಗ್‌ ಲೋಧಿ, ಕೆಲವು ಪ್ರವಾಸಿಗರು ಇನ್ನೂ ಕಾಣೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಹೇಳಿದರು.

ಜಬಲ್ಪುರದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ನರ್ಮದಾ ನದಿಯ ದಂಡೆಯಲ್ಲಿರುವ ಬರಗಿ ಅಣೆಕಟ್ಟೆಯಲ್ಲಿ ಮಧ್ಯಪ್ರದೇಶ ಪ್ರವಾಸೋದ್ಯಮ ನಿರ್ವಹಿಸುವ ರೆಸಾರ್ಟ್ ಹಲವಾರು ಜಲ ಕ್ರೀಡಾ ಚಟುವಟಿಕೆಗಳನ್ನು ನಿರ್ವಹಿಸುತ್ತದೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಯಾದವ್ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಲು ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್