AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಬಲ್​​ಪುರ: 5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ಮಹಿಳೆ

ಶುಭಾಂಗಿ ಯಾದವ್ ಎಂಬುವವರು ಜಬಲ್ಪುರದಲ್ಲಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಸಾಮಾನ್ಯವಾಗಿ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದೇ ಹೇಳುತ್ತಿದ್ದಾರೆ.

ಜಬಲ್​​ಪುರ: 5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ಮಹಿಳೆ
ಮಗು Image Credit source: India TV
ನಯನಾ ರಾಜೀವ್
|

Updated on: Sep 05, 2025 | 2:39 PM

Share

ಜಬಲ್ಪುರ, ಸೆಪ್ಟೆಂಬರ್ 05: ಶುಭಾಂಗಿ ಯಾದವ್ ಎಂಬುವವರು ಜಬಲ್ಪುರದಲ್ಲಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶು(Baby)ವಿಗೆ ಜನ್ಮ ನೀಡಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಸಾಮಾನ್ಯವಾಗಿ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದೇ ಹೇಳುತ್ತಿದ್ದಾರೆ.

ನವಜಾತ ಶಿಶುವಿನ ಗಾತ್ರವು ದೊಡ್ಡದಾಗಲು ಒಂದು ಕಾರಣವೆಂದರೆ ಗರ್ಭಾವಸ್ಥೆಯಲ್ಲಿ ಶುಭಾಂಗಿ ಸೇವಿಸಿದ ಪೌಷ್ಟಿಕ ಆಹಾರ. ತಾಯಿ ಯಾವುದೇ ವಿಶೇಷ ಆಹಾರವನ್ನು ತಿನ್ನಲಿಲ್ಲ.ಬೇಳೆ, ಅನ್ನ, ರೊಟ್ಟಿ ಮತ್ತು ತರಕಾರಿಗಳನ್ನು ಒಳಗೊಂಡಂತೆ ನಿಯಮಿತ ಊಟವನ್ನು ಸೇವಿಸಿದ್ದರು.ಆದರೆ ಆರೋಗ್ಯಕರ ಜೀವನಶೈಲಿಯು ಸಕಾರಾತ್ಮಕವಾಗಿ ಸಹಾಯ ಮಾಡಿದೆ.

ಅಂತಹ ಸಂದರ್ಭಗಳಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚು ಸವಾಲಿನದಾಗಿದೆ, ಆದರೆ ವೈದ್ಯರು ತಾಯಿ ಮತ್ತು ಮಗುವಿಗೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಶಸ್ತ್ರಚಿಕಿತ್ಸೆಯನ್ನು ತೀರಾ ಎಚ್ಚರಿಕೆಯಿಂದ ಮಾಡಿದ್ದಾರೆ.

ಮತ್ತಷ್ಟು ಓದಿ:  ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು

ಇದು ನಮಗೆ ಸಂತಸದ ಕ್ಷಣ, ಗಣೇಶ ಹಬ್ಬದಂದೇ ಹೆರಿಗೆಯಾಗಿದೆ ಮತ್ತು ಮಗುವಿನ ಜನನವು ತಮ್ಮ ಕುಟುಂಬದಲ್ಲಿ ಜನಿಸಿದ ಗಣೇಶ ದೇವರ ಆಶೀರ್ವಾದ ಎಂದು ಭಾವಿಸುವುದಾಗಿ ಶುಭಾಂಗಿ ಹೇಳಿದ್ದಾರೆ.

ಜುಲೈನಲ್ಲಿ ಇಂದೋರ್‌ನ ಪಿಸಿ ಸೇಥಿ ಸಿವಿಲ್ ಆಸ್ಪತ್ರೆಯಲ್ಲಿ 5.43 ಕಿಲೋಗ್ರಾಂಗಳಷ್ಟು ತೂಕದ ಆರೋಗ್ಯವಂತ ಹೆಣ್ಣು ಮಗು ಜನಿಸಿತ್ತು.ಇದು ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ದಾಖಲಾದ ಅತ್ಯಂತ ಭಾರವಾದ ನವಜಾತ ಶಿಶುವಾಗಿದೆ.ಈ ಜನನವು 2021 ರಲ್ಲಿ ಮಾಂಡ್ಲಾ ಜಿಲ್ಲೆಯಲ್ಲಿ ಜನಿಸಿದ 5.1 ಕೆಜಿ ಮಗುವಿನ ಹಿಂದಿನ ದಾಖಲೆಯನ್ನು ಮೀರಿಸಿದೆ.

ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಮಾಧವ್ ಹಸಾನಿ ಅವರು ವೈದ್ಯಕೀಯ ತಂಡವನ್ನು ಅಭಿನಂದಿಸಿದ್ದರು.ಜನನಿ ಸುರಕ್ಷಾ ಯೋಜನೆಯಂತಹ ಬಲಪಡಿಸಿದ ಸರ್ಕಾರಿ ಆರೋಗ್ಯ ಯೋಜನೆಗಳ ಯಶಸ್ಸನ್ನು ಎತ್ತಿ ತೋರಿಸಿದ್ದರು. ಇದು ಸರ್ಕಾರಿ ಆಸ್ಪತ್ರೆಗಳಲ್ಲಿ ಸುರಕ್ಷಿತ, ಉತ್ತಮ ಗುಣಮಟ್ಟದ ಹೆರಿಗೆ ಆರೈಕೆಯನ್ನು ಪಡೆಯಲು ಉತ್ತಮವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ