Sign In

By signing in or creating an account, you agree with Associated Broadcasting Company's Terms & Conditions and Privacy Policy.

ರ‍್ಯಾಗಿಂಗ್ ಮುಕ್ತ ಕ್ಯಾಂಪಸ್; ಜಾದವ್‌ಪುರ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲಿದೆ ಇಸ್ರೋ ತಂಡ

Jadavpur University: ಮುಂದಿನ ದಿನಗಳಲ್ಲಿ ಜಾದವ್‌ಪುರಕ್ಕೆ ಇಸ್ರೋ ತಂಡ ಬರಲಿದೆ ಎಂದು ಜಾದವ್‌ಪುರ ವಿಶ್ವವಿದ್ಯಾಲಯದ ಉಪಕುಲಪತಿ ಬುದ್ಧದೇವ್ ಸೌ ಶನಿವಾರ ಹೇಳಿದ್ದಾರೆ. ಜಾದವ್‌ಪುರ ಕ್ಯಾಂಪಸ್‌ನ ವಿವಿಧೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜಾದವ್‌ಪುರದ ಉಪಕುಲಪತಿಗಳು ಶೀಘ್ರದಲ್ಲೇ ಕಾರ್ಯ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ರ‍್ಯಾಗಿಂಗ್ ಮುಕ್ತ ಕ್ಯಾಂಪಸ್; ಜಾದವ್‌ಪುರ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲಿದೆ ಇಸ್ರೋ ತಂಡ
ಜಾದವ್‌ಪುರ ವಿಶ್ವವಿದ್ಯಾನಿಲಯ
Follow us
ರಶ್ಮಿ ಕಲ್ಲಕಟ್ಟ
|

Updated on:Aug 26, 2023 | 4:34 PM

ಕೋಲ್ಕತ್ತಾ ಆಗಸ್ಟ್ 26: ಜಾದವ್‌ಪುರ ವಿಶ್ವವಿದ್ಯಾನಿಲಯದ(Jadavpur University) ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ನಿಗೂಢ ಸಾವಿನ ಪ್ರಕರಣದಲ್ಲಿ ರ‍್ಯಾಗಿಂಗ್ (Ragging)  ಚರ್ಚಾ ವಿಷಯವಾಗಿದೆ. ಇವೆಲ್ಲದರ ನಡುವೆ ರ‍್ಯಾಗಿಂಗ್ ಮುಕ್ತ ಕ್ಯಾಂಪಸ್ ನಿರ್ಮಿಸಲು ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಲು ಇಸ್ರೋದ(ISRO) ನಿಯೋಗವು ಜಾದವ್‌ಪುರ ಕ್ಯಾಂಪಸ್‌ಗೆ ಬರಲಿದೆ. ರಾಜ್ಯಪಾಲ ಮತ್ತು ಆಚಾರ್ಯ ಸಿವಿ ಆನಂದ್ ಬೋಸ್ ಅವರು ಎರಡು ದಿನಗಳ ಹಿಂದೆ ಇಸ್ರೋ ಅಧ್ಯಕ್ಷರೊಂದಿಗೆ ಮಾತನಾಡಿದ್ದಾರೆ. ರ‍್ಯಾಗಿಂಗ್ ನಿರ್ಮೂಲನೆಗೆ ಇಸ್ರೋದಿಂದ ತಾಂತ್ರಿಕ ನೆರವು ಪರಿಗಣನೆಯಲ್ಲಿದೆ. ರಾಜ್ಯಪಾಲರು ಇಸ್ರೋ ಜೊತೆ ಚರ್ಚಿಸುವ ಜವಾಬ್ದಾರಿಯನ್ನು ಜಾದವ್‌ಪುರ ವಿಶ್ವವಿದ್ಯಾಲಯದ ಉಪಕುಲಪತಿ ಬುದ್ಧದೇವ್ ಸೌಕ್ ಅವರಿಗೆ ವಹಿಸಿದ್ದಾರೆ. ಉಪಕುಲಪತಿಗಳು ಶುಕ್ರವಾರ ಇಸ್ರೋ ಜೊತೆ ಸಭೆಯನ್ನೂ ನಡೆಸಿದರು. ಅಲ್ಲಿ ವಿವಿಧ ತಾಂತ್ರಿಕ ಅವಕಾಶಗಳ ಕುರಿತು ಚರ್ಚಿಸಿದರು.

ಮುಂದಿನ ದಿನಗಳಲ್ಲಿ ಜಾದವ್‌ಪುರಕ್ಕೆ ಇಸ್ರೋ ತಂಡ ಬರಲಿದೆ ಎಂದು ಜಾದವ್‌ಪುರ ವಿಶ್ವವಿದ್ಯಾಲಯದ ಉಪಕುಲಪತಿ ಬುದ್ಧದೇವ್ ಸೌ ಶನಿವಾರ ಹೇಳಿದ್ದಾರೆ. ಜಾದವ್‌ಪುರ ಕ್ಯಾಂಪಸ್‌ನ ವಿವಿಧೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜಾದವ್‌ಪುರದ ಉಪಕುಲಪತಿಗಳು ಶೀಘ್ರದಲ್ಲೇ ಕಾರ್ಯ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಸದ್ಯ ಹಾಸ್ಟೆಲ್ ಗೇಟ್ ಹಾಗೂ ಮುಖ್ಯ ದ್ವಾರದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆ ವೇಳೆ ಉಪಕುಲಪತಿಗಳು ಇಸ್ರೋ ತಂಡ ಇಲ್ಲಿಗೆ ಬರಬೇಕಿತ್ತು. ವಿಶ್ವವಿದ್ಯಾನಿಲಯದ ಕಣ್ಗಾವಲು ಮತ್ತು ಭದ್ರತೆಗೆ ಸಂಬಂಧಿಸಿದ ತಾಂತ್ರಿಕ ಅಂಶಗಳನ್ನು ಇಸ್ರೋ ತಂಡವು ಪರಿಶೀಲಿಸುತ್ತದೆ. ಯಾವುದೇ ಹೆಚ್ಚಿನ ತಾಂತ್ರಿಕ ಸೌಲಭ್ಯಗಳ ಅಗತ್ಯವಿದ್ದರೆ, ಇಸ್ರೋ ತಂಡವು ಅದೇ ಸಲಹೆಯನ್ನು ನೀಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ: PM Modi in ISRO, Bengaluru: ವಿಜ್ಞಾನಿಗಳನ್ನು ಅಭಿನಂದಿಸುವ ಮೊದಲು ಪ್ರಧಾನಿ ಮೋದಿ ‘ಜೈ ವಿಗ್ಯಾನ್ ಜೈ ಅನುಸಂಧಾನ’ ಘೋಷವಾಕ್ಯ ದೇಶಕ್ಕೆ ನೀಡಿದರು!

ಉಪಕುಲಪತಿಗಳ ಪ್ರಕಾರ, ವಿಶ್ವವಿದ್ಯಾಲಯದಲ್ಲಿ 15 ಸಾವಿರ ಮಂದಿ ಇದ್ದಾರೆ. ಹೀಗಿರುವಾಗ ಇಷ್ಟು ದೊಡ್ಡ ಪ್ರಮಾಣದ ಜನರಿಗೆ ಸೂಕ್ತ ತಂತ್ರಜ್ಞಾನ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ‘ಮುಖ ಗುರುತಿಸುವಿಕೆ, ವಸ್ತು ಗುರುತಿಸುವಿಕೆ ಮುಂತಾದ ವಿಷಯಗಳು ಕೃತಕ ಬುದ್ಧಿಮತ್ತೆಯ ದೊಡ್ಡ ಡೇಟಾ ವಿಶ್ಲೇಷಣೆಯ ಅಡಿಯಲ್ಲಿ ಬರುತ್ತವೆ. ಈ ದೊಡ್ಡ ಡೇಟಾ ವಿಶ್ಲೇಷಣೆ ಪ್ರಕ್ರಿಯೆಯು ಇನ್ನೂ ಸಂಶೋಧನೆಯಲ್ಲಿದೆ. ಇದು ಎಷ್ಟರಮಟ್ಟಿಗೆ ಅನುಷ್ಠಾನಕ್ಕೆ ಬರಬಹುದು ಎಂಬುದನ್ನು ಕಾದು ನೋಡಬೇಕಿದೆ.’ಆದರೆ, ಇಸ್ರೋ ತಂಡ ಯಾವಾಗ ಬರಲಿದೆ ಎಂಬ ಬಗ್ಗೆ ಉಪಕುಲಪತಿಗಳು ನಿರ್ದಿಷ್ಟವಾಗಿ ಏನನ್ನೂ ಹೇಳಿಲ್ಲ. ಈ ವಿಚಾರವನ್ನು ರಾಜಭವನ ನೋಡುತ್ತಿದೆ ಎಂದಷ್ಟೇ ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Sat, 26 August 23

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?