Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಖರೀದಿಗಾಗಿ ಗ್ಲೋಬಲ್ ಟೆಂಡರ್ ವಿಫಲ: ಒಗ್ಗೂಡಲು ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ

ರಾಜ್ಯಗಳಲ್ಲಿ ವ್ಯಾಕ್ಸಿನ್ ವಿಷಯದಲ್ಲಿ ಉಂಟಾಗಿರೋ ತೊಂದರೆಯನ್ನು ಕೇಂದ್ರದ ಗಮನಕ್ಕೆ ತರಲು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಒಂದೇ ಧ್ವನಿ ಇರಬೇಕೆಂದು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಪತ್ರದಲ್ಲಿ ತಿಳಿಸಿದ್ದಾರೆ.

ಕೊರೊನಾ ಲಸಿಕೆ ಖರೀದಿಗಾಗಿ ಗ್ಲೋಬಲ್ ಟೆಂಡರ್ ವಿಫಲ:  ಒಗ್ಗೂಡಲು ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ
ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ
Follow us
TV9 Web
| Updated By: ಆಯೇಷಾ ಬಾನು

Updated on: Jun 04, 2021 | 1:42 PM

ವಿಜಯವಾಡ: ವ್ಯಾಕ್ಸಿನ್ ಗ್ಲೋಬಲ್ ಟೆಂಡರ್ ವ್ಯವಹಾರದ ಕುರಿತು ದೇಶದ ವಿವಿಧ ರಾಜ್ಯಗಳ‌ ಮುಖ್ಯಮಂತ್ರಿಗಳಿಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಪತ್ರ ಬರೆದಿದ್ದಾರೆ. ಲಸಿಕೆ ಪೂರೈಕೆಯ ಬಗ್ಗೆ ಆಂಧ್ರದ ಜಾಗತಿಕ ಟೆಂಡರ್ ಬಗ್ಗೆ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ, ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ದೇಶದ ರಾಜ್ಯದ ಸಿಎಂಗಳಿಗೆ ಪತ್ರ ಬರೆದಿದ್ದಾರೆ.

ರಾಜ್ಯಗಳಲ್ಲಿ ವ್ಯಾಕ್ಸಿನ್ ವಿಷಯದಲ್ಲಿ ಉಂಟಾಗಿರೋ ತೊಂದರೆಯನ್ನು ಕೇಂದ್ರದ ಗಮನಕ್ಕೆ ತರಲು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಒಂದೇ ಧ್ವನಿ ಇರಬೇಕೆಂದು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಪತ್ರದಲ್ಲಿ ತಿಳಿಸಿದ್ದಾರೆ. ಹಾಗೂ ಎಲ್ಲಾ ರಾಜ್ಯಗಳು ಒಂದಾಗಿ‌ ಧ್ವನಿ ಎತ್ತಲು ಸಲಹೆ ನೀಡಿದ್ದಾರೆ. ಗ್ಲೋಬಲ್ ಟೆಂಡರ್ ಅನುಮೋದನೆ ಕೇಂದ್ರದ ಕೈಯಲ್ಲಿ ಇದೆ. ವ್ಯಾಕ್ಸಿನ್ಗಾಗಿ ಗ್ಲೋಬಲ್ ಟೆಂಡರ್ ಕರೆದರೂ ಒಂದೇ ಒಂದು ಟೆಂಡರ್ ದಾಖಲು ಆಗಿಲ್ಲ. ವ್ಯಾಕ್ಸಿನ್ ಲಭ್ಯತೆ ವಿಷಯದಲ್ಲಿ ಕೇಂದ್ರದ ವಿರುದ್ದ ರಾಜ್ಯಗಳು ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಪತ್ರದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕೈಬಿಟ್ಟ ಕರ್ನಾಟಕ ಸರ್ಕಾರ: ಮುಂದೇನು?

ಲಸಿಕೆ ಸರಬರಾಜಿಗೆ ಆಂಧ್ರ ಸರ್ಕಾರ ನಿಗದಿಪಡಿಸಿದ ಜಾಗತಿಕ ಟೆಂಡರ್‌ಗಳ ಗಡುವು ಅವಧಿ ಗುರುವಾರ ಸಂಜೆ 5 ಗಂಟೆಗೆ ಕೊನೆಗೊಂಡಿದ್ದು, ಯಾವುದೇ ಲಸಿಕೆ ಉತ್ಪಾದಕರು ಟೆಂಡರ್ ನೋಟಿಸ್‌ಗೆ ಸ್ಪಂದಿಸಿಲ್ಲ. ಲಸಿಕೆಗಳ ಖರೀದಿಗೆ ಸಂಬಂಧಿಸಿದಂತೆ ನಮ್ಮ (ರಾಜ್ಯಗಳ) ನಿಯಂತ್ರಣದಲ್ಲಿ ಪರಿಸ್ಥಿತಿ ಇಲ್ಲ. ವ್ಯಾಕ್ಸಿನ್ ಡ್ರೈವ್ನಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಕೆಲವು ರಾಜ್ಯಗಳಿಗೆ ಲಸಿಕೆ ಬೇಕಾದಷ್ಟು ಪ್ರಮಾಣದಲ್ಲಿ ಸಿಗುತ್ತಿಲ್ಲ.

ವ್ಯಾಕ್ಸಿನ್ ಗ್ಲೋಬಲ್ ಟೆಂಡರ್ ಕರೆ ನೀಡಿದ ಮೊದಲ ರಾಜ್ಯ ಆಂಧ್ರ ಪ್ರದೇಶ. ಹೀಗಾಗಿ ಮುಖ್ಯಮಂತ್ರಿಯಾದ ನಾನು ಹೇಳುವುದೆಂದರೆ ನಾವೆಲ್ಲಾ ಒಂದೇ ಧ್ವನಿ ಎತ್ತಬೇಕು. ವ್ಯಾಕ್ಸಿನೇಷನ್ ಡ್ರೈವ್ನ ಜವಾಬ್ದಾರಿಯನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳಲು ಒತ್ತಾಯಿಸಬೇಕು. ಈ ಮೊದಲು ನಡೆದಂತೆ ಈ ಬಾರಿಯೂ ನಡೆಯಬೇಕು. ಮತ್ತು ಆರೋಗ್ಯ ಸಿಬ್ಬಂದಿಗೆ ಸರಿಯಾದ ಸಮಯದಲ್ಲಿ ಲಸಿಕೆ ಸಿಗಬೇಕು ಎಂದು ಜಗನ್ ಮೋಹನ್ ರೆಡ್ಡಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Andhra Pradesh Local Body Election Results: ಆಂಧ್ರ ನಗರಾಡಳಿತ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಜಗನ್ ಮೋಹನ್ ರೆಡ್ಡಿಯ ವೈಎಸ್​ಆರ್​ಸಿಪಿ ಪಕ್ಷ

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ