AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ನಡುರಸ್ತೆಯಲ್ಲಿ ಜಗನ್​ ರೆಡ್ಡಿ ಪಕ್ಷದ ನಾಯಕನನ್ನು ಕೊಚ್ಚಿ ಕೊಂದ ದುಷ್ಕರ್ಮಿ

ಆಂಧ್ರಪ್ರದೇಶದ ನಡುರಸ್ತೆಯಲ್ಲಿ ವೈಎಸ್​ಆರ್​ ಕಾಂಗ್ರೆಸ್​ ನಾಯಕನ ಶವ ಪತ್ತೆಯಾಗಿದೆ. ಯುವಕನೊಬ್ಬ ರಶೀದ್​ ಎಂಬಾತನನ್ನು ಮಚ್ಚಿನಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆಂಧ್ರಪ್ರದೇಶ: ನಡುರಸ್ತೆಯಲ್ಲಿ ಜಗನ್​ ರೆಡ್ಡಿ ಪಕ್ಷದ ನಾಯಕನನ್ನು ಕೊಚ್ಚಿ ಕೊಂದ ದುಷ್ಕರ್ಮಿ
ನಯನಾ ರಾಜೀವ್
|

Updated on: Jul 18, 2024 | 2:33 PM

Share

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಅವರ ವೈಎಸ್​ಆರ್​ ಕಾಂಗ್ರೆಸ್​ನ ನಾಯಕನೊಬ್ಬನನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.

ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ರಶೀದ್ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿದೆ, ಎರಡೂ ಕೈಗಳು ತುಂಡಾಗಿದ್ದು, ಕುತ್ತಿಗೆಗೆ ಆಳವಾದ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಲ್ನಾಡು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕಂಚಿ ಶ್ರೀನಿವಾಸ ರಾವ್ ಇಂಡಿಯಾ ಟುಡೇ ಜತೆ ಮಾತನಾಡಿದ್ದು, ವೈಯಕ್ತಿಕ ದ್ವೇಷವೇ ಈ ಭೀಕರ ಹತ್ಯೆಯ ಹಿಂದಿನ ಉದ್ದೇಶ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.

ಮತ್ತಷ್ಟು ಓದಿ: ತ್ರಿವಳಿ ಕೊಲೆ: ಪ್ರೇಯಸಿ, ಆಕೆಯ ಸಹೋದರಿ, ತಂದೆಯ ಕತ್ತು ಸೀಳಿದ ಹುಚ್ಚು ಪ್ರೇಮಿ, ತಾಯಿ ಬಚಾವ್

ಈ ಘಟನೆಯಲ್ಲಿ ಯಾವುದೇ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ಆದರೆ ಜನರು ಈ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಳ್ಳಬೇಕು ಮತ್ತು ರಾಜ್ಯದಲ್ಲಿ ಇಂತಹ ಹಿಂಸಾಚಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಈ ಪ್ರದೇಶದಲ್ಲಿ ಹೆಚ್ಚು ಜನ ಒಂದೆಡೆ ಸೇರದಂತೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ. ಉದ್ವಿಗ್ನತೆಯನ್ನು ಉಂಟುಮಾಡುವ ಅಥವಾ ಪ್ರದೇಶದ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ