AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗನ್​​​​ಮೋಹನ್​​​ ರೆಡ್ಡಿ ಪಕ್ಷದ ಕಾರ್ಯಕರ್ತರಿಂದ ಚಂದ್ರಬಾಬು ನಾಯ್ಡು ಪಕ್ಷದ ಮುಖಂಡನ ಬರ್ಬರ ಹತ್ಯೆ

ಆಂಧ್ರಪ್ರದೇಶದ ರಾಜಕೀಯದಲ್ಲಿ ಭಾರೀ ತಲ್ಲಣ ಉಂಟಾಗಿದೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಪಕ್ಷ ಮುಖಂಡನನ್ನು ಜಗನ್​​​​ಮೋಹನ್​​​ ರೆಡ್ಡಿ ಪಕ್ಷದ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ. ಇದೀಗ ಈ ಬಗ್ಗೆ ಪೊಲೀಸ್​​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಜಗನ್​​​​ಮೋಹನ್​​​ ರೆಡ್ಡಿ ಪಕ್ಷದ ಕಾರ್ಯಕರ್ತರಿಂದ ಚಂದ್ರಬಾಬು ನಾಯ್ಡು ಪಕ್ಷದ ಮುಖಂಡನ ಬರ್ಬರ ಹತ್ಯೆ
ಅಕ್ಷಯ್​ ಪಲ್ಲಮಜಲು​​
|

Updated on:Jun 10, 2024 | 4:43 PM

Share

ಕರ್ನೂಲ್, ಜೂ.10: ಆಂಧ್ರಪ್ರದೇಶ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆ ನಂತರ ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ನಡುವೆ ರಾಜಕೀಯ ದ್ವೇಷಕ್ಕೆ ಕಾರಣವಾಗಿದೆ. ಇದೀಗ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ಮಂಡಲದ ಬೊಮ್ಮಿರೆಡ್ಡಿಪಲ್ಲೆ ಗ್ರಾಮದಲ್ಲಿ ಭಾನುವಾರ (ಜೂ.9) ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷದ (TDP) ಬೆಂಬಲಿಗನನ್ನು ಜಗನ್​​​​ಮಹೋನ್​​​ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಪಕ್ಷದ ಕಾರ್ಯಕರ್ತರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತರನ್ನು ಗೌರಿನಾಥ್ ಚೌಧರಿ ಎಂದು ಗುರುತಿಸಲಾಗಿದೆ.

ಬೊಮ್ಮಿರೆಡ್ಡಿಪಲ್ಲೆ ಗ್ರಾಮ ಈ ಘಟನೆ ನಡೆದಿದೆ. ಈ ಹತ್ಯೆಯನ್ನು ಮಾಡಿದವರು ವೈಎಸ್‌ಆರ್‌ಸಿಪಿ ಪಕ್ಷದ ಪಮಯ್ಯ ಮತ್ತು ರಾಮಕೃಷ್ಣ ಎಂದು ಹೇಳಲಾಗಿದೆ. ಕುಡಗೋಲು ಮತ್ತು ಇತರ ಮಾರಕಾಯುಧಗಳಿಂದ ಸಂಜೆಯ ವೇಳೆ ಚೌಧರಿ ಮೇಲೆ ದಾಳಿ ಮಾಡಿದ್ದಾರೆ. ಟಿಡಿಪಿ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಫಲಿತಾಂಶದ ದಿನದಂದು ಈ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ನಂತರ ಈ ಉದ್ವಿಗ್ನತೆ ಉತ್ತುಂಗಕ್ಕೇರಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು

ಇನ್ನು ಕೊಲೆಗಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತೆಲುಗುದೇಶಂ ಕಾರ್ಯಕರ್ತರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಪೊಲೀಸರು ಇನ್ನು ಆರೋಪಿಗಳ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಜಿಲ್ಲಾ ಎಸ್ಪಿ ಜಿ.ಕೃಷ್ಣಕಾಂತ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ವೆಲ್ದುರ್ತಿ ವೃತ್ತ ನಿರೀಕ್ಷಕರು ವಿವರಗಳನ್ನು ಸಂಗ್ರಹಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:42 pm, Mon, 10 June 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ