AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagannath Rath Yatra 2023: ಪುರಿಯಲ್ಲಿ ಜಗನ್ನಾಥ ರಥಯಾತ್ರೆ ಆರಂಭ; ಭಕ್ತರಿಗೆ ಶುಭ ಹಾರೈಸಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ

ಪುರಿಯಲ್ಲಿ ಇಂದಿನಿಂದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಪ್ರಾರಂಭವಾಗಿದೆ. ಭಕ್ತರಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.

Jagannath Rath Yatra 2023: ಪುರಿಯಲ್ಲಿ ಜಗನ್ನಾಥ ರಥಯಾತ್ರೆ ಆರಂಭ; ಭಕ್ತರಿಗೆ ಶುಭ ಹಾರೈಸಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ
ಸಾಂದರ್ಭಿಕ ಚತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jun 20, 2023 | 6:59 PM

Share

ಪುರಿಯಲ್ಲಿ ಇಂದಿನಿಂದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ (Jagannath Rath Yatra 2023) ಪ್ರಾರಂಭವಾಗಿದೆ. ಜಗನ್ನಾಥ, ಬಲಭದ್ರ ಮತ್ತು ದೇವಿ ಸುಭದ್ರಾ ದೇವಿಯನ್ನು ವೈದಿಕ ವಿಧಿವಿಧಾನಗಳ ಮೂಲಕ ಯಾತ್ರೆ ನಡೆಯಲಿದ್ದು, ಅಲ್ಲಿ ಸೇರಿರುವ ಭಕ್ತರು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಪಹಂಡಿ, ದೇವತೆಗಳನ್ನು ರಥಗಳಿಗೆ ಕರೆದೊಯ್ಯುವ ಧಾರ್ಮಿಕ ಮೆರವಣಿಗೆ ಇಂದು ಬೆಳಿಗ್ಗೆ ಪ್ರಾರಂಭವಾಯಿತು. ಭಕ್ತರು ಮೂರ್ತಿಯನ್ನು ಶಾಸ್ತ್ರೋಕ್ತ ಮೆರವಣಿಗೆ ಮೂಲಕ ದೇವಸ್ಥಾನದಿಂದ ಹೊರಗೆ ತಂದು ರಥದಲ್ಲಿ ಕೂರಿಸಿದರು.  ಬಲಭದ್ರ ಮತ್ತು ದೇವಿ ಸುಭದ್ರೆಯ ಯಾತ್ರೆ ನಂತರ ಜಗನ್ನಾಥನ ಯಾತ್ರೆ ನಡೆಯುತ್ತಿದೆ. ಸಂಜೆ 4 ಗಂಟೆ ಸುಮಾರಿಗೆ ಭಕ್ತರು ರಥಗಳನ್ನು ಎಳೆಯಲು ಪ್ರಾರಂಭಿಸಿದ್ದಾರೆ.

ಪುರಿ ದೇವಸ್ಥಾನದಿಂದ ಆರಂಭವಾಗುವ ಯಾತ್ರೆಯು ಸುಮಾರು 3 ಕಿಲೋಮೀಟರ್ ದೂರದವರೆಗೆ ನಡೆದು ಶ್ರೀ ಗುಂಡಿಚಾ ದೇವಸ್ಥಾನದಲ್ಲಿ ಮುಕ್ತಾಯಗೊಳ್ಳಲಿದೆ. ಬಲಭದ್ರ ದೇವರ ತಾಳಧ್ವಜವು ಪುರಿ ಭವ್ಯ ರಸ್ತೆಯಲ್ಲಿ ಸಾಗಲಿದೆ, ಇದರ ಮೊದಲು ಸುಭದ್ರಾದೇವಿಯ ದರ್ಪದಾಳವು ಸಾಗಲಿದೆ. ಮೂರು ರಥಗಳಲ್ಲಿ ದೊಡ್ಡದಾದ ಜಗನ್ನಾಥನ ನಂದಿಘೋಷವು ಎರಡು ರಥಗಳ ನಂತರ ಸಾಗಲಿದೆ. ಸೂರ್ಯಾಸ್ತದ ಮೊದಲು ರಥಗಳು ಗುಂಡಿಚಾ ದೇವಸ್ಥಾನವನ್ನು ತಲುಪಲಿದೆ. ಜಗನ್ನಾಥ ಪುರಿ ದೇವಸ್ಥಾನದ ದೇವರು ಮತ್ತು ದೇವತೆಯನ್ನು ನೋಡಲು ಎಲ್ಲಾ ಧರ್ಮದ ಭಕ್ತರಿಗೆ ಅವಕಾಶವನ್ನು ನೀಡುವ ಏಕೈಕ ದಿನ ಇದ್ದಾಗಿದೆ. ಬೇರೆ ಬೇರೆ ದೇಶಗಳಿಂದಲ್ಲೂ ಭಕ್ತರು ಇಲ್ಲಿಗೆ ಬರುತ್ತಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಥಯಾತ್ರೆಗೆ  ಹಾಗೂ ಭಕ್ತರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಭಕ್ತಿ ಮತ್ತು ಸಮರ್ಪಣೆಯ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಕ್ತರಿಗೆ ಶುಭಾಶಯ ಕೋರಿದ್ದಾರೆ. ಜಗನ್ನಾಥನ ದಿವ್ಯ ಪ್ರಯಾಣವು ಜನರ ಜೀವನದಲ್ಲಿ ಆರೋಗ್ಯ, ಸಂತೋಷ ಮತ್ತು ಆಧ್ಯಾತ್ಮಿಕ ಸಮೃದ್ಧಿಯನ್ನು ತುಂಬಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:Puri Sri Jagannath Rath Yatra 2022: ಪ್ರಖ್ಯಾತ ಭಗವಾನ್ ಜಗನ್ನಾಥ ರಥಯಾತ್ರೆಯ ಭಾವಚಿತ್ರಗಳು ಇಲ್ಲಿವೆ

ಗೃಹ ಸಚಿವ ಅಮಿತ್ ಶಾ ಇಂದು ಅಹಮದಾಬಾದ್‌ನ ಜಗನ್ನಾಥ ದೇವಸ್ಥಾನದಲ್ಲಿ ಮಂಗಳ ಆರತಿಯಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದರು. ಪ್ರತಿ ವರ್ಷ ಇಲ್ಲಿನ ದೇವರ ದರ್ಶನದ ಅನುಭವ ದಿವ್ಯ ಮತ್ತು ಅವಿಸ್ಮರಣೀಯ. ಎಲ್ಲರಿಗೂ ಮಹಾಪ್ರಭುಗಳ ಆಶೀರ್ವಾದ ಸಿಗಲಿ ಎಂದು ಹಾರೈಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Tue, 20 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ