ಮಾಜಿ ಶಾಸಕರ ಸವಲತ್ತಿಗೆ ಅರ್ಜಿ ಸಲ್ಲಿಸಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್

ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಇದೀಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ.ಅವರು 1993 ರಿಂದ 1998 ರವರೆಗೆ ಕಿಶನ್‌ಗಢ ಸ್ಥಾನದಿಂದ ಶಾಸಕರಾಗಿದ್ದ ರಾಜಸ್ಥಾನ ವಿಧಾನಸಭೆಯಲ್ಲಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಮೂಲಗಳು ಮತ್ತು ಮಾಧ್ಯಮ ವರದಿಗಳಿಂದ ಬಂದ ಮಾಹಿತಿಯ ಪ್ರಕಾರ, ಅವರು ವಿಧಾನಸಭೆ ಸಚಿವಾಲಯದಲ್ಲಿ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ, ಅದರ ಮೇಲೆ ಅನುಮೋದನೆ ಪ್ರಕ್ರಿಯೆ ಪ್ರಾರಂಭವಾಗಿದೆ

ಮಾಜಿ ಶಾಸಕರ ಸವಲತ್ತಿಗೆ ಅರ್ಜಿ ಸಲ್ಲಿಸಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್
ಜಗದೀಪ್ ಧನ್ಖರ್

Updated on: Aug 31, 2025 | 9:06 AM

ನವದೆಹಲಿ, ಆಗಸ್ಟ್​ 31: ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್(Jagdeep Dhankhar) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಇದೀಗ  ಮಾಜಿ ಶಾಸಕರ ಸವಲತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರು 1993 ರಿಂದ 1998 ರವರೆಗೆ ಕಿಶನ್‌ಗಢ ಸ್ಥಾನದಿಂದ ಶಾಸಕರಾಗಿದ್ದ ರಾಜಸ್ಥಾನ ವಿಧಾನಸಭೆಯಲ್ಲಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ, ಅವರು ವಿಧಾನಸಭೆ ಸಚಿವಾಲಯದಲ್ಲಿ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ, ಅದರ ಮೇಲೆ ಅನುಮೋದನೆ ಪ್ರಕ್ರಿಯೆ ಪ್ರಾರಂಭವಾಗಿದೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ, ಅವರು ಕನಿಷ್ಠ 42 ಸಾವಿರ ರೂ. ಪಿಂಚಣಿ ಪಡೆಯುತ್ತಾರೆ. ಇದರ ಜೊತೆಗೆ, ಮಾಜಿ ಶಾಸಕರಿಗೆ ನೀಡಲಾಗುವ ಸೌಲಭ್ಯಗಳನ್ನು ಸಹ ಅವರು ಪಡೆಯುತ್ತಾರೆ.

ಪಶ್ಚಿಮ ಬಂಗಾಳದ ರಾಜ್ಯಪಾಲರಾಗುವ ಮೊದಲು, ಜಗದೀಪ್ ಧನ್ಖರ್ 1989 ರಿಂದ 1991 ರವರೆಗೆ ರಾಜಸ್ಥಾನದ ಜುನ್ಜುನು ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದರು. ಚಂದ್ರಶೇಖರ್ ಅವರ ಸರ್ಕಾರದಲ್ಲಿ ಅವರು ಕೇಂದ್ರ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರ ಜವಾಬ್ದಾರಿಯನ್ನು ಸಹ ಪಡೆದರು. 2019 ರಿಂದ 2022 ರವರೆಗೆ ಧನ್ಖರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು.

ಈ ಅವಧಿಯಲ್ಲಿ ಅವರ ಅಧಿಕಾರಾವಧಿಯು ಸುದ್ದಿಯಲ್ಲಿ ಉಳಿಯಿತು. ಮಮತಾ ಬ್ಯಾನರ್ಜಿ ಅವರ ಸರ್ಕಾರದೊಂದಿಗೆ ರಾಜಭವನವು ಘರ್ಷಣೆಯನ್ನು ಎದುರಿಸುತ್ತಿದೆ ಎಂಬ ವರದಿಗಳು ಹೆಚ್ಚಾಗಿ ಬರುತ್ತಿದ್ದವು. ಇದರ ನಂತರ, ಕೇಂದ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ಧನ್ಖರ್ ಅವರನ್ನು ಉಪ ರಾಷ್ಟ್ರಪತಿಯನ್ನಾಗಿ ಮಾಡಿತು. ಅವರು 2022-25ರ ಅವಧಿಯಲ್ಲಿ ಈ ಹುದ್ದೆಯನ್ನು ಅಲಂಕರಿಸಿದ್ದರು.

ಮತ್ತಷ್ಟು ಓದಿ: ಉಪರಾಷ್ಟ್ರಪತಿ ಜಗದೀಪ್ ಧನಖರ್ ರಾಜೀನಾಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ

ಜಗದೀಪ್ ಧಂಖರ್ ಇತ್ತೀಚೆಗೆ ಆರೋಗ್ಯಕ್ಕೆ ಸಂಬಂಧಿಸಿದ ಕಾರಣಗಳನ್ನು ನೀಡಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ರಾಜೀನಾಮೆ ನೀಡಿದ ನಂತರ, ಧನ್ಖರ್ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಅಥವಾ ಬೇರೆ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ಅವರ ಯಾವುದೇ ಹೇಳಿಕೆಗಳನ್ನೂ ನೀಡಿಲ್ಲ.

ಕಳೆದ ತಿಂಗಳು ಹಠಾತ್ತನೆ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನ್ಖರ್, ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುವುದರ ಜೊತೆಗೆ ನಿಯಮಿತವಾಗಿ ಯೋಗಾಭ್ಯಾಸ ಮತ್ತು ಟೇಬಲ್ ಟೆನಿಸ್ ಆಡುತ್ತಿದ್ದಾರೆ.ಜುಲೈ 21 ರಂದು ಹಠಾತ್ತನೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 9 ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ