AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ

Covid 19: 2004ರಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಿಹಾರದ ಸಂಸದರಾಗಿದ್ದ ಮೊಹ್ಮದ್ ಶಹಾಬುದ್ದೀನ್​ ಮತ್ತು ಅವರ ಸಹಚರರಿಗೆ 2015ರ ಡಿಸೆಂಬರ್ 5ರಂದು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 2018ರ ಫೆಬ್ರವರಿ 15ರಂದು ಸುಪ್ರೀಂಕೋರ್ಟ್​ನ ಸೂಚನೆ ಮೇರೆಗೆ ಅವರನ್ನು ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗಿತ್ತು.

ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ
ಬಿಹಾರದ ಮಾಜಿ ಸಂಸದ ಶಹಾಬುದ್ದೀನ್
guruganesh bhat
|

Updated on: May 01, 2021 | 4:42 PM

Share

ದೆಹಲಿ: ಆರ್​ಜೆಡಿಯ ಮಾಜಿ ಸಂಸದ, ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನರಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕಳೆದ ಏಪ್ರಿಲ್ 20ರಂದು ದೆಹಲಿಯ ದೀನ್​ದಯಾಳ್​ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊವಿಡ್ ಇರುವುದು ಬಹಿರಂಗವಾಗಿತ್ತು. ಚಿಕಿತ್ಸೆಯ ನಂತರವೂ ಗುಣಮುಖರಾಗದ ಮೊಹಮ್ಮದ್ ಶಹಾಬುದ್ದೀನ್​ರನ್ನು ಮೂರು ದಿನಗಳಿಂದ ಐಸಿಯುವಿನಲ್ಲಿ ಇರಿಸಲಾಗಿತ್ತು.

ಕಳೆದ ವಾರವಷ್ಟೇ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಮತ್ತು ಜೈಲಿನ ಅಧಿಕಾರಿಗಳಿಗೆ ಮಾಜಿ ಸಂಸದ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಮೊಹಮ್ಮದ್ ಶಹಾಬುದ್ದೀನ್​ರಿಗೆ ಅಗತ್ಯ ವೈದ್ಯಕೀಯ ಸೌಲಭ್ಯವನ್ನು ಒದಗಿಸುವಂತೆ ಸೂಚಿಸಿತ್ತು.

2004ರಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಿಹಾರದ ಸಂಸದರಾಗಿದ್ದ ಮೊಹ್ಮದ್ ಶಹಾಬುದ್ದೀನ್​ ಮತ್ತು ಅವರ ಸಹಚರರಿಗೆ 2015ರ ಡಿಸೆಂಬರ್ 5ರಂದು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 2018ರ ಫೆಬ್ರವರಿ 15ರಂದು ಸುಪ್ರೀಂಕೋರ್ಟ್​ನ ಸೂಚನೆ ಮೇರೆಗೆ ಅವರನ್ನು ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗಿತ್ತು.

ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪಕ್ಕೆ ತಿರುಗಿದ್ದು ಪರಿಸ್ಥಿತಿ ಬಿಗಡಾಯಿಸಿದೆ. ಮೊದಲ ಅಲೆಯ ವೇಳೆಯಲ್ಲಿ ಉಳಿದ ದೇಶಗಳು ಹುಬ್ಬೇರಿಸುವಂತೆ ಪರಿಸ್ಥಿತಿಯನ್ನು ಎದುರಿಸಿದ್ದ ಭಾರತವೀಗ ದಿನವೊಂದರಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿದ ದೇಶ ಎಂದು ಗುರುತಿಸಿಕೊಂಡಿದೆ. ನಿನ್ನೆ (ಏಪ್ರಿಲ್ 30) ರಾತ್ರಿ 11 ಗಂಟೆಯ ಅಂಕಿ ಅಂಶಗಳ ಪ್ರಕಾರ ಕಳೆದ 24 ತಾಸಿನಲ್ಲಿ ಭಾರತದಲ್ಲಿ 4,08,323 ಕೊರೊನಾ ಪಾಸಿಟಿವ್ ಪ್ರಕರಣಗಳು ಹೊಸದಾಗಿ ಕಾಣಿಸಿಕೊಂಡಿದ್ದು, ಇದುವರೆಗೆ ಒಂದೇ ದಿನದಲ್ಲಿ 4 ಲಕ್ಷಕ್ಕೂ ಅಧಿಕ ಪ್ರಕರಣಗಳಿಗೆ ಸಾಕ್ಷಿಯಾದ ಏಕೈಕ ದೇಶವಾಗಿದೆ.

ಏಪ್ರಿಲ್ 28ರ ತನಕ ದಿನಕ್ಕೆ ಸರಾಸರಿ 3.49 ಲಕ್ಷ ಪ್ರಕರಣಗಳು ಭಾರತದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೀಗ 4 ಲಕ್ಷದ ಗಡಿ ದಾಟುವ ಮೂಲಕ ಅಪಾಯಕಾರಿ ಬೆಳವಣಿಗೆ ತೋರಿಸಿದೆ. ಪ್ರತಿನಿತ್ಯ 52,579 ಹೊಸ ಪ್ರಕರಣಗಳೊಂದಿಗೆ ಅಮೆರಿಕಾ ಎರಡನೇ ಸ್ಥಾನ, 27,250 ಪ್ರಕರಣಗಳೊಂದಿಗೆ ಫ್ರಾನ್ಸ್ ಮೂರನೇ ಸ್ಥಾನ, 20,788 ಪ್ರಕರಣಗಳೊಂದಿಗೆ ಜರ್ಮನಿ ನಾಲ್ಕನೇ ಸ್ಥಾನ, 7,980 ಪ್ರಕರಣಗಳೊಂದಿಗೆ ಕೆನಡಾ ಐದನೇ ಸ್ಥಾನದಲ್ಲಿದೆ.

ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ಭಾರತ ತೀರಾ ಅಪಾಯಕಾರಿ ಸನ್ನಿವೇಶವನ್ನು ಎದುರಿಸುತ್ತಿದ್ದು ಪ್ರತಿ ನಿಮಿಷಕ್ಕೆ ಸರಾಸರಿ 2 ಸಾವು ಹಾಗೂ 270 ಹೊಸ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿದೆ. ಅಂದರೆ ಪ್ರತಿ ಸೆಕೆಂಡಿಗೆ 4ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಭಾರತದಲ್ಲಿ ದಾಖಲಾಗುತ್ತಿವೆ. ಪ್ರಸ್ತುತ ಭಾರತದಲ್ಲಿ 31 ಲಕ್ಷದ 70 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 1.87 ಕೋಟಿಯ ಗಡಿ ದಾಟುವ ಮೂಲಕ 2 ಕೋಟಿಗೆ ಸನ್ನಿಹಿತವಾಗುತ್ತಿದೆ.

ಏಪ್ರಿಲ್ 1 ರಿಂದ ಏಪ್ರಿಲ್ 30ರ ಒಳಗೆ ಭಾರತದಲ್ಲಿ ಸುಮಾರು 65.41 ಲಕ್ಷ ಕೊರೊನಾ ಪ್ರಕರಣಗಳು ಹೊಸದಾಗಿ ದಾಖಲಾಗಿದ್ದು, ಅದರಲ್ಲಿ ಬಹುಪಾಲು ಅರ್ಧಭಾಗ ಅಂದರೆ 31.46 ಲಕ್ಷದಷ್ಟು ಪ್ರಕರಣಗಳು ಕಳೆದ 10 ದಿನಗಳ ಅವಧಿಯಲ್ಲಿ ದಾಖಲಾಗಿವೆ. ಈ ಪ್ರಕರಣಗಳ ಶೇ.73.05ರಷ್ಟು ಭಾಗವನ್ನು ಮಹಾರಾಷ್ಟ್ರ, ಉತ್ತರಪ್ರದೇಶ, ದೆಹಲಿ, ಕರ್ನಾಟಕ, ಕೇರಳ, ಚತ್ತೀಸಗಡ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಹೊಂದಿವೆ.

ಇದನ್ನೂ ಓದಿ: ಕೊರೊನಾ ಸೋಂಕು ಹಿಮ್ಮೆಟ್ಟಿಸಲು ಭಾರತಕ್ಕೆ ನೆರವಾಗುತ್ತೇವೆ: ಚೀನಾ

ಲಸಿಕೆ ಪಡೆದವರಲ್ಲೂ ಕೊರೊನಾ ಸೋಂಕು ಹರಡಲು ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

(Jailed RJD former MP Shahabuddin died from Covid 19)

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ