AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ

Covid 19: 2004ರಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಿಹಾರದ ಸಂಸದರಾಗಿದ್ದ ಮೊಹ್ಮದ್ ಶಹಾಬುದ್ದೀನ್​ ಮತ್ತು ಅವರ ಸಹಚರರಿಗೆ 2015ರ ಡಿಸೆಂಬರ್ 5ರಂದು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 2018ರ ಫೆಬ್ರವರಿ 15ರಂದು ಸುಪ್ರೀಂಕೋರ್ಟ್​ನ ಸೂಚನೆ ಮೇರೆಗೆ ಅವರನ್ನು ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗಿತ್ತು.

ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ
ಬಿಹಾರದ ಮಾಜಿ ಸಂಸದ ಶಹಾಬುದ್ದೀನ್
guruganesh bhat
|

Updated on: May 01, 2021 | 4:42 PM

Share

ದೆಹಲಿ: ಆರ್​ಜೆಡಿಯ ಮಾಜಿ ಸಂಸದ, ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನರಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕಳೆದ ಏಪ್ರಿಲ್ 20ರಂದು ದೆಹಲಿಯ ದೀನ್​ದಯಾಳ್​ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊವಿಡ್ ಇರುವುದು ಬಹಿರಂಗವಾಗಿತ್ತು. ಚಿಕಿತ್ಸೆಯ ನಂತರವೂ ಗುಣಮುಖರಾಗದ ಮೊಹಮ್ಮದ್ ಶಹಾಬುದ್ದೀನ್​ರನ್ನು ಮೂರು ದಿನಗಳಿಂದ ಐಸಿಯುವಿನಲ್ಲಿ ಇರಿಸಲಾಗಿತ್ತು.

ಕಳೆದ ವಾರವಷ್ಟೇ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಮತ್ತು ಜೈಲಿನ ಅಧಿಕಾರಿಗಳಿಗೆ ಮಾಜಿ ಸಂಸದ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಮೊಹಮ್ಮದ್ ಶಹಾಬುದ್ದೀನ್​ರಿಗೆ ಅಗತ್ಯ ವೈದ್ಯಕೀಯ ಸೌಲಭ್ಯವನ್ನು ಒದಗಿಸುವಂತೆ ಸೂಚಿಸಿತ್ತು.

2004ರಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಿಹಾರದ ಸಂಸದರಾಗಿದ್ದ ಮೊಹ್ಮದ್ ಶಹಾಬುದ್ದೀನ್​ ಮತ್ತು ಅವರ ಸಹಚರರಿಗೆ 2015ರ ಡಿಸೆಂಬರ್ 5ರಂದು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 2018ರ ಫೆಬ್ರವರಿ 15ರಂದು ಸುಪ್ರೀಂಕೋರ್ಟ್​ನ ಸೂಚನೆ ಮೇರೆಗೆ ಅವರನ್ನು ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗಿತ್ತು.

ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪಕ್ಕೆ ತಿರುಗಿದ್ದು ಪರಿಸ್ಥಿತಿ ಬಿಗಡಾಯಿಸಿದೆ. ಮೊದಲ ಅಲೆಯ ವೇಳೆಯಲ್ಲಿ ಉಳಿದ ದೇಶಗಳು ಹುಬ್ಬೇರಿಸುವಂತೆ ಪರಿಸ್ಥಿತಿಯನ್ನು ಎದುರಿಸಿದ್ದ ಭಾರತವೀಗ ದಿನವೊಂದರಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿದ ದೇಶ ಎಂದು ಗುರುತಿಸಿಕೊಂಡಿದೆ. ನಿನ್ನೆ (ಏಪ್ರಿಲ್ 30) ರಾತ್ರಿ 11 ಗಂಟೆಯ ಅಂಕಿ ಅಂಶಗಳ ಪ್ರಕಾರ ಕಳೆದ 24 ತಾಸಿನಲ್ಲಿ ಭಾರತದಲ್ಲಿ 4,08,323 ಕೊರೊನಾ ಪಾಸಿಟಿವ್ ಪ್ರಕರಣಗಳು ಹೊಸದಾಗಿ ಕಾಣಿಸಿಕೊಂಡಿದ್ದು, ಇದುವರೆಗೆ ಒಂದೇ ದಿನದಲ್ಲಿ 4 ಲಕ್ಷಕ್ಕೂ ಅಧಿಕ ಪ್ರಕರಣಗಳಿಗೆ ಸಾಕ್ಷಿಯಾದ ಏಕೈಕ ದೇಶವಾಗಿದೆ.

ಏಪ್ರಿಲ್ 28ರ ತನಕ ದಿನಕ್ಕೆ ಸರಾಸರಿ 3.49 ಲಕ್ಷ ಪ್ರಕರಣಗಳು ಭಾರತದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೀಗ 4 ಲಕ್ಷದ ಗಡಿ ದಾಟುವ ಮೂಲಕ ಅಪಾಯಕಾರಿ ಬೆಳವಣಿಗೆ ತೋರಿಸಿದೆ. ಪ್ರತಿನಿತ್ಯ 52,579 ಹೊಸ ಪ್ರಕರಣಗಳೊಂದಿಗೆ ಅಮೆರಿಕಾ ಎರಡನೇ ಸ್ಥಾನ, 27,250 ಪ್ರಕರಣಗಳೊಂದಿಗೆ ಫ್ರಾನ್ಸ್ ಮೂರನೇ ಸ್ಥಾನ, 20,788 ಪ್ರಕರಣಗಳೊಂದಿಗೆ ಜರ್ಮನಿ ನಾಲ್ಕನೇ ಸ್ಥಾನ, 7,980 ಪ್ರಕರಣಗಳೊಂದಿಗೆ ಕೆನಡಾ ಐದನೇ ಸ್ಥಾನದಲ್ಲಿದೆ.

ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ಭಾರತ ತೀರಾ ಅಪಾಯಕಾರಿ ಸನ್ನಿವೇಶವನ್ನು ಎದುರಿಸುತ್ತಿದ್ದು ಪ್ರತಿ ನಿಮಿಷಕ್ಕೆ ಸರಾಸರಿ 2 ಸಾವು ಹಾಗೂ 270 ಹೊಸ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿದೆ. ಅಂದರೆ ಪ್ರತಿ ಸೆಕೆಂಡಿಗೆ 4ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಭಾರತದಲ್ಲಿ ದಾಖಲಾಗುತ್ತಿವೆ. ಪ್ರಸ್ತುತ ಭಾರತದಲ್ಲಿ 31 ಲಕ್ಷದ 70 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 1.87 ಕೋಟಿಯ ಗಡಿ ದಾಟುವ ಮೂಲಕ 2 ಕೋಟಿಗೆ ಸನ್ನಿಹಿತವಾಗುತ್ತಿದೆ.

ಏಪ್ರಿಲ್ 1 ರಿಂದ ಏಪ್ರಿಲ್ 30ರ ಒಳಗೆ ಭಾರತದಲ್ಲಿ ಸುಮಾರು 65.41 ಲಕ್ಷ ಕೊರೊನಾ ಪ್ರಕರಣಗಳು ಹೊಸದಾಗಿ ದಾಖಲಾಗಿದ್ದು, ಅದರಲ್ಲಿ ಬಹುಪಾಲು ಅರ್ಧಭಾಗ ಅಂದರೆ 31.46 ಲಕ್ಷದಷ್ಟು ಪ್ರಕರಣಗಳು ಕಳೆದ 10 ದಿನಗಳ ಅವಧಿಯಲ್ಲಿ ದಾಖಲಾಗಿವೆ. ಈ ಪ್ರಕರಣಗಳ ಶೇ.73.05ರಷ್ಟು ಭಾಗವನ್ನು ಮಹಾರಾಷ್ಟ್ರ, ಉತ್ತರಪ್ರದೇಶ, ದೆಹಲಿ, ಕರ್ನಾಟಕ, ಕೇರಳ, ಚತ್ತೀಸಗಡ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಹೊಂದಿವೆ.

ಇದನ್ನೂ ಓದಿ: ಕೊರೊನಾ ಸೋಂಕು ಹಿಮ್ಮೆಟ್ಟಿಸಲು ಭಾರತಕ್ಕೆ ನೆರವಾಗುತ್ತೇವೆ: ಚೀನಾ

ಲಸಿಕೆ ಪಡೆದವರಲ್ಲೂ ಕೊರೊನಾ ಸೋಂಕು ಹರಡಲು ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

(Jailed RJD former MP Shahabuddin died from Covid 19)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ