AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jain Muni Vidyasagar Maharaj: ಸಲ್ಲೇಖನ ವ್ರತ ಮೂಲಕ ದೇಹ ತ್ಯಜಿಸಿದ ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್

ಜೈನ ಸನ್ಯಾಸಿ ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಘೋಷಿಸಿ ದೇಹ ತ್ಯಾಗ ಮಾಡಿದ್ದಾರೆ. ಛತ್ತೀಸ್‌ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರವನ್ನು ಇಂದು ಫೆಬ್ರವರಿ 18 ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನೆರವೇರಿಸಲಾಗುವುದು. ಕಳೆದ ಕೆಲವು ದಿನಗಳಿಂದ ಆಚಾರ್ಯಶ್ರೀ ಅವರು ಅಸ್ವಸ್ಥರಾಗಿದ್ದರು. ಕಳೆದ ಮೂರು ದಿನಗಳಿಂದ ಅವರು ಆಹಾರ ಮತ್ತು ನೀರನ್ನು ಸಂಪೂರ್ಣವಾಗಿ ತ್ಯಜಿಸಿದ್ದರು.

Jain Muni Vidyasagar Maharaj: ಸಲ್ಲೇಖನ ವ್ರತ ಮೂಲಕ ದೇಹ ತ್ಯಜಿಸಿದ ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್
Image Credit source: Timesnow
ನಯನಾ ರಾಜೀವ್
|

Updated on:Feb 18, 2024 | 11:58 AM

Share

ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್(Acharya Vidyasagar Maharaj) ಸಲ್ಲೇಖನ ವ್ರತ ಘೋಷಿಸಿ ದೇಹ ತ್ಯಾಗ ಮಾಡಿದ್ದಾರೆ. ಛತ್ತೀಸ್‌ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರವನ್ನು ಇಂದು ಫೆಬ್ರವರಿ 18 ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನೆರವೇರಿಸಲಾಗುವುದು. ಕಳೆದ ಕೆಲವು ದಿನಗಳಿಂದ ಆಚಾರ್ಯಶ್ರೀ ಅವರು ಅಸ್ವಸ್ಥರಾಗಿದ್ದರು. ಕಳೆದ ಮೂರು ದಿನಗಳಿಂದ ಅವರು ಆಹಾರ ಮತ್ತು ನೀರನ್ನು ಸಂಪೂರ್ಣವಾಗಿ ತ್ಯಜಿಸಿದ್ದರು.

ಆಚಾರ್ಯಶ್ರೀಗಳು ಕೊನೆಯ ಉಸಿರಿನವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದರು. ಸಮಾಧಿಯ ಸಮಯದಲ್ಲಿ, ಪೂಜ್ಯ ಮುನಿಶ್ರೀ ಯೋಗಸಾಗರ ಜಿ ಮಹಾರಾಜ್, ಶ್ರೀ ಸಮತಾಸಾಗರ ಜಿ ಮಹಾರಾಜ್, ಶ್ರೀ ಪ್ರಸಾದಸಾಗರ್ ಜಿ ಮಹಾರಾಜ್ ಮತ್ತು ಸಂಘದವರು ಅವರೊಂದಿಗೆ ಉಪಸ್ಥಿತರಿದ್ದರು. ದೇಶಾದ್ಯಂತ ಜೈನ ಸಮುದಾಯ ಮತ್ತು ಆಚಾರ್ಯಶ್ರೀ ಅವರ ಭಕ್ತರು ಅವರ ಗೌರವಾರ್ಥ ಇಂದು ತಮ್ಮ ಸಂಸ್ಥೆಗಳನ್ನು ಒಂದು ದಿನದ ಮಟ್ಟಿಗೆ ಮುಚ್ಚಲು ನಿರ್ಧರಿಸಿದ್ದಾರೆ.

ನರೇಂದ್ರ ಮೋದಿ ಟ್ವೀಟ್​ 

ಮಾಹಿತಿ ಸಿಕ್ಕ ತಕ್ಷಣ ಆಚಾರ್ಯಶ್ರೀಗಳ ಸಾವಿರಾರು ಶಿಷ್ಯರು ಡೊಂಗರಗಢಕ್ಕೆ ತೆರಳಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್‌ಗಢದ ರಾಜನಂದಗಾಂವ್‌ನ ಡೊಂಗರ್‌ಗಢ್‌ನಲ್ಲಿರುವ ಜೈನ ಯಾತ್ರಾಸ್ಥಳ ಚಂದ್ರಗಿರಿಗೆ ಭೇಟಿ ನೀಡಿ ಜೈನ ಸಂತ ವಿದ್ಯಾಸಾಗರ ಮಹಾರಾಜರ ದರ್ಶನ ಪಡೆದಿದ್ದರು.

ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ 10 ಅಕ್ಟೋಬರ್ 1946 ರಂದು ಜನಿಸಿದರು. ಅವರು 30 ಜೂನ್ 1968 ರಂದು ರಾಜಸ್ಥಾನದ ಅಜ್ಮೀರ್ ನಗರದಲ್ಲಿ ತಮ್ಮ ಗುರು ಆಚಾರ್ಯಶ್ರೀ ಜ್ಞಾನಸಾಗರ್ ಜಿ ಮಹಾರಾಜ್ ಅವರಿಂದ ಮುನಿದೀಕ್ಷೆಯನ್ನು ಪಡೆದರು. ಅವರ ಕಠಿಣ ತಪಸ್ಸನ್ನು ಕಂಡು ಆಚಾರ್ಯಶ್ರೀ ಜ್ಞಾನಸಾಗರ್ ಜಿ ಮಹಾರಾಜ್ ಅವರಿಗೆ ಆಚಾರ್ಯ ಹುದ್ದೆಯನ್ನು ನೀಡಿದ್ದರು.

ಆಚಾರ್ಯ ಶ್ರೀಯವರು 1975ರ ಸುಮಾರಿಗೆ ಬುಂದೇಲಖಂಡಕ್ಕೆ ಬಂದರು. ಬುಂದೇಲ್‌ಖಂಡ್‌ನ ಜೈನ ಸಮುದಾಯದ ಭಕ್ತಿ ಮತ್ತು ಸಮರ್ಪಣೆಯಿಂದ ಅವರು ಪ್ರಭಾವಿತರಾಗಿದ್ದರು, ಅವರು ತಮ್ಮ ಹೆಚ್ಚಿನ ಸಮಯವನ್ನು ಬುಂದೇಲ್‌ಖಂಡದಲ್ಲಿ ಕಳೆದರು. ಆಚಾರ್ಯಶ್ರೀಗಳು ಸುಮಾರು 350 ದೀಕ್ಷೆಗಳನ್ನು ನೀಡಿದ್ದಾರೆ. ಅವರ ಶಿಷ್ಯರು ದೇಶಾದ್ಯಂತ ಸಂಚರಿಸಿ ಜೈನ ಧರ್ಮ ಪ್ರಚಾರ ಮಾಡುತ್ತಿದ್ದಾರೆ. ಮುನಿಗಳು ಹಿಂದಿ, ಮರಾಠಿ ಮತ್ತು ಕನ್ನಡದಲ್ಲಿ ಪರಿಣಿತರಾಗಿದ್ದರು, ಹಿಂದಿ ಹಾಗೂ ಸಂಸ್ಕೃತದಲ್ಲಿ ಸಾಕಷ್ಟು ಲೇಖನ ಬರೆದಿದ್ದಾರೆ.

ರಾಜಕೀಯ ನಾಯಕರುಗಳಾದ, ದಿಗ್ವಿಜಯ ಸಿಂಗ್, ಶಿವರಾಜ್​ ಸಿಂಗ್ ಚೌಹಾಣ್, ಬಿಜೆಪಿ ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:56 am, Sun, 18 February 24

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?