AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರ: ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಬದಲಾದ ಶಿಶುಗಳು ತಾಯಂದಿರ ಮಡಿಲಿಗೆ

ಆಸ್ಪತ್ರೆ ಆಡಳಿತವು ಪೊಲೀಸರ ಸಹಾಯದಿಂದ ಎರಡು ಶಿಶುಗಳ ಜೈವಿಕ ಪೋಷಕರನ್ನು ಖಚಿತಪಡಿಸಲು ಡಿಎನ್ಎ ಪರೀಕ್ಷೆಯನ್ನು ಮಾಡಿತ್ತು

ಜೈಪುರ: ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಬದಲಾದ ಶಿಶುಗಳು ತಾಯಂದಿರ ಮಡಿಲಿಗೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 12, 2022 | 4:23 PM

Share

ಜೈಪುರದ ಇಬ್ಬರು ತಾಯಂದಿರು ಮಹಿಳಾ ಚಿಕಿತ್ಸಾಲಯದಲ್ಲಿ ಹೆರಿಗೆಯ ಸಮಯದಲ್ಲಿ ಬದಲಾಗಿದ್ದ  ತಮ್ಮ ನವಜಾತ ಶಿಶುಗಳನ್ನು ಭೇಟಿಯಾಗಲು ಸುಮಾರು 10 ದಿನಗಳ ಕಾಲ ಕಾಯಬೇಕಾಯಿತು. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಎರಡೂ ಶಿಶುಗಳು ಪರಸ್ಪರ ಬದಲಾಗಿತ್ತು. ಜೈಪುರದಲ್ಲಿ ಡಿಎನ್ಎ ಪರೀಕ್ಷೆಯ ನಂತರ ಶಿಶುಗಳನ್ನು ತಮ್ಮ ಪೋಷಕರ ಕೈಗೊಪ್ಪಿಸಲಾಗಿದೆ. ಆಸ್ಪತ್ರೆ ಆಡಳಿತವು ಪೊಲೀಸರ ಸಹಾಯದಿಂದ ಎರಡು ಶಿಶುಗಳ ಜೈವಿಕ ಪೋಷಕರನ್ನು ಖಚಿತಪಡಿಸಲು ಡಿಎನ್ಎ ಪರೀಕ್ಷೆಯನ್ನು ಮಾಡಿತ್ತು. ಹೆರಿಗೆಯಾದ ಮೂರು ದಿನಗಳ ನಂತರ ಆಸ್ಪತ್ರೆಯ ಸಿಬ್ಬಂದಿಗೆ ತಮ್ಮ ಪ್ರಮಾದ ಅರಿವಿಗೆ ಬಂದಿತ್ತು. ನಿಶಾ ಗಂಡು ಮಗುವಿಗೆ ಜನ್ಮ ನೀಡಿದ್ದರೆ, ರೇಷ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಹೆಸರು ಹೇಳಲಿಚ್ಛಿಸದ ಆಸ್ಪತ್ರೆ ಆಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರಂಭದಲ್ಲಿ, ಪೋಷಕರು ತಮ್ಮ ಮಕ್ಕಳನ್ನು ಪರಸ್ಪರ ಬದಲಾಯಿಸಿಕೊಂಡಿದ್ದಾರೆ ಎಂದು ನಂಬಲು ನಿರಾಕರಿಸಿದರು.

ಇದರ ನಂತರ, ಆಸ್ಪತ್ರೆಯ ಆಡಳಿತವು ಶಿಶುಗಳ ಜೈವಿಕ ಪೋಷಕರನ್ನು ಗುರುತಿಸಲು ರಕ್ತ ಪರೀಕ್ಷೆ ಮತ್ತು ನಂತರ ಡಿಎನ್ಎ ಪರೀಕ್ಷೆಯನ್ನು ನಡೆಸಿತು. ಡಿಎನ್‌ಎ ವರದಿಯು ನಿರ್ಲಕ್ಷ್ಯವನ್ನು ದೃಢಪಡಿಸಿದ ನಂತರ ಜೈವಿಕ ಪೋಷಕರು ಶಿಶುಗಳನ್ನು ಬದಲಾಯಿಸಲು ಒಪ್ಪಿಕೊಂಡರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Published On - 4:22 pm, Mon, 12 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್