AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಯಲ್ಲಿದ್ದ ಪತ್ನಿ, ಮೂವರು ಪುತ್ರಿಯರ ತಲೆ ಮೇಲೆ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯಿಂದ ಬರ್ಬರ ಕೊಲೆ

ಜೈಪುರದಲ್ಲಿ ನಿದ್ದೆಯಲ್ಲಿದ್ದ ಪತ್ನಿ ಗೀತಾ ಝಾ ಮತ್ತು ಮೂವರು ಪುತ್ರಿಯರನ್ನು ಆರೋಪಿ ರಾಹುಲ್ ಝಾ ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆ ಶಂಕಿಸಿದೆ. ಹತ್ಯೆ ಬಳಿಕ ಪರಾರಿಯಾಗಿರುವ ರಾಹುಲ್ ಝಾ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಇದು ರಾಜಸ್ಥಾನದಲ್ಲಿ ನಡೆದ ಭೀಕರ ಘಟನೆ.

ನಿದ್ದೆಯಲ್ಲಿದ್ದ ಪತ್ನಿ, ಮೂವರು ಪುತ್ರಿಯರ ತಲೆ ಮೇಲೆ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯಿಂದ ಬರ್ಬರ ಕೊಲೆ
ರಾಹುಲ್ Image Credit source: NDTV
ನಯನಾ ರಾಜೀವ್
|

Updated on: Sep 11, 2026 | 3:06 PM

Share

ಜೈಪುರ, ಸೆಪ್ಟೆಂಬರ್ 11: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಬೆಳ್ಳಂಬೆಳಗ್ಗೆ ಸಾಮೂಹಿಕ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಇಡೀ ನಗರವೇ ಬೆಚ್ಚಿಬಿದ್ದಿದೆ. ಕರ್ಧಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದಪುರದಲ್ಲಿ (ಗೋವಿಂದ್ ವಾಟಿಕಾ) ರಾಹುಲ್ ಝಾ ಎಂಬ ವ್ಯಕ್ತಿಯು ಗಾಢ ನಿದ್ದೆಯಲ್ಲಿದ್ದ ತನ್ನ ಪತ್ನಿ ಮತ್ತು ಮೂವರು ಯುವತಿ ಹೆಣ್ಣುಮಕ್ಕಳ ತಲೆಗೆ ಇಟ್ಟಿಯಿಂದ ಹೊಡೆದು ಅತ್ಯಂತ ಕ್ರೂರವಾಗಿ ಕೊಂದಿದ್ದಾನೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ದಾಳಿಯಲ್ಲಿ ಗೀತಾ ಝಾ (40) ಹಾಗೂ ಆಕೆಯ ಪುತ್ರಿಯರಾದ ನಂದಿನಿ, ಗಿರಿಜಾ ಮತ್ತು ರಾಧಿಕಾ (17 ರಿಂದ 23 ವರ್ಷ ವಯಸ್ಸಿನವರು) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಧ್ಯರಾತ್ರಿ ಅಥವಾ ನಸುಕಿನ ಜಾವ ಕುಟುಂಬದ ಸದಸ್ಯರು ಗಾಢ ನಿದ್ದೆಯಲ್ಲಿದ್ದ ಸಮಯವನ್ನು ಬಳಸಿಕೊಂಡ ರಾಹುಲ್ ಝಾ, ಇಟ್ಟಿಗೆ ಹಾಗೂ ಭಾರವಾದ ಸಿಮೆಂಟ್ ಕಲ್ಲಿನಿಂದ ಎಲ್ಲರ ತಲೆಗಳ ಮೇಲೂ ಸತತವಾಗಿ ಬಲವಾಗಿ ಹೊಡೆದಿದ್ದಾನೆ.

ಬೆಳಗ್ಗೆ ಹಾಲು ಪಡೆದು ಎಸ್ಕೇಪ್: ಕೊಲೆ ಮಾಡಿದ ನಂತರವೂ ಮನೆಯೊಳಗೇ ಇದ್ದ ಆರೋಪಿ, ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಬಾಗಿಲಿಗೆ ಬಂದ ಹಾಲಿನವನಿಂದ ಹಾಲು ಪಡೆದುಕೊಂಡಿದ್ದಾನೆ, ನಂತರ ಮನೆಯ ರಕ್ತದ ಕಲೆಗಳನ್ನು ಬಟ್ಟೆಯಿಂದ ಒರೆಸಿ ಮುಚ್ಚಿಡಲು ಯತ್ನಿಸಿ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ:ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣ: 24 ಗಂಟೆಯೊಳಗೆ ರೌಡಿಶೀಟರ್ ಸೇರಿ 6 ಮಂದಿ ಬಂಧನ

ಬೆಳಗ್ಗೆ 10 ಗಂಟೆಯಾದರೂ ಮನೆಯ ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಾಗಿಲು ಮುರಿದು ಒಳನುಗ್ಗಿದಾಗ ಆರೋಪಿಯ 85 ವರ್ಷದ ತಂದೆ ಲಕ್ಷ್ಮೀನಾಥ್ ಝಾ ಮಾತ್ರ ಬದುಕುಳಿದಿರುವುದು ಕಂಡುಬಂದಿದೆ.

ಕೌಟುಂಬಿಕ ಕಲಹದ ಶಂಕೆ: ಪ್ರಾಥಮಿಕ ತನಿಖೆಯ ಪ್ರಕಾರ, ಕುಟುಂಬದಲ್ಲಿ ನಡೆಯುತ್ತಿದ್ದ ತೀವ್ರ ಕಲಹ ಮತ್ತು ಮನಸ್ತಾಪವೇ ಈ ಘೋರ ಹತ್ಯೆಗೆ ಕಾರಣ ಎಂದು ಪಶ್ಚಿಮ ಡಿಸಿಪಿ ಪ್ರಶಾಂತ್ ಕಿರಣ್ ತಿಳಿಸಿದ್ದಾರೆ. ಕೃತ್ಯಕ್ಕೆ ನಿಖರ ಕಾರಣವೇನು ಎಂಬುದನ್ನು ತಿಳಿಯಲು ಕುಟುಂಬಸ್ಥರನ್ನು ವಿಚಾರಣೆ ನಡೆಸಲಾಗುತ್ತಿದೆ.ವಿಧಿವಿಜ್ಞಾನ ಪ್ರಯೋಗಾಲಯ (FSL) ತಜ್ಞರು ಮತ್ತು ಶ್ವಾನದಳ ಸ್ಥಳಕ್ಕೆ ಆಗಮಿಸಿ ರಕ್ತದ ಮಾದರಿಗಳನ್ನು ಹಾಗೂ ಕೊಲೆಗೆ ಬಳಸಲಾದ ಇಟ್ಟಿಗೆಯನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯಾದ್ಯಂತ ತಪಾಸಣೆ ತೀವ್ರ: ಪರಾರಿಯಾಗಿರುವ ರಾಹುಲ್ ಝಾ ಬಂಧನಕ್ಕಾಗಿ ಹಲವು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ನಗರದ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಆರೋಪಿ ಅಡಗಿರುವ ಶಂಕಿತ ಸ್ಥಳಗಳ ಮೇಲೆ ಪೊಲೀಸರು ನಿರಂತರ ದಾಳಿ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ