AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್​ಕೌಂಟರ್

ಡಿಸೆಂಬರ್ 30ರಂದು ಅನಂತನಾಗ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನ ಚಿತ್ರವು ಲೆಥ್‌ಪೋರಾ, ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನಾಗಿದ್ದ ಜೆಇಎಂ ಉನ್ನತ ಕಮಾಂಡರ್ ಸಮೀರ್ ದಾರ್‌ನೊಂದಿಗೆ ಹೋಲಿಕೆಯಾಗುತ್ತದೆ.

2019ರ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್​ಕೌಂಟರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 01, 2022 | 4:44 PM

Share

ಅನಂತ್​ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಹತ್ಯೆಗೀಡಾದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕನನ್ನು ಸಮೀರ್ ದಾರ್ ಎಂದು ಗುರುತಿಸಲಾಗಿದೆ. ಈತ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿಜಯ್ ಕುಮಾರ್ ತಿಳಿಸಿದ್ದಾರೆ. ಭದ್ರತಾ ಪಡೆಗಳು ಹತ್ಯೆಗೀಡಾದ ಭಯೋತ್ಪಾದಕನ ಡಿಎನ್ಎ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸುತ್ತಿವೆ.

ಡಿಸೆಂಬರ್ 30ರಂದು ಅನಂತನಾಗ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನ ಚಿತ್ರವು ಲೆಥ್‌ಪೋರಾ, ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನಾಗಿದ್ದ ಜೆಇಎಂ ಉನ್ನತ ಕಮಾಂಡರ್ ಸಮೀರ್ ದಾರ್‌ನೊಂದಿಗೆ ಹೋಲಿಕೆಯಾಗುತ್ತದೆ. ನಾವು ಡಿಎನ್ಎ ಮಾದರಿ ಮೂಲಕ ಹೋಲಿಕೆ ಮಾಡುತ್ತೇವೆ ಎಂದು ಕುಮಾರ್ ಹೇಳಿದರು.

ಬುಧವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರು. ಅಲ್ಲಿ ಇಬ್ಬರು ಸ್ಥಳೀಯ ಭಯೋತ್ಪಾದಕರು ಮತ್ತು ಪಾಕಿಸ್ತಾನಿ ಭಯೋತ್ಪಾದಕರು, ನಿಷೇಧಿತ ಭಯೋತ್ಪಾದಕ ಸಂಘಟನೆಯ ಜೆಎಂ ಜೊತೆ ಸೇರಿದ್ದರು.

2019ರ ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ಬಾಂಬರ್‌ನಿಂದ ಭಯೋತ್ಪಾದಕ ದಾಳಿಯನ್ನು ನಡೆಸಲಾಗಿತ್ತು., ಇದರ ಪರಿಣಾಮವಾಗಿ 40 ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದರು. ಜೈಶ್-ಎ-ಮೊಹಮ್ಮದ್‌ನ ಆದಿಲ್ ಅಹ್ಮದ್ ದಾರ್ ಎಂದು ಗುರುತಿಸಲಾದ ಆತ್ಮಹತ್ಯಾ ಬಾಂಬರ್, ಪುಲ್ವಾಮಾ ಜಿಲ್ಲೆಯ ಲೆಥಾಪೋರಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯೊಂದಿಗೆ ತನ್ನ ವಾಹನವನ್ನು ಬಸ್‌ಗೆ ಡಿಕ್ಕಿ ಹೊಡೆದಿದ್ದ.

ಇದನ್ನೂ ಓದಿ: ಶ್ರೀನಗರದಲ್ಲಿ ಇಂದು 3 ಉಗ್ರರ ಹತ್ಯೆ; 24 ಗಂಟೆಗಳಲ್ಲಿ ಒಟ್ಟು 9 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು