ಸ್ಪೀಕರ್ ಅವಿಶ್ವಾಸ ನಿರ್ಣಯದ ನಡುವೆಯೇ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ರಾಜ್ಯಸಭೆಗೆ ವಿವರ ಕೊಟ್ಟ ಜೈಶಂಕರ್

ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ರಾಜ್ಯಸಭೆಗೆ ವಿವರಣೆ ನೀಡಿದರು. ಇರಾನ್, ಅಮೆರಿಕ, ಇಸ್ರೇಲ್ ನಡುವೆ ಉಲ್ಬಣಿಸಿರುವ ಸಂಘರ್ಷ, ಅಲಿ ಖಮೇನಿ ನಿಧನ, ಹಾಗೂ ಹೊಸ ನಾಯಕನ ನೇಮಕದ ಬಗ್ಗೆ ತಿಳಿಸಿದರು. ಪ್ರಧಾನಿ ಮೋದಿ ಮೇಲ್ವಿಚಾರಣೆಯಲ್ಲಿ ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದೆ. ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ನಡುವೆ ಈ ವಿಷಯ ಪ್ರಸ್ತಾಪವಾಯಿತು.

ಸ್ಪೀಕರ್ ಅವಿಶ್ವಾಸ ನಿರ್ಣಯದ ನಡುವೆಯೇ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ರಾಜ್ಯಸಭೆಗೆ ವಿವರ ಕೊಟ್ಟ ಜೈಶಂಕರ್
ಜೈಶಂಕರ್

Updated on: Mar 09, 2026 | 11:53 AM

ನವದೆಹಲಿ, ಮಾರ್ಚ್​ 09: ಸ್ಪೀಕರ್(Speaker) ಮೇಲಿನ ಅವಿಶ್ವಾಸ ನಿರ್ಣಯದ ನಡುವೆಯೇ ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ರಾಜ್ಯಸಭೆಗೆ ವಿವರಣೆ ನೀಡಿದ್ದಾರೆ. ಪ್ರಧಾನಿ ಮೋದಿ ಈ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಎಲ್ಲಾ ಕಡೆಯವರು ಉದ್ವಿಗ್ನತೆಯನ್ನು ಶಮನಗೊಳಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಮುಂದಿನ ಮಾರ್ಗ ಎಂಬ ಸರ್ಕಾರದ ನಿಲುವನ್ನು ಪುನರುಚ್ಚರಿಸಿದರು.

ಕೇಂದ್ರದ ವಿದೇಶಾಂಗ ನೀತಿ ನಿಲುವು ಮತ್ತು ಪ್ರಕ್ಷುಬ್ಧತೆಗೆ ಭಾರತದ ಪ್ರತಿಕ್ರಿಯೆಯ ಕುರಿತು ಕೇಂದ್ರವನ್ನು ಪ್ರಶ್ನಿಸಲು ಪೂರ್ಣ ಪ್ರಮಾಣದ ಚರ್ಚೆಗೆ ವಿರೋಧ ಪಕ್ಷದ ಸಂಸದರು ಒತ್ತಾಯಿಸಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿರುವ ಕಾಂಗ್ರೆಸ್, ಈ ಸಂಬಂಧ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿತ್ತು.

ಸ್ಪೀಕರ್ ಓಂ ಬಿರ್ಲಾರ ಅವರ ಪದಚ್ಯುತಿ ಕೋರಿ ಸಲ್ಲಿಸಲಾಗಿರುವ ನೋಟಿಸ್‌ ಮುಂದಿನ ವಾರ ಲೋಕಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಮಾರ್ಚ್ 9 ರಿಂದ 11 ರವರೆಗೆ ಕಡ್ಡಾಯವಾಗಿ ಲೋಕಸಭೆಯಲ್ಲಿ ಹಾಜರಿರಬೇಕು ಎಂದು ಸೂಚಿಸಿದೆ.

ಮತ್ತಷ್ಟು ಓದಿ: ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಸಹಿ ಹಾಕಲ್ಲ ಎಂದ ಟಿಎಂಸಿ ಶಾಸಕರು

ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಮೂರು ದಿನಗಳವರೆಗೆ ತನ್ನ ಸಂಸದರು ಕೆಳಮನೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಇರಾನ್ ಜೊತೆಗಿನ ಅಮೆರಿಕ-ಇಸ್ರೇಲ್ ಯುದ್ಧವು 10ನೇ ದಿನಕ್ಕೆ ಕಾಲಿಟ್ಟಿದ್ದು, ದಾಳಿಯಲ್ಲಿ ಸುಪ್ರೀಂ ನಾಯಕ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಇರಾನ್ ಮೊಜ್ತಬಾ ಖಮೇನಿ ಅವರನ್ನು ಹೊಸ ನಾಯಕರನ್ನಾಗಿ ಹೆಸರಿಸಿದೆ. ಡ್ರೋನ್ ದಾಳಿಗಳು, ಹೆಜ್ಬೊಲ್ಲಾ ದಾಳಿಗಳು ಮತ್ತು ಹೆಚ್ಚುತ್ತಿರುವ ಉದ್ವಿಗ್ನತೆಗಳೊಂದಿಗೆ, ಜಾಗತಿಕ ನಾಯಕರು ದೊಡ್ಡ ಯುದ್ಧವನ್ನು ತಪ್ಪಿಸಲು ಮಾತುಕತೆಗೆ ಒತ್ತಾಯಿಸುತ್ತಿದ್ದಾರೆ.

ಖಮೇನಿ ಅವರ ಮಗ ಮೊಜ್ತಾಬಾ ಖಮೇನಿ ಅವರನ್ನು ದೇಶವನ್ನು ಮುನ್ನಡೆಸಲು ಆಯ್ಕೆ ಮಾಡಲಾಗಿದೆ. ಇರಾನ್‌ನ ಹೊಸ ನಾಯಕ ಅವರ ಅನುಮೋದನೆಯಿಲ್ಲದೆ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಟ್ರಂಪ್ ಹೇಳಿದ್ದರೂ, ಇರಾನ್ ಕೂಡ ಎಲ್ಲೆಂದರಲ್ಲಿ ದಾಳಿ ನಡೆಸುವುದನ್ನು ಮುಂದುವರೆಸಿದೆ. ಇರಾನ್ ಯಾವುದೇ ಮಾತುಕತೆಗೆ ಒಪ್ಪುತ್ತಿಲ್ಲ. ಎರಡೂ ಕಡೆಯವರು ನಿರಂತರವಾಗಿ ಪರಸ್ಪರ ಬಾಂಬ್ ದಾಳಿ ನಡೆಸುತ್ತಿದ್ದಾರೆ, ಟೆಹ್ರಾನ್ ಗಲ್ಫ್ ದೇಶಗಳಲ್ಲಿನ ಅಮೆರಿಕಕ್ಕೆ ಸಂಬಂಧಿಸಿದ ಕಚೇರಿ ಮೇಲೆ ದಾಳಿ ನಡೆಸುತ್ತಿದೆ.

ಇಸ್ರೇಲ್ ಲೆಬನಾನ್‌ನಲ್ಲಿ ಹೆಜ್ಬೊಲ್ಲಾವನ್ನು ಗುರಿಯಾಗಿಸಲು ತನ್ನ ದಾಳಿಯನ್ನು ವಿಸ್ತರಿಸುತ್ತಿದೆ, ಇರಾನ್‌ನಲ್ಲಿ ಕಾರ್ಯಾಚರಣೆಗಳು ನಾಲ್ಕು ವಾರಗಳವರೆಗೆ ಮುಂದುವರೆಯಬಹುದು ಎಂದು ಟ್ರಂಪ್ ಹೇಳಿದ್ದರು. ಶಾಶ್ವತವಾಗಿ ಯುದ್ಧಕ್ಕೆ ಸಾಕಾಗುವಷ್ಟು ಅಮೆರಿಕದ ಯುದ್ಧಸಾಮಗ್ರಿಗಳ ತಮ್ಮ ಬಳಿ ಇವೆ ಎಂದು ಟ್ರಂಪ್ ಹೆಮ್ಮೆ ಪಟ್ಟಿದ್ದರು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us