ಲೋಕಸಭೆ ಚುನಾವಣೆ: ಕರ್ನಾಟಕದಿಂದ ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ಸಾಧ್ಯತೆ: ಪ್ರಲ್ಹಾದ್ ಜೋಶಿ

ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಹೆಚ್ಚು ಕಡಿಮೆ ಅವರು (ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ. ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ? ಅದು ಕರ್ನಾಟಕ ಅಥವಾ ಬೇರೆ ಯಾವುದಾದರೂ ರಾಜ್ಯವಾಗಿರಬಹುದು ಎಂದು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಜೋಶಿ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಲೋಕಸಭೆ ಚುನಾವಣೆ: ಕರ್ನಾಟಕದಿಂದ ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ಸಾಧ್ಯತೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Follow us
|

Updated on: Feb 27, 2024 | 2:26 PM

ದೆಹಲಿ ಫೆಬ್ರವರಿ 27: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok sabha Election) ಕರ್ನಾಟಕದ ಕ್ಷೇತ್ರಗಳಿಂದ ಬಿಜೆಪಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಡಾ ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ಅಥವಾ ಇತರ ರಾಜ್ಯ ಕ್ಷೇತ್ರಗಳಿಂದ ಸ್ಪರ್ಧಿಸಬಹುದು. ಕ್ಷೇತ್ರದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ಇಬ್ಬರು ವಾಗ್ಮಿ ಮಂತ್ರಿಗಳು. ಅವರು ಸಂಸತ್ತಿನ ಮೇಲ್ಮನೆ, ರಾಜ್ಯಸಭೆಯ ಸದಸ್ಯರು. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದರೆ, ಎಸ್ ಜೈಶಂಕರ್ ಅವರು ವಿದೇಶಾಂಗ ವ್ಯವಹಾರಗಳ ಖಾತೆಯನ್ನು ಹೊಂದಿದ್ದಾರೆ. ಅವರು ಬಹಳ ಸಮಯದಿಂದ ಸಂಸದರಾಗಿದ್ದಾರೆ. ಆದರೆ ಚುನಾವಣೆಗಳನ್ನು ಎದುರಿಸಿಲ್ಲ. ಈ ವರ್ಷ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಇವರನ್ನು ಕಣಕ್ಕಿಳಿಸುವ ಯೋಜನೆಯಲ್ಲಿದೆ ಎಂದು ಜೋಶಿ ಹೇಳಿದ್ದಾರೆ

ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಹೆಚ್ಚು ಕಡಿಮೆ ಅವರು (ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ. ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ? ಅದು ಕರ್ನಾಟಕ ಅಥವಾ ಬೇರೆ ಯಾವುದಾದರೂ ರಾಜ್ಯವಾಗಿರಬಹುದು ಎಂದು ಇನ್ನೂ ನಿರ್ಧರಿಸಲಾಗಿಲ್ಲ ಎಂದಿದ್ದಾರೆ ಜೋಶಿ.

ಬೆಂಗಳೂರಿನಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಜೋಶಿ “ಏನೂ ಅಂತಿಮಗೊಳಿಸದಿರುವಾಗ ನಾನು ಹೇಗೆ ಉತ್ತರಿಸಲಿ? ಎಂದು ಕೇಳಿದ್ದಾರೆ.

ಸೀತಾರಾಮನ್ ಪ್ರಸ್ತುತ ಕರ್ನಾಟಕವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿದ್ದರೆ, ಎಸ್ ಜೈಶಂಕರ್ ಗುಜರಾತ್ ಅನ್ನು ಪ್ರತಿನಿಧಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರ ರಾಜಕೀಯ ಪ್ರವೇಶ

ನಿರ್ಮಲಾ ಸೀತಾರಾಮನ್ ಅವರು 2008 ರಲ್ಲಿ ಬಿಜೆಪಿ ಸೇರಿದ್ದು 2014 ರವರೆಗೆ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಸೇವೆ ಸಲ್ಲಿಸಿದರು. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ನಂತರ ಅವರು ಕ ರಾಜ್ಯ ಸಚಿವರಾದರು. ಅದೇ ವರ್ಷ ಆಂಧ್ರಪ್ರದೇಶದಿಂದ ರಾಜ್ಯಸಭಾ ಸದಸ್ಯೆಯಾದರು. ನಿರ್ಮಲಾ ಸೀತಾರಾಮನ್ ಅವರು 2017 ಮತ್ತು 2019 ರ ನಡುವೆ ದೇಶದ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಸಾದುದ್ದೀನ್ ಓವೈಸಿ ಮಾತನಾಡಿದಷ್ಟು ಪ್ರಧಾನಿ ಮೋದಿಗೆ ಲಾಭ ಹೆಚ್ಚು: ಬಾಬಾ ರಾಮ್​ದೇವ್

ಎಸ್ ಜೈಶಂಕರ್ ಅನುಭವಿ ರಾಜಕಾರಣಿ. 2015 ರಲ್ಲಿ ಅವರು ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 2019 ರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟಕ್ಕೆ ಸೇರ್ಪಡೆಗೊಂಡರು. ರಾಜ್ಯಸಭೆಗೂ ನಾಮನಿರ್ದೇಶನಗೊಂಡಿದ್ದರು. ಅವರು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತೀಯ ವಿದೇಶಾಂಗ ನೀತಿಯ ದೃಢವಾದ ಸಮರ್ಥನೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆಯನ್ನು ಗಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ