AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತೂರಿನಲ್ಲಿ ಜಲ್ಲಿಕಟ್ಟು ಸಂಭ್ರಮ, 10ಕ್ಕೂ ಹೆಚ್ಚು ಯುವಕರಿಗೆ ಗಾಯ

ಹೈದರಾಬಾದ್: ವಿವಿಧ ಕಡೆಗಳಿಂದ ಬಂದಿರುವ ಕೊಬ್ಬು ತುಂಬಿದ ಹೋರಿಗಳು. ಸುತ್ತಲು ಸೇರಿರುವ ಜನ ಸಾಗರ.. ಜನರ ಮಧ್ಯೆ ಹುಚ್ಚೆದ್ದು ಓಡುತ್ತಿರುವ ಕಟ್ಟುಮಸ್ತಾದ ಎತ್ತುಗಳು. ಮತ್ತೇರಿದಂತೆ ಓಡುತ್ತಿರುವ ಹೋರಿಗಳನ್ನ ಹಿಡಿಯೋಕೆ ಎದ್ನೋ ಬಿದ್ನೋ ಅಂತ ಓಡುತ್ತಿರುವ ಯುವ ಪಡೆ. ಹೋರಿಗಳ ಓಟ ಕಂಡು ಕೇಕೆ, ಸಿಳ್ಳೇ ಹಾಕುತ್ತಿರುವ ಪ್ರೇಕ್ಷಕರು. ಆಂಧ್ರಪ್ರದೇಶದ ಚಿತ್ತೂರ ಜಿಲ್ಲೆಯ ಶಿವರಾಮಪುರಂನಲ್ಲಿ ಮೈಲಾರ ಹಬ್ಬದ ಪ್ರಯುಕ್ತ ನಡೆದ ಜಲ್ಲಿಕಟ್ಟು ಸ್ಪರ್ಧೆಯ ಝಲಕ್‌ ಇದು.ಈ ಸ್ಪರ್ಧೆಯಲ್ಲಿ ರಾಜ್ಯ ವಿವಿಧೆಡೆಗಳಿಂದ ಬಂದ ಕಟ್ಟುಮಸ್ತಾದ ಹೋರಿಗಳು ಭಾಗಿಯಾಗಿದ್ವು. ಅಖಾಡದಲ್ಲಿ ಹಲಗೆ […]

ಚಿತ್ತೂರಿನಲ್ಲಿ ಜಲ್ಲಿಕಟ್ಟು ಸಂಭ್ರಮ, 10ಕ್ಕೂ ಹೆಚ್ಚು ಯುವಕರಿಗೆ ಗಾಯ
ಸಾಧು ಶ್ರೀನಾಥ್​
|

Updated on:Dec 23, 2019 | 12:21 PM

Share

ಹೈದರಾಬಾದ್: ವಿವಿಧ ಕಡೆಗಳಿಂದ ಬಂದಿರುವ ಕೊಬ್ಬು ತುಂಬಿದ ಹೋರಿಗಳು. ಸುತ್ತಲು ಸೇರಿರುವ ಜನ ಸಾಗರ.. ಜನರ ಮಧ್ಯೆ ಹುಚ್ಚೆದ್ದು ಓಡುತ್ತಿರುವ ಕಟ್ಟುಮಸ್ತಾದ ಎತ್ತುಗಳು. ಮತ್ತೇರಿದಂತೆ ಓಡುತ್ತಿರುವ ಹೋರಿಗಳನ್ನ ಹಿಡಿಯೋಕೆ ಎದ್ನೋ ಬಿದ್ನೋ ಅಂತ ಓಡುತ್ತಿರುವ ಯುವ ಪಡೆ. ಹೋರಿಗಳ ಓಟ ಕಂಡು ಕೇಕೆ, ಸಿಳ್ಳೇ ಹಾಕುತ್ತಿರುವ ಪ್ರೇಕ್ಷಕರು.

ಆಂಧ್ರಪ್ರದೇಶದ ಚಿತ್ತೂರ ಜಿಲ್ಲೆಯ ಶಿವರಾಮಪುರಂನಲ್ಲಿ ಮೈಲಾರ ಹಬ್ಬದ ಪ್ರಯುಕ್ತ ನಡೆದ ಜಲ್ಲಿಕಟ್ಟು ಸ್ಪರ್ಧೆಯ ಝಲಕ್‌ ಇದು.ಈ ಸ್ಪರ್ಧೆಯಲ್ಲಿ ರಾಜ್ಯ ವಿವಿಧೆಡೆಗಳಿಂದ ಬಂದ ಕಟ್ಟುಮಸ್ತಾದ ಹೋರಿಗಳು ಭಾಗಿಯಾಗಿದ್ವು. ಅಖಾಡದಲ್ಲಿ ಹಲಗೆ ಬಾರಿಸುವ ಶಬ್ದಕ್ಕೆ ಹಾಗೂ ಜನರ ಕೂಗಾಟ ಕೇಕೆಗಳಿಗೆ ಹೆದರಿ ಹುಚ್ಚೆದ್ದು ಕಟ್ಟು ಮಸ್ತಾದ ಹೋರಿಗಳು ಓಡುತ್ತಿದ್ರೆ, ಅವುಗಳನ್ನು ಹಿಡಿಯಲು ಯುವಕರು ಹರಸಾಹಸ ಪಡುತ್ತಿದ್ರು.

ಈ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ಬಹುಮಾನಗಳನ್ನು ಇಡಲಾಗಿತ್ತು. ಮೊದಲ ಬಹುಮಾನ 40 ಸಾವಿರ ನೀಡಲಾಯ್ತು. ಇನ್ನು ಹೋರಿಗಳನ್ನ ಹಿಡಿಯಲು ಹೋದ ಯುವಕರಿಗೆ ಹೋರಿಗಳು ಗುದಿದ್ದರಿಂದ 10ಕ್ಕೂ ಹೆಚ್ಚು ಯುವಕರು ಗಾಯಗೊಂಡ್ರು. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯ್ತು.

ಒಟ್ನಲ್ಲಿ ಮೈಲಾರ ಹಬ್ಬದ ಹೆಸರಲ್ಲಿನ ಈ ಜಲ್ಲಿಕಟ್ಟು ಸ್ಪರ್ಧೆ ಏರ್ಪಡಿಸಲಾಗಿತ್ತು. ಆದ್ರೆ, ಇದಕ್ಕೆ ಪೊಲೀಸರ ಅನುಮತಿ ಇರಲಿಲ್ಲ ಎನ್ನಲಾಗಿದೆ. ಆದ್ರೆ ಭಾರಿ ಪ್ರಮಾಣದಲ್ಲಿ ಜನ ಸೇರದ್ದ ಜನ ಸ್ವರ್ಧೆ ನೋಡಿ ಸಖತ್ ಎಂಜಾಯ್ ಮಾಡಿದ್ರು.

Published On - 7:37 am, Mon, 23 December 19

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?