AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬದ ಮಧ್ಯೆಯೂ ಪ್ರಧಾನಿ ಬ್ಯುಸಿ: ಇಲ್ಲಿದೆ ಅ. 19ರಿಂದ ಅ.23ರ ವರೆಗಿನ ಮೋದಿ ಕಾರ್ಯಕ್ರಮಗಳ ವೇಳಾಪಟ್ಟಿ

ಅಕ್ಟೋಬರ್ 19ರಿಂದ ಅ.23ರ ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳ ಪಟ್ಟಿ ಈ ಕೆಳಗಿನಂತಿದೆ ನೋಡಿ..

ದೀಪಾವಳಿ ಹಬ್ಬದ ಮಧ್ಯೆಯೂ ಪ್ರಧಾನಿ ಬ್ಯುಸಿ: ಇಲ್ಲಿದೆ ಅ. 19ರಿಂದ ಅ.23ರ ವರೆಗಿನ ಮೋದಿ ಕಾರ್ಯಕ್ರಮಗಳ ವೇಳಾಪಟ್ಟಿ
ನರೇಂದ್ರ ಮೋದಿ
TV9 Web
| Edited By: |

Updated on:Oct 19, 2022 | 12:03 AM

Share

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿಗೆ (deepavali festival) ಕ್ಷಣಗಣನೆ ಆರಂಭವಾಗಿದೆ. ಇನ್ನು ಕೇವಲ ದಿನಗಳು ಇರುವಾಗಲೇ ಭಾರತದಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಿಡುವಿಲ್ಲದೇ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಕ್ಟೋಬರ್ 19ರಿಂದ ಅ.23ರ ವರೆಗೆ ಮೋದಿ ಅವರ ಕಾರ್ಯಕ್ರಮಗಳ ಪಟ್ಟಿ ಈ ಕೆಳಗಿನಂತಿದೆ ನೋಡಿ..

ಪ್ರಧಾನಿ ಮೋದಿ ಅವರು ಅಕ್ಟೋಬರ್ 19, 20 ರಂದು ಎರಡು ದಿನಗಳ ಕಾಲ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದು, ವಿಧಾನಸಭೆ ಚುನಾವಣೆ ಗದ್ದಲ ಮಧ್ಯೆ ಪ್ರಧಾನಿ ಮೋದಿ ಮತ್ತೊಮ್ಮೆ ತಮ್ಮ ತವರಿಗೆ ತೆರಳಲಿದ್ದಾರೆ. ಗಾಂಧಿನಗರ, ಜುನಾಗಢ್, ರಾಜ್‌ಕೋಟ್, ಕೆವಾಡಿಯಾ ಮತ್ತು ವ್ಯಾರಾದಲ್ಲಿ ಸಂಚರಿಸಲಿದ್ದು, ಅಲ್ಲಿ ಸುಮಾರು 15,670 ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಅಕ್ಟೋಬರ್ 19

ಬುಧವಾರ ಬೆಳಗ್ಗೆ 9:45ರ ಸುಮಾರಿಗೆ ಗಾಂಧಿನಗರದಲ್ಲಿ ಡಿಫೆನ್ಸ್ ಎಕ್ಸ್‌ಪೋ-22ನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ‘ಹೆಮ್ಮೆಯ ಹಾದಿ’ ಎಂಬ ವಿಷಯದ ಅಡಿಯಲ್ಲಿ ನಡೆಯುತ್ತಿರುವ ಎಕ್ಸ್‌ಪೋ, ಇಲ್ಲಿಯವರೆಗೆ ನಡೆದ ಭಾರತೀಯ ರಕ್ಷಣಾ ಪಡೆಯ ಎಕ್ಸ್‌ಪೋದಲ್ಲಿ ಅತಿ ದೊಡ್ಡ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ಬಳಿಕ ಅದಾಲಾಜ್‌ನಲ್ಲಿ ಮಿಷನ್ ಸ್ಕೂಲ್ಸ್ ಆಫ್ ಎಕ್ಸಲೆನ್ಸ್‌ಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ನಂತರ ಜುನಾಗಢಕ್ಕೆ ತೆರಳಲಿದ್ದಾರೆ. ರಾಜ್‌ಕೋಟ್‌ನಲ್ಲಿ ಅನೇಕ ಪ್ರಮುಖ ಯೋಜನೆಗಳ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಕ್ಟೋಬರ್ 20

ಅ.20ರಂದು ಮಿಷನ್ ಲೈಫ್‌ಗೆ ಚಾಲನೆ ನೀಡಲಿದ್ದಾರೆ. ನಂತರ ಅವರು ಕೆವಾಡಿಯಾದಲ್ಲಿ 10ನೇ ಮಿಷನ್ಸ್ ಮುಖ್ಯಸ್ಥರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅವರು ವ್ಯರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಕ್ಟೋಬರ್ 21

ಅ.21 ರಂದು ಪ್ರಧಾನಮಂತ್ರಿ ಮೋದಿ ಅವರು ಉತ್ತರಾಖಂಡ ಪ್ರವಾಸ ಕೈಗೊಳ್ಳಲಿದ್ದು, ಆಧ್ಯಾತ್ಮಿಕ ತಾಣಗಳಾದ ಕೇದಾರನಾಥ ಮತ್ತು ಬದರೀನಾಥ್​ಗೆ ಭೇಟಿ ನೀಡಲಿದ್ದು, ಸುಮಾರು 3500 ಕೋಟಿ ರೂಪಾಯಿಗಳ ಸಂಪರ್ಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಕೇದಾರನಾಥ ಮತ್ತು ಬದರೀನಾಥ್ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅಲ್ಲದೇ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಅಕ್ಟೋಬರ್ 22

ಪ್ರಧಾನಿ ನರೇಂದ್ರ ಮೋದಿ ಅವರು ಅ, 22ರಂದು ಉತ್ತರಾಖಂಡದಿಂದ ವಾಪಸ್ ಆಗಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಫಲಾನುಭವಿಗಳ ಕಾರ್ಯಕ್ರಮಗಳಲ್ಲಿ ವೀಡಿಯೋ ಕಾನ್ಫರೆನ್ಸ್​ ಮೂಲಕ ಭಾಗವಹಿಸಲಿದ್ದಾರೆ.

ಅಕ್ಟೋಬರ್ 23

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಅಕ್ಟೋಬರ್ 23) ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಲಿದ್ದಾರೆ.  ಅದೇ ದಿನ ಸಂಜೆ ಅವರು ಸರಯು ನದಿ ತಟದಲ್ಲಿ ನಡೆಯುವ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೀಪೋತ್ಸವ ಕಾರ್ಯಕ್ರಮಕ್ಕೂ ಚಾಲನೆ ನೀಡಲಿದ್ದಾರೆ.

Published On - 10:59 pm, Tue, 18 October 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ