AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಅಗ್ನಿವೀರ್ ರ್ಯಾಲಿ ಮೇಲೆ ದಾಳಿಗೆ ಸಂಚು; ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಉಗ್ರರ ಎನ್​ಕೌಂಟರ್

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಅಗ್ನಿವೀರ್ ನೇಮಕಾತಿ ರ್ಯಾಲಿ ಮೇಲೆ ದಾಳಿ ಮಾಡಲು ಅವರು ಪ್ಲಾನ್ ಮಾಡಿದ್ದರು. ಈ ವೇಳೆ ಬರಾಮುಲ್ಲಾದ ಗ್ರಾಮದ 2 ಮನೆಗಳು ಕೂಡ ಧ್ವಂಸವಾಗಿವೆ.

Terrorists Encounter: ಅಗ್ನಿವೀರ್ ರ್ಯಾಲಿ ಮೇಲೆ ದಾಳಿಗೆ ಸಂಚು; ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಉಗ್ರರ ಎನ್​ಕೌಂಟರ್
ಬರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ ಕಾರ್ಯಾಚರಣೆ ವೇಳೆ ಧ್ವಂಸವಾಗಿರುವ ಮನೆ
TV9 Web
| Edited By: |

Updated on: Oct 01, 2022 | 8:28 AM

Share

ಶ್ರೀನಗರ: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ (Baramulla) ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆಯ ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಭಯೋತ್ಪಾದಕರು ಬರಾಮುಲ್ಲಾದಲ್ಲಿ ಅಗ್ನಿವೀರ್ (Agniveer) ಸೇನಾ ನೇಮಕಾತಿ ರ್ಯಾಲಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು. ಬರಾಮುಲ್ಲಾದ ಪಟ್ಟಾನ್ ಪ್ರದೇಶದ ಯಡಿಪೋರಾ ಗ್ರಾಮದಲ್ಲಿ ಈ ಎನ್‌ಕೌಂಟರ್ (Encounter) ನಡೆದಿದ್ದು, ಅವರು ಆ ಗ್ರಾಮದಲ್ಲಿ ಅಡಗಿಕೊಂಡಿದ್ದರು. ಈ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿತ್ತು. ಎಸ್‌ಎಸ್‌ಬಿ ಮತ್ತು ಭಾರತೀಯ ಸೇನೆಯು ಶೋಧ ಕಾರ್ಯಾಚರಣೆಯನ್ನು ನಡೆಸಿದಾಗ ಸೇನೆಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರು. ಆಗ ಭದ್ರತಾ ಪಡೆಗಳು ಕೂಡ ಗುಂಡಿನ ದಾಳಿಯನ್ನು ಪ್ರಾರಂಭಿಸಿದವು.

ಹತ್ಯೆಯಾದ ಇಬ್ಬರು ಉಗ್ರರನ್ನು ಕಲಾಂಪೋರಾ ಪುಲ್ವಾಮಾ ನಿವಾಸಿ ಯವರ್ ಶಾಫಿ ಭಟ್ ಮತ್ತು ಶೋಪಿಯಾನ್‌ನ ವೆಶ್ರೋ ನಿವಾಸಿ ಅಮೀರ್ ಹುಸೇನ್ ಭಟ್ ಎಂದು ಗುರುತಿಸಲಾಗಿದೆ. ಅವರು ಇತ್ತೀಚೆಗೆ ಭಯೋತ್ಪಾದನೆಗೆ ಸೇರಿದ್ದರು ಮತ್ತು ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ದಾಳಿಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್‌ಕೌಂಟರ್​​: ಇಬ್ಬರು ಉಗ್ರರ ಹತ್ಯೆ, ಶಸ್ತ್ರಾಸ್ತ್ರ ವಶಕ್ಕೆ

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಅಗ್ನಿವೀರ್ ನೇಮಕಾತಿ ರ್ಯಾಲಿ ಮೇಲೆ ದಾಳಿ ಮಾಡಲು ಅವರು ಪ್ಲಾನ್ ಮಾಡಿದ್ದರು. ಎನ್‌ಕೌಂಟರ್ ನಡೆದ ಸ್ಥಳದಿಂದ ಮೂರು ಮ್ಯಾಗಜೀನ್‌ಗಳಿರುವ AKS74U ರೈಫಲ್ ಮತ್ತು ಮ್ಯಾಗಜೀನ್‌ನೊಂದಿಗೆ ಪಿಸ್ತೂಲ್ ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಿನ್ನೆಯಿಂದ ಇನ್ನೂ ಎನ್​ಕೌಂಟರ್ ಕಾರ್ಯಾಚರಣೆ ಮುಂದುವರೆಯುತ್ತಲೇ ಇದೆ. ಈ ವೇಳೆ ಬರಾಮುಲ್ಲಾದ ಗ್ರಾಮದ 2 ಮನೆಗಳು ಕೂಡ ಧ್ವಂಸವಾಗಿವೆ. ಭದ್ರತಾ ಪಡೆಗಳು ಸೆಪ್ಟೆಂಬರ್‌ನಲ್ಲಿ 9 ವಿಭಿನ್ನ ಗುಂಡಿನ ಚಕಮಕಿಗಳಲ್ಲಿ 16 ಉಗ್ರರನ್ನು ಹತ್ಯೆ ಮಾಡಿದೆ. ಈ ವರ್ಷ ವಿವಿಧ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಗಳಲ್ಲಿ ಹತರಾದ ಉಗ್ರರ ಸಂಖ್ಯೆ 154ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?