ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ಯೋಧರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರೀ ಶಸ್ತ್ರಾಸ್ತ್ರ ಸಜ್ಜಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾಹಿತಿ ನೀಡಿದ್ದವು.

ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
ಭಾರತೀಯ ಸೇನೆ

Updated on: Oct 23, 2023 | 9:21 AM

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ಯೋಧರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರೀ ಶಸ್ತ್ರಾಸ್ತ್ರ ಸಜ್ಜಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾಹಿತಿ ನೀಡಿದ್ದವು.

ಇದಾದ ಬಳಿಕ ಗಡಿಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿತ್ತು. ನಿರಂತರ ಮಳೆ ಕಡಿಮೆ ಗೋಚರತೆ ಹಾಗೂ ಕೆಟ್ಟ ಹವಾಮಾನದ ಲಾಭ ಪಡೆದು ಶಸ್ತ್ರಸಜ್ಜಿತ ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯನ್ನು ದಾಟಲು ಪ್ರಯತ್ನಪಟ್ಟರು. ಶುಕ್ರವಾರ, ಶನಿವಾರ ಮಧ್ಯರಾತ್ರಿ ಎನ್​ಕೌಂಟರ್​ ನಡೆಯಿತು. ಬೆಳಗಿನ ಜಾವದವರೆಗೂ ಎನ್​ಕೌಂಟರ್​ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ನಿಯಂತ್ರಣ ರೇಖೆಯ ಇನ್ನೊಂದು ಬದಿಯಲ್ಲಿದ್ದ ಭಯೋತ್ಪಾದಕರು ಎನ್​ಕೌಂಟರ್​ನಲ್ಲಿ ಹತರಾದ ಭಯೋತ್ಪಾದಕರ ದೇಹಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾನುವಾರ ಘಟನಾ ಸ್ಥಳದಲ್ಲಿ ಸಂಪೂರ್ಣ ಶೋಧ ನಡೆದಿದ್ದು, 2ಎಕೆ ಸಿರೀಸ್ ರೈಫಲ್​ಗಳು, 6 ಪಿಸ್ತೂಲ್​ಗಳು, 4 ಚೈನೀಸ್​ ನಿರ್ಮಿತ ಹ್ಯಾಂಡ್ ಗ್ರೆನೇಡ್​ಗಳು, ಬ್ಲಾಂಕೆಟ್​ಗಳು 2 ರಕ್ತ ಬಣ್ಣದ ಬ್ಯಾಗ್​ಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬ್ಯಾಗ್​ನಲ್ಲಿ ಪಾಕಿಸ್ತಾನ ಕರೆನ್ಸಿ ಮತ್ತು ಭಾರತ ಕರೆನ್ಸಿ, ಪಾಕಿಸ್ತಾನದಲ್ಲಿ ಉತ್ಪಾದಿಸಿದ ಔಷಧಿಗಳು, ಆಹಾರ ಪದಾರ್ಥಗಳು ಪತ್ತೆಯಾಗಿವೆ. ಇದೀಗ ಈ ಪ್ರದೇಶದಲ್ಲಿ ಸೇನೆ ಕಟ್ಟೆಚ್ಚರವಹಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us