AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಒಂದೇ ಗಂಟೆಯ ಅವಧಿಯಲ್ಲಿ ಪ್ರತ್ಯೇಕ 3 ಉಗ್ರದಾಳಿ; ಮೂವರು ಬಲಿ

ಜಮ್ಮು ಕಾಶ್ಮೀರದಲ್ಲಿ ಇಂದು ಬೆಚ್ಚಿಬೀಳಿಸುವಂತಹ ಉಗ್ರದಾಳಿ ನಡೆದಿದೆ. ಒಂದೇ ಗಂಟೆಯ ಒಳಗೆ 3 ಪ್ರತ್ಯೇಕ ಉಗ್ರದಾಳಿಗಳು ನಡೆದಿವೆ.

ಶ್ರೀನಗರದಲ್ಲಿ ಒಂದೇ ಗಂಟೆಯ ಅವಧಿಯಲ್ಲಿ ಪ್ರತ್ಯೇಕ 3 ಉಗ್ರದಾಳಿ; ಮೂವರು ಬಲಿ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on:Oct 05, 2021 | 11:02 PM

Share

ಕಾಶ್ಮೀರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರ ಮತ್ತೆ ಗುಂಡಿನ ಶಬ್ದಕ್ಕೆ ಬೆಚ್ಚಿಬಿದ್ದಿದೆ. ಒಂದೇ ಗಂಟೆಯ ಅವಧಿಯಲ್ಲಿ ಬರೋಬ್ಬರಿ ಮೂರು ಗುಂಡಿನ ದಾಳಿಯಾಗಿದೆ.  ಇಕ್ಬಾಲ್‌ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಖನ್‌ಲಾಲ್‌ ಬಿಂದ್ರೂ ಎಂಬ ವ್ಯಾಪಾರಿ ಮತ್ತು ಕಾಶ್ಮೀರಿ ಪಂಡಿತರು ಮೃತಪಟ್ಟಿದ್ದಾರೆ. ಕೆಲ ಹೊತ್ತಿನ ನಂತರ ಉಗ್ರರು ನಡೆಸಿದ ದಾಳಿಯಲ್ಲಿ ಶ್ರೀನಗರದ ಲಾಲ್ ಬಜಾರ್ ಪ್ರದೇಶದ ಪಾನಿಪುರಿ ವ್ಯಾಪಾರಿ ವೀರೇಂದರ್ ಪಾಸ್ವಾನ್ ಮೃತಪಟ್ಟಿದ್ದಾರೆ. ಅವರು ಬಿಹಾರದ ಭಾಗಲಾಪುರ ಮೂಲದವರಾಗಿದ್ದರು. ಎರಡೂ ದಾಳಿಗಳ ತರುವಾಯ ಬಂಡಿಪೋರ್‌ ಪ್ರದೇಶದಲ್ಲಿ ನಡೆದ ಉಗ್ರದಾಳಿಗೆ ಮೊಹಿದ್‌ ಲೋನೆ ಎಂಬ ನಾಗರಿಕ ಸಾವನ್ನಪ್ಪಿದ್ದಾನೆ. ಈ ಮೂರು ದಾಳಿಯ ನಂತರ ಬಳಿಕ ಶ್ರೀನಗರದ ಹೊರವಲಯದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಮಖನ್‌ಲಾಲ್‌ ಬಿಂದ್ರೂ ಅವರನ್ನು ದಾಳಿ ನಡೆದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು  ದಾಳಿಯ ಸುದ್ದಿ ತಿಳಿದು ಪೊಲಿಸ್ ಸಿಬ್ಬಂದಿ ಆಗಮಿಸುವಷ್ಟರಲ್ಲಿ ದಾಳಿಕೋರರು ಸಹ ಪರಾರಿಯಾಗಿದ್ದರು ಎಂದು ವರದಿಯಾಗಿದೆ. ಸದ್ಯ ಮಖನ್‌ಲಾಲ್‌ ಬಿಂದ್ರೂ ಅವರ ಅಂಗಡಿಯಿದ್ದ ಪ್ರದೇಶದ ಮೇಲೆ ಹದ್ದಿನ ಕಣ್ಗಾವಲು ಇಡಲಾಗಿದೆ. ಮಖನ್‌ಲಾಲ್‌ ಬಿಂದ್ರೂ ಕಾಶ್ಮೀರಿ ಪಂಡಿತರೂ ಆಗಿದ್ದರು.

ಈ ಮೂರು ಉಗ್ರ ದಾಳಿಯ ನಂತರ ಕಣಿವೆ ರಾಜ್ಯದಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ. ಪೊಲೀಸರು ದಾಳಿ ನಡೆಸಿದ ಆತಂಕಕೋರರ ಪತ್ತೆಗೆ ಕಾರ್ಯಾಚರನೆ ಆರಂಭಿಸಿದ್ದಾರೆ.

ಇದನ್ನೂ ಓದಿ:

Viral News: ಜಮ್ಮು ಕಾಶ್ಮೀರಲ್ಲಿ 1,200 ವರ್ಷ ಹಳೆಯದಾದ ಕಪ್ಪು ಕಲ್ಲಿನಿಂದ ಕೆತ್ತಿದ ದುರ್ಗಾದೇವಿ ವಿಗ್ರಹ ಪತ್ತೆ 

Facebook: ಫೇಸ್​ಬುಕ್ ನಿಯಂತ್ರಣಕ್ಕೆ ಸರ್ಕಾರವೇ ನಿಯಂತ್ರಣ ಮಂಡಳಿ ರಚಿಸಲಿ: ಫ್ರಾನ್ಸಿಸ್ ಹೌಗೆನ್ ಆಗ್ರಹ

Published On - 10:38 pm, Tue, 5 October 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್