AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಹಿಮಪಾತ, ದಿಕ್ಕೇ ತೋಚದ ಸ್ಥಿತಿಯಲ್ಲಿದ್ದಾಗ ಗರ್ಭಿಣಿ ನೆರವಿಗೆ ದೇವರಂತೆ ಧಾವಿಸಿದ ಸೈನಿಕರು

ಭಾರಿ ಹಿಮಪಾತವಾಗಿ ರಸ್ತೆಗಳೆಲ್ಲಾ ಮುಚ್ಚಿದ್ದವು, ಈ ಸಮಯದಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು, ಹೇಗೆ ಆಸ್ಪತ್ರೆಗೆ ತೆರಳುವು ಎಂದು ತೋಚದೆ ಕುಟುಂಬ ಕೈಚೆಲ್ಲಿ ಕುಳಿತಿತ್ತು, ಈ ಸಂದರ್ಭದಲ್ಲಿ ಸೈನಿಕರು ದೇವರಂತೆ ಬಂದು ತಾಯಿ ಮಗುವನ್ನು ಕಾಪಾಡಿದ್ದಾರೆ, ತಮ್ಮ ವಾಹನದಲ್ಲಿ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಈಗ ತಾಯಿ, ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಹಿಮಪಾತ, ದಿಕ್ಕೇ ತೋಚದ ಸ್ಥಿತಿಯಲ್ಲಿದ್ದಾಗ ಗರ್ಭಿಣಿ ನೆರವಿಗೆ ದೇವರಂತೆ ಧಾವಿಸಿದ ಸೈನಿಕರು
ಗರ್ಭಿಣಿ
ನಯನಾ ರಾಜೀವ್
|

Updated on: Feb 04, 2024 | 12:11 PM

Share

ಉತ್ತರ ಕಾಶ್ಮೀರದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ. ಈ ಸಂದರ್ಭದಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸೈನಿಕರೊಬ್ಬರು ದೇವರಂತೆ ಬಂದು ಆಕೆಯನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ. ಜಿಲ್ಲೆಯ ಖಾನಬಾಲ್‌ನಿಂದ ಪಿಎಚ್‌ಸಿ ವಿಲ್ಗಾಮಾವರೆಗೆ ಭಾರೀ ಹಿಮಪಾತವಾಗಿದೆ. ಇದರಿಂದ ಇಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿದ್ದರು.

ಹೇಗೋ, ಭಾರೀ ಹಿಮಪಾತದ ನಡುವೆ, ಸ್ಥಳೀಯ ಆಶಾ ಕಾರ್ಯಕರ್ತೆಯರನ್ನು ಮೊದಲು ಕರೆಸಲಾಯಿತು. ಮಹಿಳೆಯ ಸ್ಥಿತಿ ಹದಗೆಡಲು ಪ್ರಾರಂಭಿಸಿದಾಗ, ಸ್ಥಳೀಯ ಆರೋಗ್ಯ ಕಾರ್ಯಕರ್ತರು ಅವಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಂತೆ ಕೇಳಿಕೊಂಡರು.

ವಿಷಯವನ್ನು ಮೊದಲು ಸ್ಥಳೀಯ ಪೊಲೀಸರಿಗೆ ಮತ್ತು ನಂತರ ಸೈನ್ಯಕ್ಕೆ ತಿಳಿಸಲಾಯಿತು. ಮಾಹಿತಿ ಪಡೆದ ತಕ್ಷಣ ಸೈನಿಕರ ತುಕಡಿ ಕಾರ್ಯಾಚರಣೆಗೆ ಬಂದಿತು. ಮಹಿಳೆಯ ಮನೆಯಿಂದ ಜಿಲ್ಲಾ ಆಸ್ಪತ್ರೆವರೆಗೆ ಮಾರ್ಗ ನಕ್ಷೆ ತಯಾರಿಸಲಾಗಿತ್ತು. ಈ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿತ್ತು. ನಂತರ ಸೇನಾ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರು ಸ್ಟ್ರೆಚರ್‌ಗಳು, ಔಷಧಗಳು ಮತ್ತು ಇತರ ಪ್ರಥಮ ಚಿಕಿತ್ಸಾ ಸಾಮಗ್ರಿಗಳನ್ನು ಹೊತ್ತು ಸ್ಥಳಕ್ಕೆ ತಲುಪಿದರು. ಆಸ್ಪತ್ರೆ ಮತ್ತು ಮಹಿಳೆಯ ಮನೆಯ ನಡುವಿನ ಅಂತರವು ಸುಮಾರು 8 ಕಿಲೋಮೀಟರ್ ಇತ್ತು. ರಸ್ತೆಯ ಮೇಲೆ ಮೂರು ಇಂಚು ಹಿಮ ಬಿದ್ದಿತ್ತು.

ಮತ್ತಷ್ಟು ಓದಿ: ಹಿಮಾಚಲ ಪ್ರದೇಶ, ಕಾಶ್ಮೀರದಲ್ಲಿ ಭಾರೀ ಹಿಮಪಾತ; ರಸ್ತೆಗಳು ಬಂದ್ ಆಗಿ ಪ್ರವಾಸಿಗರ ಪರದಾಟ

ಸಮಯಕ್ಕೆ ಸರಿಯಾಗಿ ಆಸ್ಪತ್ರೆ ತಲುಪುವ ಮೂಲಕ ಮಗು ಮತ್ತು ತಾಯಿಯ ಪ್ರಾಣ ಉಳಿಸಲಾಗಿದೆ. ಮಾಹಿತಿಯ ಪ್ರಕಾರ, ವಿಲ್ಗಮ್ ಸೇನಾ ಶಿಬಿರದ ಸೈನಿಕರು ಈ ಸಂಪೂರ್ಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯ ಪ್ರಾಣ ಉಳಿಸಿದ ಬಳಿಕ ಸ್ಥಳೀಯರು ಸೇನೆಗೆ ಧನ್ಯವಾದ ಅರ್ಪಿಸಿದ್ದಾರೆ. ಕಳೆದ ಒಂದು ವಾರದಿಂದ ಸೇನೆ ನಿರಂತರವಾಗಿ ಜನರನ್ನು ರಕ್ಷಿಸುತ್ತಿದೆ. ಉತ್ತರ ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಹಿಮಪಾತವಾಗುತ್ತಿದೆ.

ಹಿಮಪಾತ

ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕಿಶ್ತ್ವಾರ್, ರಾಜೌರಿ, ದೋಡಾ, ರಾಂಬನ್, ಪೂಂಚ್, ರಾಂಬನ್ ಮುಂತಾದ ಸ್ಥಳಗಳಲ್ಲಿ ಮಳೆ ಮತ್ತು ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ