AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್ ಪಲ್ಟಿ, ನಾಲ್ವರು ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್ ಪಲ್ಟಿಯಾಗಿದ್ದು, ಅನೇಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ಆರಂಭಿಸಿದೆ.

ಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್ ಪಲ್ಟಿ, ನಾಲ್ವರು ಸಾವು, ಹಲವರಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 16, 2024 | 11:04 AM

Share

ಇಂದು (ಏ.16) ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಝೀಲಂ ನದಿಯಲ್ಲಿ ದೋಣಿ ಮುಳುಗಿರುವ ಘಟನೆ ನಡೆದಿದೆ. ಈ ಅನಾಹುತದಿಂದ ಹಲವು ಜನ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರ ಪ್ರಕಾರ, ಈ ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳಿದ್ದರು ಎಂದು ಹೇಳಲಾಗಿದೆ. ಇದೀಗ ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು,  ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.   ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ eನದಿಯ ಹರಿವು ಹೆಚ್ಚಾಗಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.  ಈ ದೋಣಿಯಲ್ಲಿ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮುಜಾಫರ್ ಜರ್ಗರ್, ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಲ್ಲಾಳಿಗಳಿಬ್ಬರ ಜಗಳ: ಬೆಂಕಿಗಾಹುತಿಯಾಯ್ತು 1 ಕೋಟಿ ರೂ. ಮೌಲ್ಯದ ಲಂಬೋರ್ಗಿನಿ ಕಾರು

ಇನ್ನು ಈ ಘಟನೆಯ ಬಗ್ಗೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ದುಃಖ ವ್ಯಕ್ತಪಡಿಸಿದರು. ಮತ್ತು ಮಕ್ಕಳನ್ನು ಕಳೆದುಕೊಂಡ ಮಕ್ಕಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ದೋಣಿಯೊಂದು ಮುಗಿರುವ ಸುದ್ದಿ ಕೇಳಿ ತುಂಬಾ ಆಘಾತವಾಗಿದೆ. ಹಲವರು ಮಕ್ಕಳು ಸತ್ತಿರುವ ಬಗ್ಗೆ ವರದಿ ಬರುತ್ತಿದೆ. ಆ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ. ಹಾಗೂ ಕೇಂದ್ರಕ್ಕೆ ಆ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸುವೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:53 am, Tue, 16 April 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ