AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅವಳಿ ಮಕ್ಕಳ ತಂದೆ ನಾನಲ್ಲ ಎಂದಿದ್ದಕ್ಕೆ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿದ ತಾಯಿ

ಮಹಿಳೆಯೊಬ್ಬರು ತನ್ನ ಅವಳಿ ಮಕ್ಕಳ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ನಡೆದಿದೆ. ಆ ಇಬ್ಬರು ಮಕ್ಕಳ ತಂದೆ ನಾನಲ್ಲ ಎಂದು ಪತಿ ಹೇಳಿದ್ದಕ್ಕೆ ಕೋಪಗೊಂಡು ಮಹಿಳೆ ತನ್ನ ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದಾಳೆ.

ಈ ಅವಳಿ ಮಕ್ಕಳ ತಂದೆ ನಾನಲ್ಲ ಎಂದಿದ್ದಕ್ಕೆ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿದ ತಾಯಿ
ಶಿಶುಗಳು
Follow us
ನಯನಾ ರಾಜೀವ್
|

Updated on: Jul 12, 2024 | 12:09 PM

ಈ ಮಕ್ಕಳ ತಂದೆ ನಾನಲ್ಲ ಎಂದು ಪತಿ ಹೇಳಿದ್ದಕ್ಕೆ ಪತ್ನಿಯೊಬ್ಬಳು ತನ್ನ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ನಡೆದಿದೆ.  ತಾಯಿಯೊಬ್ಬಳು ತನ್ನ  ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ತನ್ನ ಪತಿ ತನ್ನನ್ನು ಮಕ್ಕಳ ತಂದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮಹಿಳೆ ತನ್ನ ನವಜಾತ ಅವಳಿ ಮಕ್ಕಳ ಕತ್ತು ಸೀಳಿದ್ದಾಳೆ ಎಂದು ಹೇಳಲಾಗುತ್ತಿದೆ.

ತನ್ನ ಶಿಶುವನ್ನು ಹೊಲಕ್ಕೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದ್ದಾಳೆ, ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್‌ನಲ್ಲಿ ನಡೆದ ಈ ಘಟನೆ ನಡೆದಿದೆ. ಎನ್​ಡಿಟಿವಿ ವರದಿ ಪ್ರಕಾರ,  ಮೂರು ತಿಂಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಹಳ ಸಮಯದ ನಂತರ ಮನೆಗೆ ಮರಳಿದ್ದರು, ಸ್ವಲ್ಪವೇ ಸಮಯದ ಬಳಿಕ ಅವಳಿ ಮಕ್ಕಳಿಗೆ ಜನ್ಮ ನೀಡಿದಾಗ ಆತ ಪೊಲೀಸರ ಬಳಿ ಹೋಗಿ ಅಕ್ರಮ ಸಂಬಂಧದಿಂದ ತನ್ನ ಪತ್ನಿ ಮಕ್ಕಳನ್ನು ಪಡೆದಿದ್ದಾಳೆ ಎಂದು ಹೇಳಿದ್ದರು.

ಇದನ್ನು ತಿಳಿದ ಮಹಿಳೆ ಕೂಡಲೇ ನವಜಾತ ಶಿಶುಗಳನ್ನು ಹೊಲಕ್ಕೆ ಕರೆದೊಯ್ದು ಹತ್ಯೆ ಮಾಡಿದ್ದಾಳೆ. ಸ್ಥಳೀಯರು ಆರಂಭದಲ್ಲಿ ವ್ಯಕ್ತಿಯೇ ಕೊಲೆ ಮಾಡಿದ್ದಾನೆ ಎಂದು ಶಂಕಿಸಿದ್ದರು ಆದರೆ ಪೊಲೀಸರು ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ.

ಮತ್ತಷ್ಟು ಓದಿ: ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಉದ್ಯಮಿಯ ಹತ್ಯೆ

ಆ ಕ್ರೂರ ತಾಯಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಏನೂ ಅರಿಯದ ಮುಗ್ಧ ಕಂದಮ್ಮಗಳು ಸರಿಯಾಗಿ ಕಣ್ಣುಬಿಡುವ ಮುನ್ನವೇ ಶಾಶ್ವತವಾಗಿ ಕಣ್ಮುಚ್ಚಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್