AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಭದ್ರವಾಹ್, ಕಿಶ್ತ್​​​ವಾರ್​​ನಲ್ಲಿ ಕರ್ಫ್ಯೂ, ಮೊಬೈಲ್ ಇಂಟರ್ನೆಟ್​​ ಸೇವೆ ಸ್ಥಗಿತ

ಉದ್ವಿಗ್ನತೆಯನ್ನು ಉಂಟುಮಾಡುವ ಪ್ರಯತ್ನದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿರುವಾಗಲೂ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ಜನರ ಸಭೆಯನ್ನು ನಿರ್ಬಂಧಿಸಲಾಗಿದೆ ಎಂದು ರಾಂಬನ್‌ನಲ್ಲಿ ಜಿಲ್ಲಾಧಿಕಾರಿ ಮಸ್ರತ್-ಉಲ್-ಇಸ್ಲಾಂ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಭದ್ರವಾಹ್, ಕಿಶ್ತ್​​​ವಾರ್​​ನಲ್ಲಿ ಕರ್ಫ್ಯೂ, ಮೊಬೈಲ್ ಇಂಟರ್ನೆಟ್​​ ಸೇವೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ಫ್ಯೂ
Follow us
TV9 Web
| Updated By: Digi Tech Desk

Updated on:Jun 10, 2022 | 7:44 PM

ಜಮ್ಮು: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಭದ್ರವಾಹ್ (Baderwah )ಮತ್ತು ಕಿಶ್ತ್‌ವಾರ್‌ನಲ್ಲಿ(Kishtwar) ಶುಕ್ರವಾರ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಬಿಜೆಪಿ ಪಕ್ಷದಿಂದ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಅವರು ಟಿವಿಯಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆ ಹಿನ್ನಲೆಯಲ್ಲಿ ಇಲ್ಲಿ ಕೋಮು ಸಂಘರ್ಷವುಂಟಾಗುವ ಸಾಧ್ಯತೆ ಇದ್ದುದರಿಂದ ಇಲ್ಲಿ ಕರ್ಫ್ಯೂ ವಿಧಿಸಲಾಗಿದೆ.  ಇಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಭದ್ರವಾಹ್​​ನಲ್ಲಿ ಮೊಬೈಲ್ ಇಂಟರ್ನೆಟ್ ಸಹ ಸ್ಥಗಿತಗೊಂಡಿದೆ. ಗುರುವಾರ ಪಟ್ಟಣದಲ್ಲಿ ಉದ್ವಿಗ್ನತೆ ಉಂಟಾಗಿದ್ದರೂ, ಅದು ಕಡಿಮೆಯಾಗಿದೆ ಮತ್ತು ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಕ್ಕದ ಕಿಶ್ತ್‌ವಾರ್‌ ಜಿಲ್ಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಕೆ ಶರ್ಮಾ ತಿಳಿಸಿದ್ದಾರೆ. “ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ ಶುಕ್ರವಾರದಂದು ಆಡಳಿತವು ಕರ್ಫ್ಯೂ ನಿರ್ಬಂಧಗಳನ್ನು ಮುಂದುವರಿಸಲು ನಿರ್ಧರಿಸಿದೆ. ನಾವು ಎರಡೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಅವರು ಸಾಮರಸ್ಯವನ್ನು ಕಾಪಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಉದ್ವಿಗ್ನತೆಯನ್ನು ಉಂಟುಮಾಡುವ ಪ್ರಯತ್ನದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿರುವಾಗಲೂ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ಜನರ ಸಭೆಯನ್ನು ನಿರ್ಬಂಧಿಸಲಾಗಿದೆ ಎಂದು ರಾಂಬನ್‌ನಲ್ಲಿ ಜಿಲ್ಲಾಧಿಕಾರಿ ಮಸ್ರತ್-ಉಲ್-ಇಸ್ಲಾಂ ಹೇಳಿದ್ದಾರೆ.

ಸ್ಥಳೀಯರ ಪ್ರಕಾರ, ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ  ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ  ವಕ್ತಾರ ನೂಪುರ್ ಶರ್ಮಾ ವಿರುದ್ಧ ಮುಸ್ಲಿಂ ಧಾರ್ಮಿಕ ಸಂಘಟನೆಯಾದ ಅಂಜುಮನ್-ಎ-ಇಸ್ಲಾಮಿಯಾ ಭದ್ರವಾಹ್  ಬಂದ್‌ಗೆ ಕರೆ ನೀಡಿತ್ತು. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ ಜಮ್ಮು ಮೂಲದ ಪತ್ರಕರ್ತರ ವಿರುದ್ಧ ಭದ್ರವಾಹ್​​ದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿದ್ದರು.

ಇದನ್ನೂ ಓದಿ
Image
ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ವಿದೇಶಾಂಗ ಸಚಿವರ ಭೇಟಿಯಲ್ಲಿ ಪ್ರವಾದಿ ಮೊಹಮ್ಮದ್ ವಿವಾದ ಬಗ್ಗೆ ಮಾತು ಬಂದಿಲ್ಲ: ಎಂಇಎ
Image
ದ್ವೇಷ ಬಿತ್ತಿದ ಆರೋಪ; ನೂಪುರ್ ಶರ್ಮ, ನವೀನ್ ಜಿಂದಾಲ್, ಓವೈಸಿ ಸೇರಿ ಇತರರ ವಿರುದ್ಧ ಕೇಸ್ ದಾಖಲು
Image
ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಹಾರಾಟ; ಬಿಎಸ್​ಎಫ್​ ಯೋಧರಿಂದ ಗುಂಡಿನ ದಾಳಿ

“ಪ್ರತಿಭಟನೆಗಳ ಸಮಯದಲ್ಲಿ ಒಬ್ಬ ವ್ಯಕ್ತಿ ಹಿಂದೂಗಳ ವಿರುದ್ಧ ಪ್ರಚೋದನಕಾರಿ ಭಾಷಣವನ್ನು ಮಾಡಿದರು, ಅದು ಪ್ರತಿಭಟನೆಯನ್ನು ಪ್ರಚೋದಿಸಿತು” ಎಂದು ಭದ್ರವಾಹ್ ಪಟ್ಟಣದ ನಿವಾಸಿಯೊಬ್ಬರು  ಹೇಳಿರುವುದಾಗಿ ಸ್ಕ್ರಾಲ್ ಡಾಟ್ ಇನ್  ವರದಿ ಮಾಡಿದೆ.

ಇಲ್ಲಿನ ಹಿಂದೂಗಳು ಭಾಷಣಕಾರನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪ್ರವಾದಿ ಮುಹಮ್ಮದ್ ವಿರುದ್ಧ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆದ ನಂತರ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಯಿತು. ಇದನ್ನು ಸ್ಥಳೀಯ ಹುಡುಗನೊಬ್ಬ ಮಾಡಿದ್ದಾನೆ. “ಇದು ಮತ್ತಷ್ಟು ಪ್ರತಿಭಟನೆಗಳನ್ನು ಪ್ರಚೋದಿಸಿತು,” ನಿವಾಸಿ ಹೇಳಿದರು. “ಮುಸ್ಲಿಮರು ಮತ್ತು ಹಿಂದೂಗಳು ಇಬ್ಬರೂ ತಮ್ಮ ತಮ್ಮ ಪ್ರದೇಶಗಳಲ್ಲಿ ಪ್ರತಿಭಟಿಸಲು ಜಮಾಯಿಸಿದರು. ತಡರಾತ್ರಿವರೆಗೂ ಪ್ರತಿಭಟನೆ ಮುಂದುವರಿದಿತ್ತು. ತೀವ್ರ ಪ್ರತಿಭಟನೆಗಳು ನಡೆದವು ಆದರೆ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ನಿಯೋಜಿಸಲ್ಪಟ್ಟಿದ್ದರಿಂದ ಯಾವುದೇ ಘರ್ಷಣೆಗಳು ನಡೆಯಲಿಲ್ಲ.

ಮುಸ್ಲಿಂ ಭಾಷಣಕಾರನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಮತ್ತು 506 (ಅಪರಾಧ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಆರೋಪ ಹೊರಿಸಲಾಯಿತು.

ಉದ್ವಿಗ್ನತೆಯನ್ನು ಉಂಟುಮಾಡುವ ಪ್ರಯತ್ನದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿರುವಾಗಲೂ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ಜನರ ಸಭೆಯನ್ನು ನಿರ್ಬಂಧಿಸಲಾಗಿದೆ ಎಂದು ರಾಂಬನ್‌ನಲ್ಲಿ ಜಿಲ್ಲಾಧಿಕಾರಿ ಮಸ್ರತ್-ಉಲ್-ಇಸ್ಲಾಂ ಹೇಳಿದ್ದಾರೆ.

Published On - 1:47 pm, Fri, 10 June 22

ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ