AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಚಳಿಗೆ ಮಂಜುಗಡ್ಡೆಯಾದ ದಾಲ್ ಕೆರೆ

ಜಮ್ಮು-ಕಾಶ್ಮೀರದ ಶ್ರೀನಗರದ ಜನತೆ ಚಳಿಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಚಳಿಗೆ ಜಮ್ಮು-ಕಾಶ್ಮೀರದ ‘ದಾಲ್ ಲೇಕ್’ ಸಂಪೂರ್ಣ ಹೆಪ್ಪುಗಟ್ಟಿ ಹೋಗಿದೆ. ಇಡೀ ಕೆರೆ ಮಂಜು ಗಡ್ಡೆಯಂತೆ ಆಗಿದ್ದು, ಕಣಿವೆ ರಾಜ್ಯದಲ್ಲಿ ಸದ್ಯ ಎದುರಾಗಿರೋ ಪರಿಸ್ಥಿತಿಯನ್ನ ಬಿಂಬಿಸುತ್ತಿದೆ. 4 ಅಂತಸ್ತಿನ ಕಟ್ಟಡ ನೆಲಸಮ 4 ಅಂತಸ್ತಿನ ಕಟ್ಟಡವೊಂದನ್ನು ಇಂಧೋರ್​ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ. ನಿಗದಿತ ಎತ್ತರಕ್ಕಿಂತ ಹೆಚ್ಚು ಮಹಡಿ ಕಟ್ಟಿದ ಕಾರಣ ಇಂಧೋರ್ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ. ಇಂದೋರ್​ನ ಸಂತ ನಗರದಲ್ಲಿ ಈ ಕಟ್ಟಡವಿತ್ತು. ಪಾಲಿಕೆ ಕ್ರಮಕ್ಕೆ […]

ತೀವ್ರ ಚಳಿಗೆ ಮಂಜುಗಡ್ಡೆಯಾದ ದಾಲ್ ಕೆರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 30, 2019 | 7:58 AM

Share

ಜಮ್ಮು-ಕಾಶ್ಮೀರದ ಶ್ರೀನಗರದ ಜನತೆ ಚಳಿಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಚಳಿಗೆ ಜಮ್ಮು-ಕಾಶ್ಮೀರದ ‘ದಾಲ್ ಲೇಕ್’ ಸಂಪೂರ್ಣ ಹೆಪ್ಪುಗಟ್ಟಿ ಹೋಗಿದೆ. ಇಡೀ ಕೆರೆ ಮಂಜು ಗಡ್ಡೆಯಂತೆ ಆಗಿದ್ದು, ಕಣಿವೆ ರಾಜ್ಯದಲ್ಲಿ ಸದ್ಯ ಎದುರಾಗಿರೋ ಪರಿಸ್ಥಿತಿಯನ್ನ ಬಿಂಬಿಸುತ್ತಿದೆ.

4 ಅಂತಸ್ತಿನ ಕಟ್ಟಡ ನೆಲಸಮ 4 ಅಂತಸ್ತಿನ ಕಟ್ಟಡವೊಂದನ್ನು ಇಂಧೋರ್​ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ. ನಿಗದಿತ ಎತ್ತರಕ್ಕಿಂತ ಹೆಚ್ಚು ಮಹಡಿ ಕಟ್ಟಿದ ಕಾರಣ ಇಂಧೋರ್ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ. ಇಂದೋರ್​ನ ಸಂತ ನಗರದಲ್ಲಿ ಈ ಕಟ್ಟಡವಿತ್ತು. ಪಾಲಿಕೆ ಕ್ರಮಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಡುಗುತ್ತಿದೆ ‘ಉತ್ತರ ಭಾರತ’..! ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚಳಿ ದಾಖಲಾಗಿದ್ದು, ಮೈಕೊರೆಯುವ ಚಳಿಯಿಂದ ಜನ ತತ್ತರಿಸಿದ್ದಾರೆ. ನಿನ್ನೆ ಬೆಳಗ್ಗೆ ದೆಹಲಿಯಲ್ಲಿ ಕನಿಷ್ಠ ತಾಪಮಾನ 3.4ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಿದೆ. ದಟ್ಟ ಮಂಜಿನಿಂದಾಗಿ ರಸ್ತೆಗಳಲ್ಲಿ ಕತ್ತಲು ಆವರಿಸಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಬೀದಿ ನಾಯಿಗಳ ಕಳ್ಳಸಾಗಣೆ ತ್ರಿಪುರ-ಮಿಜೋರಾಂ ಗಡಿಯಲ್ಲಿ ಬೀದಿ ನಾಯಿಗಳ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 12 ನಾಯಿಗಳನ್ನು ಮಿಜೋರಾಂಗೆ ಕಳ್ಳಸಾಗಣೆ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಮಿಜೋರಾಂನಲ್ಲಿ ನಾಯಿ ಮಾಂಸಕ್ಕೆ ಭಾರಿ ಬೇಡಿಕೆಯಿದ್ದು, ಇದೇ ಕಾರಣಕ್ಕೆ ಕಳ್ಳಸಾಗಾಣೆ ಮಾಡಲು ಯತ್ನಿಸಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು