AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣಾ ಫಲಿತಾಂಶ: ಕಾಶ್ಮೀರದಲ್ಲೂ ಖಾತೆ ತೆರೆದ ಬಿಜೆಪಿ

ಬಿಜೆಪಿ ಪಕ್ಷವು ಕಾಶ್ಮೀರದಲ್ಲೂ ಖಾತೆ ತೆರೆದಿದೆ. ಜಮ್ಮು ಪ್ರಾಂತ್ಯದ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಭಯೋತ್ಪಾದನೆಯಿಂದ ಕುಖ್ಯಾತಿ ಪಡೆದಿರುವ ಪುಲ್ವಾಮದ ಕಾಕಪೋರದಲ್ಲಿ ಬಿಜೆಪಿಯ ಮಹಿಳಾ ಅಭ್ಯರ್ಥಿ ಮಿನ್ನಾ ಲತೀಫ್ ಜಯಗಳಿಸಿದ್ದಾರೆ.

ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣಾ ಫಲಿತಾಂಶ: ಕಾಶ್ಮೀರದಲ್ಲೂ ಖಾತೆ ತೆರೆದ ಬಿಜೆಪಿ
ಜಮ್ಮುಕಾಶ್ಮೀರದಲ್ಲಿ ನಡೆದ ಚುನಾವಣೆ
Follow us
ರಾಜೇಶ್ ದುಗ್ಗುಮನೆ
|

Updated on: Dec 22, 2020 | 8:42 PM

ನವದೆಹಲಿ: ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಈ ತಿಂಗಳು ಜಮ್ಮು ಕಾಶ್ಮೀರದ ಡಿಸ್ಟ್ರಿಕ್ ಡೆವಲಪ್ ಮೆಂಟ್ ಕೌನ್ಸಿಲ್‌ಗೆ ಚುನಾವಣೆ ನಡೆದಿತ್ತು. ಇದರ ಮತಎಣಿಕೆ ಬೆಳಿಗ್ಗೆಯಿಂದ ನಡೆಯುತ್ತಿದೆ. ಒಟ್ಟು 280 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಇವುಗಳ ಪೈಕಿ ಇದುವರೆಗೂ 268 ವಾರ್ಡ್ ಗಳ ಮತಎಣಿಕೆಯ ಮಾಹಿತಿ ಲಭ್ಯವಾಗಿದೆ. ಈ ಪೈಕಿ ಬಿಜೆಪಿ ಕೂಡ ಕಾಶ್ಮೀರದಲ್ಲಿ ಖಾತೆ ತೆರೆದಿದೆ.

ಜಮ್ಮು ಕಾಶ್ಮೀರದ ಫಾರೂಕ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಪರೆನ್ಸ್ ಹಾಗೂ ಮೆಹಬೂಬ್ ಮುಫ್ತಿ ನೇತೃತ್ವದ ಪಿಡಿಪಿ ಹಾಗೂ ಸಿಪಿಐ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಗುಪ್ಕರ್ ಮೈತ್ರಿಕೂಟದ ಹೆಸರಿನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಬಿಜೆಪಿ ಪಕ್ಷವು ಕಾಶ್ಮೀರದಲ್ಲಿ  ಕಮಲವನ್ನು ಅರಳಿಸಲು  ಹೋರಾಟ ನಡೆಸಿತ್ತು. ಕಾಂಗ್ರೆಸ್ ಪಕ್ಷವು ತನ್ನ ಆಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸಿತ್ತು.

ಕಾಂಗ್ರೆಸ್ ತಾನು ಗುಪ್ಕರ್ ಮೈತ್ರಿಕೂಟದ ಭಾಗವಲ್ಲ ಎಂದು ಚುನಾವಣೆಗೂ ಮುನ್ನ ಘೋಷಿಸಿತ್ತು. ಗುಪ್ಕರ್ ಮೈತ್ರಿಕೂಟದ ನಾಯಕರು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಮತ್ತೆ ನೀಡಬೇಕೆಂಬ ಬೇಡಿಕೆಯನ್ನು ಇಟ್ಟುಕೊಂಡು ಚುನಾವಣೆ ಎದುರಿಸಿದ್ದರು. ಹೀಗಾಗಿ ಕಾಂಗ್ರೆಸ್ ಗುಪ್ಕರ್ ಮೈತ್ರಿಕೂಟದ ಹೊರಗೆ ಉಳಿದು ಪ್ರತೇಕವಾಗಿ ಚುನಾವಣೆಗೆ ಸ್ಪರ್ಧೆ ಮಾಡಿತ್ತು. ಕಾಶ್ಮೀರ ಕಣಿವೆಯಲ್ಲಿ ಪ್ರತಿ ಚುನಾವಣೆಗಳಲ್ಲೂ ಪ್ರತೇಕತಾವಾದಿಗಳು ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡ್ತಾರೆ. ಇದರಿಂದ ಮತದಾನದ ಪ್ರಮಾಣ ಕಡಿಮೆಯಾಗ್ತಿದೆ . ಈ ಬಾರಿಯೂ ಮತದಾನದ ಪ್ರಮಾಣ ಕಡಿಮೆಯಾಗಿದ್ದರೂ , ಚುನಾವಣೆ ನಡೆದಿರುವುದು ವಿಶೇಷ.

ಬಿಜೆಪಿ ಪಕ್ಷವು ಕಾಶ್ಮೀರದಲ್ಲೂ ಖಾತೆ ತೆರೆದಿದೆ. ಜಮ್ಮು ಪ್ರಾಂತ್ಯದ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಭಯೋತ್ಪಾದನೆಯಿಂದ ಕುಖ್ಯಾತಿ ಪಡೆದಿರುವ ಪುಲ್ವಾಮದ ಕಾಕಪೋರದಲ್ಲಿ ಬಿಜೆಪಿಯ ಮಹಿಳಾ ಅಭ್ಯರ್ಥಿ ಮಿನ್ನಾ ಲತೀಫ್ ಜಯಗಳಿಸಿದ್ದಾರೆ. ಇನ್ನೂ ಶ್ರೀನಗರದ ಕನ್ನಮೋವ 2ನೇ ವಾರ್ಡ್ ನಲ್ಲಿ ಇಂಜಿನಿಯರ್ ಐಜಾಜ್ ಹುಸೇನ್ ಎನ್ನುವ ಬಿಜೆಪಿ ಅಭ್ಯರ್ಥಿ ಜಯಗಳಿಸಿದ್ದಾರೆ. ಇದುವರೆಗೂ ಮೂವರು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಗುಪ್ಕರ್ ಮೈತ್ರಿಕೂಟವು ಇದುವರೆಗೂ ಒಟ್ಟು 108 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಪೈಕಿ ಈಗಾಗಲೇ 47 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. ಇನ್ನೂಳಿದ 61 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಇದುವರೆಗೂ ಒಟ್ಟು 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಪೈಕಿ 3 ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. ಇನ್ನೂಳಿದ 73 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್ ಪಕ್ಷವು 22 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ. 7 ವಾರ್ಡ್ ಗಳಲ್ಲಿ ಈಗಾಗಲೇ ಕಾಂಗ್ರೆಸ್ ಜಯಗಳಿಸಿದ್ದು , 15 ವಾರ್ಡ್ ಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜಮ್ಮು ಕಾಶ್ಮೀರದ ಅಪ್ನಿ ಪಾರ್ಟಿಯು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಪೈಕಿ 6 ವಾರ್ಡ್ ಗಳಲ್ಲಿ ಗೆಲವು ದಾಖಲಿಸಿದೆ. 4 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.  ಪಕ್ಷೇತರ ಸೇರಿದಂತೆ ಇತರೆ ಅಭ್ಯರ್ಥಿಗಳು ಒಟ್ಟು 55 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇವುಗಳ ಪೈಕಿ 21 ವಾರ್ಡ್ ಗಳಲ್ಲಿ ಈಗಾಗಲೇ ಪಕ್ಷೇತರ ಸೇರಿದಂತೆ ಇತರೆ ಅಭ್ಯರ್ಥಿಗಳು ಜಯ ದಾಖಲಿದ್ದಾರೆ. 34 ವಾರ್ಡ್ ಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಶ್ಮೀರದಲ್ಲಿ ಖಾತೆ ತೆರೆದ ಕಮಲ: 113 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಗುಪ್ಕಾರ್ ಮೈತ್ರಿಕೂಟ

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ