AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Encounter: ಜಮ್ಮು ಮತ್ತು ಕಾಶ್ಮೀರದ ಗುಲ್ಗಾಮ್​ನಲ್ಲಿ ಎನ್​ಕೌಂಟರ್​, ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾವ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕುಲ್ಗಾಮ್, ಬಂಡಿಪೋರಾ, ಶೋಪಿಯಾನ್ ಮತ್ತು ಪುಲ್ವಾಮಾದ ನಾಲ್ಕು ಜಿಲ್ಲೆಗಳ ಹನ್ನೆರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

Encounter: ಜಮ್ಮು ಮತ್ತು ಕಾಶ್ಮೀರದ ಗುಲ್ಗಾಮ್​ನಲ್ಲಿ ಎನ್​ಕೌಂಟರ್​, ಓರ್ವ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರ ಎನ್​ಕೌಂಟರ್
ನಯನಾ ರಾಜೀವ್
|

Updated on: Jun 27, 2023 | 8:26 AM

Share

ಜಮ್ಮು ಮತ್ತು ಕಾಶ್ಮೀರ(Jammu And Kashmir)ದ ಕುಲ್ಗಾವ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರ(Terrorist)ನನ್ನು ಹತ್ಯೆ ಮಾಡಲಾಗಿದೆ. ಕುಲ್ಗಾಮ್, ಬಂಡಿಪೋರಾ, ಶೋಪಿಯಾನ್ ಮತ್ತು ಪುಲ್ವಾಮಾದ ನಾಲ್ಕು ಜಿಲ್ಲೆಗಳ ಹನ್ನೆರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಈ ಎನ್‌ಕೌಂಟರ್‌ನಲ್ಲಿ ಹತನಾದ ಭಯೋತ್ಪಾದಕ ಗಡಿಯಾಚೆಯಿಂದ ಬಂದವನಲ್ಲ, ಸ್ಥಳೀಯನಾಗಿದ್ದನು ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ಕ್ರಿಮಿನಲ್​ ಗುಫ್ರಾನ್​ ಹತ್ಯೆ

ಇವರನ್ನು ಆದಿಲ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದೆ. ಬಹಿರಂಗವಾದ ಮಾಹಿತಿಯ ಪ್ರಕಾರ, ಹತ್ಯೆಗೀಡಾದ ಭಯೋತ್ಪಾದಕ ಆದಿಲ್ ಇತ್ತೀಚೆಗೆ ಅಲ್ ಬದ್ರ್ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೌರಾ ಗ್ರಾಮದ ಮನೆಯೊಂದರಲ್ಲಿ ಭಯೋತ್ಪಾದಕ ಅಡಗಿಕೊಂಡಿದ್ದ. ಈ ಬಗ್ಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಮಾಹಿತಿ ಪಡೆದಿದ್ದರು. ನಂತರ ತಕ್ಷಣವೇ ಉಗ್ರರನ್ನು ಸುತ್ತುವರಿಯಲು ಕಾರ್ಯಾಚರಣೆ ನಡೆಸಲಾಯಿತು. ಪ್ರಸ್ತುತ, ಪೊಲೀಸರು ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ತನಿಖೆ ನಡೆಸಲಾಗುತ್ತಿದೆ. ಭಯೋತ್ಪಾದಕ ಅಡಗಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ಜಂಟಿ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿತ್ತು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ