AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ಕಾಶ್ಮೀರದ ಬಿಜೆಪಿ ನಾಯಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಹೀರಾನಗರ ಪಟ್ಟಣದಲ್ಲಿರುವ ಮನೆಯಿಂದ ಸ್ವಲ್ಪ ದೂರದಲ್ಲಿ ಬಿಜೆಪಿ ಮುಖಂಡ ಸೋಮಿ ರಾಜ್ ಅವರ ಶವ ಮರಕ್ಕೆ ನೇತಾಡುತ್ತಿರುವುದನ್ನು ಗ್ರಾಮಸ್ಥರು ಬೆಳಿಗ್ಗೆ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಾಪತ್ತೆಯಾಗಿದ್ದ ಕಾಶ್ಮೀರದ ಬಿಜೆಪಿ ನಾಯಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಸಾಂದರ್ಭಿಕ ಚಿತ್ರImage Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on: Aug 24, 2022 | 9:52 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಬಿಜೆಪಿ (BJP) ನಾಯಕನ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು (Shocking News) ನಡೆದಿದೆ. ಬಿಜೆಪಿ ನಾಯಕ ಸೋಮಿ ರಾಜ್ ಕೆಲವು ಸಮಯದ ಹಿಂದೆ ನಾಪತ್ತೆಯಾಗಿದ್ದರು. ಕಥುವಾ ಹೀರಾನಗರ ಟೌನ್ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿರುವುದರ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ. ANI ವರದಿಗಳ ಪ್ರಕಾರ, ಬಿಜೆಪಿ ನಾಯಕನ ಸಾವಿನ ನಿಖರವಾದ ಕಾರಣವನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಹೀರಾನಗರ ಪಟ್ಟಣದಲ್ಲಿರುವ ತಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿ ಬಿಜೆಪಿ ಮುಖಂಡ ಸೋಮಿ ರಾಜ್ ಅವರ ಶವ ಮರಕ್ಕೆ ನೇತಾಡುತ್ತಿರುವುದನ್ನು ಗ್ರಾಮಸ್ಥರು ಬೆಳಿಗ್ಗೆ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹದ ಮೇಲೆ ರಕ್ತದ ಗುರುತುಗಳಿದ್ದು, ಸಮೀಪದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯನ್ನೇ ಕೊಲೆಗೈದ ಪತಿಯ ಬಂಧನ

ಮೂಲಗಳ ಪ್ರಕಾರ, ಬಿಜೆಪಿ ನಾಯಕ ಸೋಮಿ ರಾಜ್ ನಿನ್ನೆ ನಾಪತ್ತೆಯಾಗಿದ್ದು, ಬಳಿಕ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಸಂಬಂಧ ಹೀರಾನಗರ ಪೊಲೀಸರು ಸೆಕ್ಷನ್ 174 ಸಿಆರ್‌ಪಿಸಿ ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದರು. ಅವರ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಹಾಗೂ ಬಿಜೆಪಿಯ ಹಲವು ಮುಖಂಡರು ಆಗ್ರಹಿಸಿದ್ದಾರೆ. ವೈದ್ಯಕೀಯ ಮತ್ತು ಕಾನೂನು ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಮೃತರ ದೇಹವನ್ನು ಅಂತಿಮ ವಿಧಿಗಳಿಗಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಇದನ್ನೂ ಓದಿ: ಐಟಿಬಿಪಿ ಯೋಧರ ಪಾರ್ಥಿವ ಶರೀರವಿದ್ದ ಶವಪೆಟ್ಟಿಗೆಗೆ ಹೆಗಲು ನೀಡಿದ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್

ಈ ಬಗ್ಗೆ ತನಿಖೆ ನಡೆಸಲು ಎಸ್‌ಡಿಪಿಒ ಬಾರ್ಡರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಥುವಾ ಆರ್‌ಸಿ ಕೊತ್ವಾಲ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಗುರಿಯಾಗಿಸಿಕೊಂಡಿರುವುದು ಇದೇ ಮೊದಲಲ್ಲ. ಕಳೆದ 2 ವರ್ಷಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ 23ಕ್ಕೂ ಹೆಚ್ಚು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್