ರಿಯಾಸಿಯಲ್ಲಿ ನಡೆದ ಉಗ್ರ ದಾಳಿ ಹಿಂದಿದೆ ಪಾಕಿಸ್ತಾನದ ಈ ಭಯೋತ್ಪಾದಕ ಗುಂಪಿನ ಕೈವಾಡ

ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಉಗ್ರರ ದಾಳಿ ಹಿಂದೆ ಎಲ್​ಇಟಿ ಭಯೋತ್ಪಾದಕ ಗುಂಪಿನ ಕೈವಾಡವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಭಾನುವಾರ ಬಸ್​ ಮೇಲೆ ಗುಂಡಿನ ದಾಳಿ ನಡೆದಿದ್ದು, ಪರಿಣಾಮ ಬಸ್​ ಕಂದಕಕ್ಕೆ ಬಿದ್ದು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದರು.

ರಿಯಾಸಿಯಲ್ಲಿ ನಡೆದ ಉಗ್ರ ದಾಳಿ ಹಿಂದಿದೆ ಪಾಕಿಸ್ತಾನದ ಈ ಭಯೋತ್ಪಾದಕ ಗುಂಪಿನ ಕೈವಾಡ
Follow us
|

Updated on: Jun 10, 2024 | 11:11 AM

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಿಯಾಸಿಯಲ್ಲಿ ಭಾನುವಾರ ಯಾತ್ರಾರ್ಥಿಗಳಿದ್ದ ಬಸ್​ ಮೇಲೆ ನಡೆದ ಉಗ್ರರ ದಾಳಿ(Terror Attack)ಯ ಹಿಂದೆ ಪಾಕಿಸ್ತಾನದ ಎಲ್​ಇಟಿ(LeT) ಭಯೋತ್ಪಾದಕ ಗುಂಪಿನ ಕೈವಾಡವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಿಯಾಸಿಯಲ್ಲಿ ಬಸ್​ ಮೇಲೆ ಉಗ್ರರು 30-40 ಸುತ್ತಿನ ಗುಂಡಿನ ದಾಳಿ ನಡೆಸಿದ್ದರು. ಆ ದಾಳಿಯಲ್ಲಿ ಒಂದು ಗುಂಡು ಬಸ್​ ಚಾಲಕನಿಗೆ ತಗುಲಿದ ಕಾರಣ ಚಾಲಕ ನಿಯಂತ್ರಣ ತಪ್ಪಿ ಬಸ್​ ಕಂದಕಕ್ಕೆ ಬಿದ್ದಿತ್ತು ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ.

ಬಸ್​ನಲ್ಲಿ 30-40 ಮಂದಿ ಇದ್ದ ಕುರಿತು ಮಾಹಿತಿ ಲಭ್ಯವಾಗಿದೆ.ಸುಮಾರು 12 ಮಂದಿ ಉಗ್ರರು ಎರಡು ಅಥವಾ ಮೂರು ಗುಂಪುಗಳಾಗಿ ಜಮ್ಮು ಮತ್ತು ಕಾಶ್ಮೀರದ ಅರಣ್ಯ ಪ್ರದೇಶದೊಳಗೆ ಚಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ,. ಹಾಗಾಗಿ ಡ್ರೋನ್​ ವ್ಯವಸ್ಥೆ ಮಾಡಲಾಗಿದ್ದು, ಕಾಡಿನ ಮೇಲೆ ತೀವ್ರ ನಿಗಾವಹಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಪೂಂಚ್ ಹಾಗೂ ರಜೌರಿಯಲ್ಲಿ ಈ ರೀತಿಯ ಹಲವು ಗುಂಡಿನ ದಾಳಿಗಳು ನಡೆದಿವೆ. ಜೂನ್​ 29ರಿಂದ ಅಮರನಾಥ ಯಾತ್ರೆ ಆರಂಭವಾಗುತ್ತಿದ್ದು, ಈ ಕುರಿತು ಗೃಹ ಸಚಿವ ಅಮಿತ್ ಶಾ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಮತ್ತಷ್ಟು ಓದಿ: ಆ ಒಂದು ಬುಲೆಟ್​ನಿಂದ ಕಂದಕಕ್ಕೆ ಬಿದ್ದಿತ್ತು ಬಸ್​, ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು ಹೇಗೆ?

ಭಾರತವು ರಿಯಾಸಿ ಮೇಲೆ ನಡೆದ ಉಗ್ರರ ದಾಳಿಗೆ ಸೂಕ್ತ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಈ ಪಾಕಿಸ್ತಾನಿ ಗುಂಪನ್ನು ತಟಸ್ಥಗೊಳಿಸಲು ಜಮ್ಮು ಮತ್ತು ಕಾಶ್ಮೀರ ಪೋಲೀಸ್, ಅರೆ-ಮಿಲಿಟರಿ ಪಡೆಗಳು ಮತ್ತು ಭಾರತೀಯ ಸೇನೆಯು ಕ್ರಿಯಾಶೀಲವಾಗಿ ಕೆಲಸ ಮಾಡುತ್ತವೆ.

ಬಸ್ಸಿನ ಸುತ್ತಲಿನ ಚಿತ್ರಗಳು ಆತಂಕವನ್ನು ಸೃಷ್ಟಿಸುತ್ತದೆ. ಎಲ್ಲೆಂದರಲ್ಲಿ ಹಲವರ ಶವಗಳು ಬಿದ್ದಿರುವುದು ಕಂಡು ಬಂದಿದೆ. ಮೃತದೇಹಗಳು ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಅವರಲ್ಲಿ ಕೆಲವು ಮಕ್ಕಳ ಶವಗಳಿದ್ದವು. ಪೌನಿ ಮತ್ತು ರಾನ್ಸು ನಡುವಿನ ಚಂಡಿ ಮೋಡ್‌ನಲ್ಲಿರುವ ದರ್ಗಾ ಬಳಿ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳು ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನದಿಂದ ಬಂದವರು. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾ ಆಸ್ಪತ್ರೆ ರಿಯಾಸಿ, ನಾರಾಯಣ ಆಸ್ಪತ್ರೆ, ಕತ್ರಾ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು, ಜಮ್ಮುವಿಗೆ ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ