AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಸಿಯಲ್ಲಿ ನಡೆದ ಉಗ್ರ ದಾಳಿ ಹಿಂದಿದೆ ಪಾಕಿಸ್ತಾನದ ಈ ಭಯೋತ್ಪಾದಕ ಗುಂಪಿನ ಕೈವಾಡ

ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಉಗ್ರರ ದಾಳಿ ಹಿಂದೆ ಎಲ್​ಇಟಿ ಭಯೋತ್ಪಾದಕ ಗುಂಪಿನ ಕೈವಾಡವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಭಾನುವಾರ ಬಸ್​ ಮೇಲೆ ಗುಂಡಿನ ದಾಳಿ ನಡೆದಿದ್ದು, ಪರಿಣಾಮ ಬಸ್​ ಕಂದಕಕ್ಕೆ ಬಿದ್ದು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದರು.

ರಿಯಾಸಿಯಲ್ಲಿ ನಡೆದ ಉಗ್ರ ದಾಳಿ ಹಿಂದಿದೆ ಪಾಕಿಸ್ತಾನದ ಈ ಭಯೋತ್ಪಾದಕ ಗುಂಪಿನ ಕೈವಾಡ
ನಯನಾ ರಾಜೀವ್
|

Updated on: Jun 10, 2024 | 11:11 AM

Share

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಿಯಾಸಿಯಲ್ಲಿ ಭಾನುವಾರ ಯಾತ್ರಾರ್ಥಿಗಳಿದ್ದ ಬಸ್​ ಮೇಲೆ ನಡೆದ ಉಗ್ರರ ದಾಳಿ(Terror Attack)ಯ ಹಿಂದೆ ಪಾಕಿಸ್ತಾನದ ಎಲ್​ಇಟಿ(LeT) ಭಯೋತ್ಪಾದಕ ಗುಂಪಿನ ಕೈವಾಡವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಿಯಾಸಿಯಲ್ಲಿ ಬಸ್​ ಮೇಲೆ ಉಗ್ರರು 30-40 ಸುತ್ತಿನ ಗುಂಡಿನ ದಾಳಿ ನಡೆಸಿದ್ದರು. ಆ ದಾಳಿಯಲ್ಲಿ ಒಂದು ಗುಂಡು ಬಸ್​ ಚಾಲಕನಿಗೆ ತಗುಲಿದ ಕಾರಣ ಚಾಲಕ ನಿಯಂತ್ರಣ ತಪ್ಪಿ ಬಸ್​ ಕಂದಕಕ್ಕೆ ಬಿದ್ದಿತ್ತು ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ.

ಬಸ್​ನಲ್ಲಿ 30-40 ಮಂದಿ ಇದ್ದ ಕುರಿತು ಮಾಹಿತಿ ಲಭ್ಯವಾಗಿದೆ.ಸುಮಾರು 12 ಮಂದಿ ಉಗ್ರರು ಎರಡು ಅಥವಾ ಮೂರು ಗುಂಪುಗಳಾಗಿ ಜಮ್ಮು ಮತ್ತು ಕಾಶ್ಮೀರದ ಅರಣ್ಯ ಪ್ರದೇಶದೊಳಗೆ ಚಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ,. ಹಾಗಾಗಿ ಡ್ರೋನ್​ ವ್ಯವಸ್ಥೆ ಮಾಡಲಾಗಿದ್ದು, ಕಾಡಿನ ಮೇಲೆ ತೀವ್ರ ನಿಗಾವಹಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಪೂಂಚ್ ಹಾಗೂ ರಜೌರಿಯಲ್ಲಿ ಈ ರೀತಿಯ ಹಲವು ಗುಂಡಿನ ದಾಳಿಗಳು ನಡೆದಿವೆ. ಜೂನ್​ 29ರಿಂದ ಅಮರನಾಥ ಯಾತ್ರೆ ಆರಂಭವಾಗುತ್ತಿದ್ದು, ಈ ಕುರಿತು ಗೃಹ ಸಚಿವ ಅಮಿತ್ ಶಾ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಮತ್ತಷ್ಟು ಓದಿ: ಆ ಒಂದು ಬುಲೆಟ್​ನಿಂದ ಕಂದಕಕ್ಕೆ ಬಿದ್ದಿತ್ತು ಬಸ್​, ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು ಹೇಗೆ?

ಭಾರತವು ರಿಯಾಸಿ ಮೇಲೆ ನಡೆದ ಉಗ್ರರ ದಾಳಿಗೆ ಸೂಕ್ತ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಈ ಪಾಕಿಸ್ತಾನಿ ಗುಂಪನ್ನು ತಟಸ್ಥಗೊಳಿಸಲು ಜಮ್ಮು ಮತ್ತು ಕಾಶ್ಮೀರ ಪೋಲೀಸ್, ಅರೆ-ಮಿಲಿಟರಿ ಪಡೆಗಳು ಮತ್ತು ಭಾರತೀಯ ಸೇನೆಯು ಕ್ರಿಯಾಶೀಲವಾಗಿ ಕೆಲಸ ಮಾಡುತ್ತವೆ.

ಬಸ್ಸಿನ ಸುತ್ತಲಿನ ಚಿತ್ರಗಳು ಆತಂಕವನ್ನು ಸೃಷ್ಟಿಸುತ್ತದೆ. ಎಲ್ಲೆಂದರಲ್ಲಿ ಹಲವರ ಶವಗಳು ಬಿದ್ದಿರುವುದು ಕಂಡು ಬಂದಿದೆ. ಮೃತದೇಹಗಳು ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಅವರಲ್ಲಿ ಕೆಲವು ಮಕ್ಕಳ ಶವಗಳಿದ್ದವು. ಪೌನಿ ಮತ್ತು ರಾನ್ಸು ನಡುವಿನ ಚಂಡಿ ಮೋಡ್‌ನಲ್ಲಿರುವ ದರ್ಗಾ ಬಳಿ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳು ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನದಿಂದ ಬಂದವರು. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾ ಆಸ್ಪತ್ರೆ ರಿಯಾಸಿ, ನಾರಾಯಣ ಆಸ್ಪತ್ರೆ, ಕತ್ರಾ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು, ಜಮ್ಮುವಿಗೆ ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!