ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ತೆಗೆದು ಹಾಕಿದ ಬಳಿಕ ಪ್ರಧಾನಿ ಮೋದಿ ಮೊದಲ ಭೇಟಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರಕ್ಕೆ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಅನೇಕ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ಶ್ರೀನಗರದಲ್ಲಿ 6,400 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರಕ್ಕೆ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಅನೇಕ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ಶ್ರೀನಗರದಲ್ಲಿ 6,400 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ತೆಗೆದು ಹಾಕಿದ ಬಳಿಕ ಪ್ರಧಾನಿ ಮೋದಿ ಮೊದಲ ಭೇಟಿ
ನರೇಂದ್ರ ಮೋದಿ
Image Credit source: India Today

Updated on: Mar 07, 2024 | 7:45 AM

ಜಮ್ಮು ಮತ್ತು ಕಾಶ್ಮೀರ(Jammu And Kashmir)ಕ್ಕೆ ವಿಶೇಷ ಸ್ಥಾನ ನೀಡುವ ಸಂವಿಧಾನದ 370ನೇ ವಿಧಿ(Article 370)ಯನ್ನು ತೆಗೆದು ಹಾಕಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi)  ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ದೇಶದಲ್ಲಿ ಚುನಾವಣೆಯ ವಾತಾವರಣವಿದೆ, ಇದು ಗ್ಯಾರಂಟಿ ಸೀಸನ್ ಕೂಡ. ಶ್ರೀನಗರದಲ್ಲಿ ಮೋದಿ ಮೆರವಣಿಗೆ ನಡೆಸಲಿದ್ದಾರೆ. ಕಾಶ್ಮೀರದ ಇತಿಹಾಸದಲ್ಲಿ ಇದು ಅತ್ಯಂತ ದೊಡ್ಡ ರ್ಯಾಲಿ ಎಂದೇ ಹೇಳಬಹುದು.

ಇದರಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ರ್ಯಾಲಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶ್ರೀನಗರವನ್ನು ತ್ರಿವರ್ಣ ಹಾಗೂ ಬಿಜೆಪಿ ಧ್ವಜಗಳಿಂದ ಅಲಂಕರಿಸಲಾಗಿದೆ. ಪ್ರಧಾನಿ ಮೋದಿ 7 ಕಿ.ಮೀ ಪ್ರಯಾಣಿಸಿ ಶ್ರೀನಗರದ ಬಕ್ಷಿ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಶ್ರೀನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ 6,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ.
ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್ ಟೂರಿಸ್ಟ್ ಡೆಸ್ಟಿನೇಶನ್ ಪೋಲ್ ಮತ್ತು ಚಲೋ ಇಂಡಿಯಾ ಗ್ಲೋಬಲ್ ಡಯಾಸ್ಪೊರಾ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.

ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 1,000 ಸರ್ಕಾರಿ ನೌಕರರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಮತ್ತು ಮಹಿಳಾ ಸಾಧಕರು, ರೈತರು ಮತ್ತು ಉದ್ಯಮಿಗಳು ಸೇರಿದಂತೆ ವಿವಿಧ ಕೇಂದ್ರ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಮತ್ತಷ್ಟು ಓದಿ: 370ನೇ ವಿಧಿ ರದ್ದುಗೊಳಿಸುವ ಮುನ್ನ ಅಮಿತ್ ಶಾ ಜತೆಗೆ ನಡೆದ ಸಭೆ ಹೇಗಿತ್ತು?; ತಮ್ಮ ಪುಸ್ತಕದಲ್ಲಿ ವಿವರಿಸಿದ ಕೆಜೆಎಸ್ ಧಿಲ್ಲೋನ್

ಹಜರತ್‌ಬಾಲ್ ದೇಗುಲ ಯೋಜನೆಯ ಜೊತೆಗೆ, ಉಪಕ್ರಮಗಳಲ್ಲಿ ಮೇಘಾಲಯದ ಈಶಾನ್ಯ ಸರ್ಕ್ಯೂಟ್‌ನಲ್ಲಿ ಪ್ರವಾಸೋದ್ಯಮ ಸೌಲಭ್ಯಗಳು, ಬಿಹಾರ ಮತ್ತು ರಾಜಸ್ಥಾನದ ಆಧ್ಯಾತ್ಮಿಕ ಸರ್ಕ್ಯೂಟ್, ಬಿಹಾರದ ಗ್ರಾಮೀಣ ಮತ್ತು ತೀರ್ಥಂಕರ ಸರ್ಕ್ಯೂಟ್ ಮತ್ತು ತೆಲಂಗಾಣ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಕೆಲವು ಇತರ ಯೋಜನೆಗಳು ಸೇರಿವೆ.

ದೇಶದಾದ್ಯಂತ ವ್ಯಾಪಕವಾದ ಯಾತ್ರಾ ಮತ್ತು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ 43 ಯೋಜನೆಗಳಿಗೂ ಪ್ರಧಾನಿ ಚಾಲನೆ ನೀಡಲಿದ್ದಾರೆ. ಶ್ರೀನಗರದಲ್ಲಿ, ಪ್ರಧಾನಿ ಹೋಗುವ ಮಾರ್ಗದಲ್ಲಿ ಬೀಳುವ ಹಲವಾರು ಶಾಲೆಗಳನ್ನು ಬುಧವಾರ ಮತ್ತು ಗುರುವಾರ ಮುಚ್ಚಲು ಆದೇಶಿಸಲಾಗಿದೆ, ಆದರೆ ಗುರುವಾರ ನಡೆಯಬೇಕಿದ್ದ ಬೋರ್ಡ್ ಪರೀಕ್ಷೆಗಳನ್ನು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ.

ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಕಣ್ಗಾವಲುಗಾಗಿ ಬಳಸಲಾಗುತ್ತಿದ್ದು, ಸ್ಥಳದ ಸುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಭದ್ರತಾ ಪಡೆಗಳ ಕಾಲ್ನಡಿಗೆಯನ್ನು ತೀವ್ರಗೊಳಿಸಲಾಗಿದೆ. ಈ ಜಲಮೂಲಗಳನ್ನು ಯಾವುದೇ ವಿಧ್ವಂಸಕ ಚಟುವಟಿಕೆಗಳಿಗೆ ಬಳಸದಂತೆ ತಡೆಯಲು ಝೀಲಂ ನದಿ ಮತ್ತು ದಾಲ್ ಸರೋವರದಲ್ಲಿ ಮೆರೈನ್ ಕಮಾಂಡೋಗಳನ್ನು ನಿಯೋಜಿಸಲಾಗಿದೆ.

ಬಿಜೆಪಿ ನೇತೃತ್ವದ ಕೇಂದ್ರವು ಆಗಸ್ಟ್ 5, 2019 ರಂದು 370 ನೇ ವಿಧಿಯನ್ನು ರದ್ದುಗೊಳಿಸಿತು ಮತ್ತು ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us