AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಸಿ ಭಯೋತ್ಪಾದಕ ದಾಳಿ ಪ್ರಕರಣ, ಉಗ್ರನ ಸ್ಕೆಚ್ ರೆಡಿ, ಹಿಡಿದುಕೊಟ್ಟವರಿಗೆ 20 ಲಕ್ಷ ರೂ ಬಹುಮಾನ

ರಿಯಾಸಿಯಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಉಗ್ರನ ಸ್ಕೆಚ್​ ರೆಡಿ ಮಾಡಿದ್ದು, ಹಿಡಿದುಕೊಟ್ಟವರಿಗೆ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಎರಡು ದಿನಗಳ ನಂತರ , ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಪೈಕಿ ಒಬ್ಬನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ರಿಯಾಸಿ ಭಯೋತ್ಪಾದಕ ದಾಳಿ ಪ್ರಕರಣ, ಉಗ್ರನ ಸ್ಕೆಚ್ ರೆಡಿ, ಹಿಡಿದುಕೊಟ್ಟವರಿಗೆ 20 ಲಕ್ಷ ರೂ ಬಹುಮಾನ
ನಯನಾ ರಾಜೀವ್
|

Updated on: Jun 12, 2024 | 9:33 AM

Share

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಭಯೋತ್ಪಾದಕ ದಾಳಿ(Terror Attack) ಪ್ರಕರಣದಲ್ಲಿ ಉಗ್ರನೊಬ್ಬನ ಸ್ಕೆಚ್​ ರೆಡಿಯಾಗಿದ್ದು, ಹಿಡಿದುಕೊಟ್ಟವರಿಗೆ ಪೊಲೀಸ್​ ಇಲಾಖೆಯು 20 ಲಕ್ಷ ರೂ. ನೀಡುವುದಾಗಿ ಘೋಷಿಸಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಎರಡು ದಿನಗಳ ನಂತರ , ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಪೈಕಿ ಒಬ್ಬನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ವಿವರಗಳ ಪ್ರಕಾರ, ಪ್ರತ್ಯಕ್ಷದರ್ಶಿಗಳು ನೀಡಿದ ವಿವರಣೆಯನ್ನು ಆಧರಿಸಿ ಭಯೋತ್ಪಾದಕನ ರೇಖಾಚಿತ್ರವನ್ನು ಸಿದ್ಧಪಡಿಸಲಾಗಿದೆ.  ಇತ್ತೀಚೆಗೆ, ಪೌನಿ ಪ್ರದೇಶದಲ್ಲಿ ಯಾತ್ರಿಕರ ಬಸ್ ಮೇಲೆ ಭಯೋತ್ಪಾದಕ ದಾಳಿಯಲ್ಲಿ 10 ಜನರು ಪ್ರಾಣ ಕಳೆದುಕೊಂಡರು. ಬಳಿಕ ದಾಳಿ ನಡೆಸಿದ ಉಗ್ರರಿಗಾಗಿ ಪೊಲೀಸರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.

ಜೂನ್ 9 ರಂದು ಭಾನುವಾರ ನಡೆದ ಈ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 10 ಮಂದಿಯಲ್ಲಿ ರಾಜಸ್ಥಾನದ ಒಂದೇ ಕುಟುಂಬದ ನಾಲ್ವರು ಸೇರಿದ್ದಾರೆ. ಈ ದಾಳಿಯಲ್ಲಿ ಉತ್ತರಪ್ರದೇಶದ ಬಲರಾಮ್‌ಪುರದ ಇಬ್ಬರು ಕೂಡ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ:ಚಾಲಕನ ತಲೆಗೆ ಗುಂಡು ತಗುಲಿದ್ದು ನೋಡಿದ್ದೆವು, ನಾವೂ ಕೂಡ ಸತ್ತಂತೆ ನಟಿಸಿದ್ದೆವು, ರಿಯಾಸಿ ಉಗ್ರ ದಾಳಿ ಬಗ್ಗೆ ಬದುಕುಳಿದವರ ಮಾತು

53 ಆಸನಗಳ ಬಸ್ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಿವ ಖೋರಿ ದೇವಸ್ಥಾನದಿಂದ ಪೋನಿ ಪ್ರದೇಶದ ತೇರಿಯಾತ್ ಗ್ರಾಮದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು.

ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿಯಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್, ಗುಂಡಿನ ದಾಳಿಯ ನಂತರ ಆಳವಾದ ಕಮರಿಗೆ ಉರುಳಿತು, ಒಂಬತ್ತು ಜನರು ಸಾವನ್ನಪ್ಪಿದರು ಮತ್ತು 41 ಮಂದಿ ಗಾಯಗೊಂಡರು. ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಮಂಗಳವಾರ ವ್ಯಾಪಕ ಪ್ರಯತ್ನಗಳು ನಡೆಯುತ್ತಿವೆ, 11 ಭದ್ರತಾ ಸಿಬ್ಬಂದಿಯ ತಂಡಗಳು ಕೆಲಸ ಮಾಡುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ