AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Soldier Missing: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ನಾಪತ್ತೆ, ಕಾರಿನಲ್ಲಿ ರಕ್ತದ ಕಲೆ, ಉಗ್ರರು ಅಪಹರಿಸಿರುವ ಶಂಕೆ

ಶ್ರೀನಗರ, ಜುಲೈ 30: ದಕ್ಷಿಣ ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯಲ್ಲಿ ಯೋಧರೊಬ್ಬರು ನಾಪತ್ತೆಯಾಗಿದ್ದಾರೆ. ರೈಫಲ್‌ಮ್ಯಾನ್ ಜಾವೇದ್ ಅಹ್ಮದ್ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್‌ಫೆಂಟ್ರಿ ರೆಜಿಮೆಂಟ್‌ಗೆ ಸೇರಿದ್ದು, ಕೆಲವು ದಿನಗಳ ಹಿಂದೆ ರಜೆಯ ಮೇಲೆ ಮನೆಗೆ ಬಂದಿದ್ದರು.

Soldier Missing: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ನಾಪತ್ತೆ, ಕಾರಿನಲ್ಲಿ ರಕ್ತದ ಕಲೆ, ಉಗ್ರರು ಅಪಹರಿಸಿರುವ ಶಂಕೆ
ಯೋಧ ಜಾವೆದ್
ನಯನಾ ರಾಜೀವ್
|

Updated on:Jul 30, 2023 | 10:44 AM

Share

ಶ್ರೀನಗರ, ಜುಲೈ 30: ದಕ್ಷಿಣ ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯಲ್ಲಿ ಯೋಧರೊಬ್ಬರು ನಾಪತ್ತೆಯಾಗಿದ್ದಾರೆ. ರೈಫಲ್‌ಮ್ಯಾನ್ ಜಾವೇದ್ ಅಹ್ಮದ್ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್‌ಫೆಂಟ್ರಿ ರೆಜಿಮೆಂಟ್‌ಗೆ ಸೇರಿದ್ದು, ಕೆಲವು ದಿನಗಳ ಹಿಂದೆ ರಜೆಯ ಮೇಲೆ ಮನೆಗೆ ಬಂದಿದ್ದರು. ಶನಿವಾರ ಸಂಜೆ 6.30ರ ಸುಮಾರಿಗೆ ಅವರು ಮಾರುಕಟ್ಟೆಯಿಂದ ಕೆಲವು ವಸ್ತುಗಳನ್ನು ಖರೀದಿಸಲು ಹೊರಟಿದ್ದರು. ಅವರು ಆಲ್ಟೋ ಕಾರನ್ನು ಓಡಿಸುತ್ತಿದ್ದರು, ರಾತ್ರಿ 9 ಗಂಟೆಯಾದರೂ ವಾಪಸ್‌ ಬಾರದೇ ಇದ್ದಾಗ ಕುಟುಂಬದವರು ಹುಡುಕಾಡಿದ್ದಾರೆ. ಮಾರುಕಟ್ಟೆಯ ಬಳಿ ಕಾರು ಪತ್ತೆಯಾಗಿದ್ದು, ವರದಿಗಳ ಪ್ರಕಾರ ಅದರಲ್ಲಿ ರಕ್ತದ ಕಲೆಗಳಿವೆ.

ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವು ಶಂಕಿತರನ್ನು ಬಂಧಿಸಿದ್ದಾರೆ. 25ರ ಹರೆಯದ ಯೋಧನಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಯೋಧನ ಕುಟುಂಬ ಸದಸ್ಯರು ಆತನನ್ನು ಉಗ್ರರು ಅಪಹರಿಸಿದ್ದಾರೆ ಎಂದು ಶಂಕಿಸಿದ್ದು, ಆತನನ್ನು ಬಿಡುಗಡೆ ಮಾಡುವಂತೆ ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ಓದಿ: ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ

“ದಯವಿಟ್ಟು ನಮ್ಮನ್ನು ಕ್ಷಮಿಸಿ, ನನ್ನ ಮಗನನ್ನು ಬಿಡುಗಡೆ ಮಾಡಿ, ನನ್ನ ಮಗ ಜಾವೇದ್‌ನನ್ನು ಬಿಡುಗಡೆ ಮಾಡಿ, ನಾನು ಅವರನ್ನು ಸೈನ್ಯದಲ್ಲಿ ಕೆಲಸ ಮಾಡಲು ಬಿಡುವುದಿಲ್ಲ, ಆದರೆ ದಯವಿಟ್ಟು ಅವನನ್ನು ಬಿಡುಗಡೆ ಮಾಡಿ ಎಂದು ಯೋಧನ ತಾಯಿ ಬೇಡಿಕೊಂಡಿದ್ದಾರೆ. ಈ ಹಿಂದೆಯೂ ಈ ಪ್ರದೇಶದಲ್ಲಿ ರಜೆಯ ಮೇಲೆ ಮನೆಯಲ್ಲಿದ್ದ ಹಲವಾರು ಸೈನಿಕರನ್ನು ಉಗ್ರರು ಅಪಹರಿಸಿ ಹತ್ಯೆಗೈದಿದ್ದರು.

ಅಪಹರಣಕ್ಕೊಳಗಾದ ಯೋಧನ ಪತ್ತೆಗೆ ಭಾರತೀಯ ಸೇನೆ ಮತ್ತು ಪೊಲೀಸರು ಭಾರೀ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರದೇಶವನ್ನು ಸುತ್ತುವರಿದಿದೆ.

ಜಾವೇದ್ ತನ್ನ ಕಾರನ್ನು ಚೋವಲ್ಗಾಮ್‌ಗೆ ದಿನಸಿ ವಸ್ತುಗಳನ್ನು ಖರೀದಿಸಲು ಹೋಗಿದ್ದರು. ಕಾರಿನಲ್ಲಿ ಚಪ್ಪಲಿ ಮತ್ತು ರಕ್ತದ ಕಲೆಗಳು ಪತ್ತೆಯಾಗಿವೆ. ಕಾರು ಬಾಗಿಲು ಹಾಕಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:44 am, Sun, 30 July 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!