ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ವಿರುದ್ಧ ಸೇನಾ ಕಾರ್ಯಾಚರಣೆ; ಎನ್​​ಕೌಂಟರ್​​​ನಲ್ಲಿ ಉಗ್ರನ ಹತ್ಯೆ, ಓರ್ವ ಯೋಧ ಹುತಾತ್ಮ

ಒಳನುಸುಳುವಿಕೆಗೆ ಯತ್ನಿಸುತ್ತಿದ್ದ ಒಬ್ಬ ಉಗ್ರನನ್ನು ಸೇನೆ ಹತ್ಯೆ ಮಾಡಿದೆ ಎಂದು ರಕ್ಷಣಾ ಪಡೆಯ ವಕ್ತಾರರು ಹೇಳಿದ್ದಾರೆ. ಭಾರೀ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತು ಉಗ್ರರು ಒಳನುಸುಳುತ್ತಿದ್ದರು.

ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ವಿರುದ್ಧ ಸೇನಾ ಕಾರ್ಯಾಚರಣೆ; ಎನ್​​ಕೌಂಟರ್​​​ನಲ್ಲಿ ಉಗ್ರನ ಹತ್ಯೆ, ಓರ್ವ ಯೋಧ ಹುತಾತ್ಮ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jul 08, 2022 | 3:41 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir)ಗಡಿ ನಿಯಂತ್ರಣ ರೇಖೆಯ ತಾಂಗ್​​ಧಾರ್ ವಲಯದಲ್ಲಿ ಶುಕ್ರವಾರ ಒಳನುಸುಳುವಿಕೆ (Infiltration)ನಿಗ್ರಹ ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಒಳನುಸುಳುವಿಕೆಗೆ ಯತ್ನಿಸುತ್ತಿದ್ದ ಒಬ್ಬ ಉಗ್ರನನ್ನು ಸೇನೆ ಹತ್ಯೆ ಮಾಡಿದೆ ಎಂದು ರಕ್ಷಣಾ ಪಡೆಯ ವಕ್ತಾರರು ಹೇಳಿದ್ದಾರೆ. ಭಾರೀ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತು ಉಗ್ರರು ಒಳನುಸುಳುತ್ತಿದ್ದರು. ಒಂದು ರೈಫಲ್, ನಾಲ್ಕು ಪಿಸ್ತೂಲ್ ಮತ್ತು ಇತರ ಆಯುಧಗಳನ್ನು ಎನ್​​ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕಳೆದ ರಾತ್ರಿ ಹಲವು ಉಗ್ರರು ಭಾರತದೊಳಗೆ ನುಸುಳಲು ಯತ್ನಿಸಿದ್ದಾರೆ. ನೈಟ್ ವಿಷನ್ ಸಾಧನ ಮತ್ತು ಇತರ ಉಪಕರಣಗಳ ಸಹಾಯದಿಂದ ಉಗ್ರರ ಈ ಚಟುವಟಿಕೆಗನ್ನು ಸೇಸಾಪಡೆ ಗಮನಿಸಿದೆ. ಉಗ್ರರು ತಾಂಗ್​​ಧಾರ್ ವಲಯದಲ್ಲಿ ಒಳನುಸುಳುವಿಕೆಗೆ ಯತ್ನಿಸಿದಾಗ ಸೇನಾಪಡೆ ಕಾರ್ಯಾಚರಣೆ ನಡೆಸಿದೆ. ಎನ್​​ಕೌಂಟರ್ ವೇಳೆ ಉಗ್ರನೊಬ್ಬನನ್ನು ಹತ್ಯೆ ಮಾಡಿದ್ದು, ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾಪಡೆ ಹೇಳಿದೆ.

ಕಳೆದ ಕೆಲವು ವರ್ಷಗಳಲ್ಲಿ ಒಳನುಸುಳಿವಿಕೆ ಕಡಿಮೆ ಆಗಿದ್ದರೂ ಇತ್ತೀಚಿಗೆ ಏಕಾಏಕಿ ಏರಿಕೆಯಾಗತೊಡಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಸೇರಿದಂತೆ ಎಲ್ಲ ಒಪ್ಪಂದಗಳ ಕಟ್ಟುನಿಟ್ಟಿನ ಪಾಲನೆ ಬಗ್ಗೆ ಗಮನವಹಿಸುವುದಾಗಿ ಒಪ್ಪಿಕೊಂಡಿತ್ತು. ಇದಾದ ನಂತರ ಕ್ರಾಸ್ ಬಾರ್ಡರ್ ಫೈರಿಂಗ್ ಸೇರಿದಂತೆ ಯಾವುದೇ ಪ್ರಮುಖ ಘಟನೆಗಳು ನಡೆದಿರಲಿಲ್ಲ.

Published On - 3:27 pm, Fri, 8 July 22

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ