AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಟಿಕ್ ಟಾಕ್ ಮತ್ತು ಟಿವಿ ತಾರೆ ಭಯೋತ್ಪಾದಕರ ಗುಂಡಿಗೆ ಬಲಿ. 10-ವರ್ಷದ ಸಂಬಂಧಿಗೆ ಗಾಯ

Kashmiri TV Actor Amreen Bhat: ಕಾಶ್ಮೀರ ವಲಯದ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಬುಧವಾರ ಸಾಯಂಕಾಲ ಸುಮಾರು 7:55 ಕ್ಕೆ ಭಯೋತ್ಪಾದಕರು ಅಮ್ರೀನ್ ಭಟ್ ಹೆಸರಿನ ಮಹಿಳೆಯ ಮನೆಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಟಿಕ್ ಟಾಕ್ ಮತ್ತು ಟಿವಿ ತಾರೆ ಭಯೋತ್ಪಾದಕರ ಗುಂಡಿಗೆ ಬಲಿ. 10-ವರ್ಷದ ಸಂಬಂಧಿಗೆ ಗಾಯ
ಅಮ್ರೀನ್ ಭಟ್, ಕಿರುತೆರೆ ಮತ್ತು ಟಿಕ್ ಟಾಕ್ ತಾರೆ
Follow us
TV9 Web
| Updated By: shivaprasad.hs

Updated on:May 26, 2022 | 10:02 AM

Budgam (Jammu and Kshmir): ಪಾಕಿಸ್ತಾನಲ್ಲಿ ಟಿಕ್ ಟಾಕ್ ತಾರೆಯರು ತಮ್ಮ ಸಂವೇದನೆಹೀನ ವಿಡಿಯೋಗಳನ್ನು ಶೂಟ್ ಅಲ್ಲಿನ ಜನರಿಂದ ವ್ಯಾಪಕ ಖಂಡನೆಗೆ ಗುರಿಯಾಗುತ್ತಿದ್ದರೆ ಭಾರತದಲ್ಲಿ ಭಯೋತ್ಪಾದಕರ (Terrorists) ಗುಂಡಿಗೆ ಬಲಿಯಾಗುತ್ತಿದ್ದಾರೆ. ಈ ಫೋಟೋನಲ್ಲಿರುವ ಮಹಿಳೆಯನ್ನು ನೋಡಿ. ಅವರ ಹೆಸರು ಅಮ್ರೀನ್ ಭಟ್ (Amreen Bhat), ಹೆಸರಿಂದಲೇ ಗೊತ್ತು ಮಾಡಿಕೊಳ್ಳಬಹುದು ಅವರು ಜಮ್ಮು ಮತ್ತು ಕಾಶ್ಮೀರದವರು ಅನ್ನೋದು. 35-ವರ್ಷ ವಯಸ್ಸಿನ ಅಮ್ರೀನ್ ಅವರನ್ನು ಬುಧವಾರದದಂದು ಕಾಶ್ಮೀರದ ಬುದ್ಗಾಮ್ (Budgam) ಜಿಲ್ಲೆಯಲ್ಲಿ ಗುಂಡಿಟ್ಟು ಕೊಲ್ಲಲಾಗಿದೆ. ಅವರ ಮೇಲೆ ಹಲ್ಲೆ ನಡೆದಾಗ ಜೊತೆಗಿದ್ದ 10-ವರ್ಷದ ಅಣ್ಣನ ಮಗ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಾಶ್ಮೀರ ವಲಯದ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಬುಧವಾರ ಸಾಯಂಕಾಲ ಸುಮಾರು 7:55 ಕ್ಕೆ ಭಯೋತ್ಪಾದಕರು ಅಮ್ರೀನ್ ಭಟ್ ಹೆಸರಿನ ಮಹಿಳೆಯ ಮನೆಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತಾದರೂ ವೈದ್ಯರು ಅವರು ಮರಣಿಸಿರುವೆರೆಂದು ಘೋಷಿಸಿದರು.

ಆಗಲೇ ಹೇಳಿದ ಹಾಗೆ ಅವರು ಟಿಕ್ ಟಾಕ್ ಮತ್ತು ಕಿರುತೆರೆ ಕಲಾವಿದೆಯಾಗಿದ್ದರು ಹಾಗೂ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.

ಅಮ್ರೀನ್ ಅವರ ಸಂಬಂಧಿ 10-ವರ್ಷದ ಫರ್ಹಾನ್ ಜುಬೇರ್ ಸಹ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ ಮತ್ತು ಉಗ್ರರನ್ನು ಹಿಡಿಯಲು ಜಾಲ ಹಬ್ಬಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಯೋತ್ಪಾದಕರು ನಡೆಸಿರುವ ಎರಡನೇ ದಾಳಿ ಇದಾಗಿದೆ. ಮಂಗಳವಾರದಂದು ಶ್ರೀನಗರದ ಹೊರಭಾಗದಲ್ಲಿ ಭಯೋತ್ಪಾದಕರ ಒಬ್ಬ ಪೊಲೀಸ್ ಪೇದೆ ಮೇಲೆ ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದರು. ಅವರನ್ನು ಉಳಿಸಲು ಹೋದ ಅವರ 7-ವರ್ಷದ ಮಗಳು ಕೂಡ ದಾಳಿಯಲ್ಇ ಗಾಯಗೊಂಡಿದ್ದಾಳೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:52 pm, Wed, 25 May 22

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್