AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಟಿಕ್ ಟಾಕ್ ಮತ್ತು ಟಿವಿ ತಾರೆ ಭಯೋತ್ಪಾದಕರ ಗುಂಡಿಗೆ ಬಲಿ. 10-ವರ್ಷದ ಸಂಬಂಧಿಗೆ ಗಾಯ

Kashmiri TV Actor Amreen Bhat: ಕಾಶ್ಮೀರ ವಲಯದ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಬುಧವಾರ ಸಾಯಂಕಾಲ ಸುಮಾರು 7:55 ಕ್ಕೆ ಭಯೋತ್ಪಾದಕರು ಅಮ್ರೀನ್ ಭಟ್ ಹೆಸರಿನ ಮಹಿಳೆಯ ಮನೆಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಟಿಕ್ ಟಾಕ್ ಮತ್ತು ಟಿವಿ ತಾರೆ ಭಯೋತ್ಪಾದಕರ ಗುಂಡಿಗೆ ಬಲಿ. 10-ವರ್ಷದ ಸಂಬಂಧಿಗೆ ಗಾಯ
ಅಮ್ರೀನ್ ಭಟ್, ಕಿರುತೆರೆ ಮತ್ತು ಟಿಕ್ ಟಾಕ್ ತಾರೆ
TV9 Web
| Edited By: |

Updated on:May 26, 2022 | 10:02 AM

Share

Budgam (Jammu and Kshmir): ಪಾಕಿಸ್ತಾನಲ್ಲಿ ಟಿಕ್ ಟಾಕ್ ತಾರೆಯರು ತಮ್ಮ ಸಂವೇದನೆಹೀನ ವಿಡಿಯೋಗಳನ್ನು ಶೂಟ್ ಅಲ್ಲಿನ ಜನರಿಂದ ವ್ಯಾಪಕ ಖಂಡನೆಗೆ ಗುರಿಯಾಗುತ್ತಿದ್ದರೆ ಭಾರತದಲ್ಲಿ ಭಯೋತ್ಪಾದಕರ (Terrorists) ಗುಂಡಿಗೆ ಬಲಿಯಾಗುತ್ತಿದ್ದಾರೆ. ಈ ಫೋಟೋನಲ್ಲಿರುವ ಮಹಿಳೆಯನ್ನು ನೋಡಿ. ಅವರ ಹೆಸರು ಅಮ್ರೀನ್ ಭಟ್ (Amreen Bhat), ಹೆಸರಿಂದಲೇ ಗೊತ್ತು ಮಾಡಿಕೊಳ್ಳಬಹುದು ಅವರು ಜಮ್ಮು ಮತ್ತು ಕಾಶ್ಮೀರದವರು ಅನ್ನೋದು. 35-ವರ್ಷ ವಯಸ್ಸಿನ ಅಮ್ರೀನ್ ಅವರನ್ನು ಬುಧವಾರದದಂದು ಕಾಶ್ಮೀರದ ಬುದ್ಗಾಮ್ (Budgam) ಜಿಲ್ಲೆಯಲ್ಲಿ ಗುಂಡಿಟ್ಟು ಕೊಲ್ಲಲಾಗಿದೆ. ಅವರ ಮೇಲೆ ಹಲ್ಲೆ ನಡೆದಾಗ ಜೊತೆಗಿದ್ದ 10-ವರ್ಷದ ಅಣ್ಣನ ಮಗ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಾಶ್ಮೀರ ವಲಯದ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಬುಧವಾರ ಸಾಯಂಕಾಲ ಸುಮಾರು 7:55 ಕ್ಕೆ ಭಯೋತ್ಪಾದಕರು ಅಮ್ರೀನ್ ಭಟ್ ಹೆಸರಿನ ಮಹಿಳೆಯ ಮನೆಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತಾದರೂ ವೈದ್ಯರು ಅವರು ಮರಣಿಸಿರುವೆರೆಂದು ಘೋಷಿಸಿದರು.

ಆಗಲೇ ಹೇಳಿದ ಹಾಗೆ ಅವರು ಟಿಕ್ ಟಾಕ್ ಮತ್ತು ಕಿರುತೆರೆ ಕಲಾವಿದೆಯಾಗಿದ್ದರು ಹಾಗೂ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.

ಅಮ್ರೀನ್ ಅವರ ಸಂಬಂಧಿ 10-ವರ್ಷದ ಫರ್ಹಾನ್ ಜುಬೇರ್ ಸಹ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ ಮತ್ತು ಉಗ್ರರನ್ನು ಹಿಡಿಯಲು ಜಾಲ ಹಬ್ಬಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಯೋತ್ಪಾದಕರು ನಡೆಸಿರುವ ಎರಡನೇ ದಾಳಿ ಇದಾಗಿದೆ. ಮಂಗಳವಾರದಂದು ಶ್ರೀನಗರದ ಹೊರಭಾಗದಲ್ಲಿ ಭಯೋತ್ಪಾದಕರ ಒಬ್ಬ ಪೊಲೀಸ್ ಪೇದೆ ಮೇಲೆ ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದರು. ಅವರನ್ನು ಉಳಿಸಲು ಹೋದ ಅವರ 7-ವರ್ಷದ ಮಗಳು ಕೂಡ ದಾಳಿಯಲ್ಇ ಗಾಯಗೊಂಡಿದ್ದಾಳೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:52 pm, Wed, 25 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?