AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಪ್ವಾರದಲ್ಲಿ ಭಾರೀ ಹಿಮಪಾತದಿಂದ ಕಣಿವೆಗೆ ಉರುಳಿದ ವಾಹನ; ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವು

ದಟ್ಟ ಮಂಜಿನಿಂದಾಗಿ ಆಪರೇಷನ್ ಟಾಸ್ಕ್​​ನಲ್ಲಿದ್ದ ಮೂವರು ಯೋಧರು ಪ್ರಯಾಣಿಸುತ್ತಿದ್ದ ವಾಹನ ಆಯ ತಪ್ಪಿ ಕಣಿವೆಗೆ ಬಿದ್ದಿದೆ. ಈ ಮೂವರೂ ಡೋಗ್ರಾ ರೆಜಿಮೆಂಟ್‌ನ 14ನೇ ಬೆಟಾಲಿಯನ್‌ಗೆ ಸೇರಿದವರೆಂದು ತಿಳಿದುಬಂದಿದೆ.

ಕುಪ್ವಾರದಲ್ಲಿ ಭಾರೀ ಹಿಮಪಾತದಿಂದ ಕಣಿವೆಗೆ ಉರುಳಿದ ವಾಹನ; ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವು
ಸಾಂದರ್ಭಿಕ ಚಿತ್ರImage Credit source: times now
TV9 Web
| Edited By: |

Updated on:Jan 11, 2023 | 10:28 AM

Share

ಕುಪ್ವಾರ: ಜಮ್ಮು ಕಾಶ್ಮೀರದ ಕುಪ್ವಾರದ (Kupwara) ಮಚ್ಚಲ್ ಸೆಕ್ಟರ್‌ನಲ್ಲಿ ಸೇನಾ ವಾಹನ (Army Vehicle) ಆಳವಾದ ಕಂದಕಕ್ಕೆ ಜಾರಿ ಮೂವರು ಭಾರತೀಯ ಸೇನಾ (Indian Army) ಸಿಬ್ಬಂದಿ ಸಾವನ್ನಪ್ಪಿದ ದಾರುಣ ಘಟನೆ ಇಂದು ನಡೆದಿದೆ. ದಟ್ಟ ಮಂಜಿನಿಂದಾಗಿ ಆಪರೇಷನ್ ಟಾಸ್ಕ್​​ನಲ್ಲಿದ್ದ ಈ ಮೂವರು ಯೋಧರು ಪ್ರಯಾಣಿಸುತ್ತಿದ್ದ ವಾಹನ ಆಯ ತಪ್ಪಿ ಕಣಿವೆಗೆ ಬಿದ್ದಿದೆ. ಈ ಮೂವರೂ ಡೋಗ್ರಾ ರೆಜಿಮೆಂಟ್‌ನ 14ನೇ ಬೆಟಾಲಿಯನ್‌ಗೆ ಸೇರಿದವರೆಂದು ತಿಳಿದುಬಂದಿದೆ.

ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಈ ಬಗ್ಗೆ ಸೇನಾಪಡೆ ಟ್ವೀಟ್ ಮೂಲಕ ಖಚಿತಪಡಿಸಿದೆ.

“ಫಾರ್ವರ್ಡ್ ಏರಿಯಾದಲ್ಲಿ ಆಪರೇಷನ್ ಕಾರ್ಯದ ಸಂದರ್ಭದಲ್ಲಿ ಈ ವಾಹನ ಕಿರಿಯ ಸೇನಾ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿತ್ತು. ಈ ವೇಳೆ ಈ ಅಪಘಾತ ಸಂಭವಿಸಿದೆ. ಒಬ್ಬರು ಜೆಸಿಒ ಮತ್ತು ಇಬ್ಬರು ಓಆರ್​ ಇದ್ದ ವಾಹನ ಪ್ರಯಾಣಿಸುತ್ತಿದ್ದ ರಸ್ತೆಯಲ್ಲಿ ಹಿಮ ತುಂಬಿಕೊಂಡಿತ್ತು. ಇದರಿಂದ ವಾಹನ ಆಳವಾದ ಕಮರಿಗೆ ಜಾರಿತು. ಎಲ್ಲಾ ಮೂವರು ಸೇನಾ ಸಿಬ್ಬಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ” ಎಂದು ಚಿನಾರ್ ಕಾರ್ಪ್ಸ್ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Wed, 11 January 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ