AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಪ್ವಾರದಲ್ಲಿ ಭಾರೀ ಹಿಮಪಾತದಿಂದ ಕಣಿವೆಗೆ ಉರುಳಿದ ವಾಹನ; ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವು

ದಟ್ಟ ಮಂಜಿನಿಂದಾಗಿ ಆಪರೇಷನ್ ಟಾಸ್ಕ್​​ನಲ್ಲಿದ್ದ ಮೂವರು ಯೋಧರು ಪ್ರಯಾಣಿಸುತ್ತಿದ್ದ ವಾಹನ ಆಯ ತಪ್ಪಿ ಕಣಿವೆಗೆ ಬಿದ್ದಿದೆ. ಈ ಮೂವರೂ ಡೋಗ್ರಾ ರೆಜಿಮೆಂಟ್‌ನ 14ನೇ ಬೆಟಾಲಿಯನ್‌ಗೆ ಸೇರಿದವರೆಂದು ತಿಳಿದುಬಂದಿದೆ.

ಕುಪ್ವಾರದಲ್ಲಿ ಭಾರೀ ಹಿಮಪಾತದಿಂದ ಕಣಿವೆಗೆ ಉರುಳಿದ ವಾಹನ; ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವು
ಸಾಂದರ್ಭಿಕ ಚಿತ್ರImage Credit source: times now
TV9 Web
| Edited By: |

Updated on:Jan 11, 2023 | 10:28 AM

Share

ಕುಪ್ವಾರ: ಜಮ್ಮು ಕಾಶ್ಮೀರದ ಕುಪ್ವಾರದ (Kupwara) ಮಚ್ಚಲ್ ಸೆಕ್ಟರ್‌ನಲ್ಲಿ ಸೇನಾ ವಾಹನ (Army Vehicle) ಆಳವಾದ ಕಂದಕಕ್ಕೆ ಜಾರಿ ಮೂವರು ಭಾರತೀಯ ಸೇನಾ (Indian Army) ಸಿಬ್ಬಂದಿ ಸಾವನ್ನಪ್ಪಿದ ದಾರುಣ ಘಟನೆ ಇಂದು ನಡೆದಿದೆ. ದಟ್ಟ ಮಂಜಿನಿಂದಾಗಿ ಆಪರೇಷನ್ ಟಾಸ್ಕ್​​ನಲ್ಲಿದ್ದ ಈ ಮೂವರು ಯೋಧರು ಪ್ರಯಾಣಿಸುತ್ತಿದ್ದ ವಾಹನ ಆಯ ತಪ್ಪಿ ಕಣಿವೆಗೆ ಬಿದ್ದಿದೆ. ಈ ಮೂವರೂ ಡೋಗ್ರಾ ರೆಜಿಮೆಂಟ್‌ನ 14ನೇ ಬೆಟಾಲಿಯನ್‌ಗೆ ಸೇರಿದವರೆಂದು ತಿಳಿದುಬಂದಿದೆ.

ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಈ ಬಗ್ಗೆ ಸೇನಾಪಡೆ ಟ್ವೀಟ್ ಮೂಲಕ ಖಚಿತಪಡಿಸಿದೆ.

“ಫಾರ್ವರ್ಡ್ ಏರಿಯಾದಲ್ಲಿ ಆಪರೇಷನ್ ಕಾರ್ಯದ ಸಂದರ್ಭದಲ್ಲಿ ಈ ವಾಹನ ಕಿರಿಯ ಸೇನಾ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿತ್ತು. ಈ ವೇಳೆ ಈ ಅಪಘಾತ ಸಂಭವಿಸಿದೆ. ಒಬ್ಬರು ಜೆಸಿಒ ಮತ್ತು ಇಬ್ಬರು ಓಆರ್​ ಇದ್ದ ವಾಹನ ಪ್ರಯಾಣಿಸುತ್ತಿದ್ದ ರಸ್ತೆಯಲ್ಲಿ ಹಿಮ ತುಂಬಿಕೊಂಡಿತ್ತು. ಇದರಿಂದ ವಾಹನ ಆಳವಾದ ಕಮರಿಗೆ ಜಾರಿತು. ಎಲ್ಲಾ ಮೂವರು ಸೇನಾ ಸಿಬ್ಬಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ” ಎಂದು ಚಿನಾರ್ ಕಾರ್ಪ್ಸ್ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Wed, 11 January 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು