AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಬೆಳಗ್ಗೆ 8.43ರ ಸುಮಾರಿಗೆ ಸಂಭವಿಸಿದೆ.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ
ಭೂಕಂಪImage Credit source: Mint
ನಯನಾ ರಾಜೀವ್
|

Updated on:Jan 16, 2024 | 9:52 AM

Share

ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಬೆಳಗ್ಗೆ 8.43ರ ಸುಮಾರಿಗೆ ಕಂಪನ ಸಂಭವಿಸಿದೆ. ಈ ಭೂಕಂಪದಲ್ಲಿ ಇದುವರೆಗೆ ಯಾವುದೇ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ, ಭೂಕಂಪನದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವುದು ಕಂಡು ಬಂದಿದೆ.

ಈ ಭೂಕಂಪದ ಆಳವನ್ನು 5 ಕಿಲೋಮೀಟರ್ ಎಂದು ಅಳೆಯಲಾಗಿದೆ. ಚೀನಾದ ಜಿಜಾಂಗ್ ಪ್ರಾಂತ್ಯದಲ್ಲೂ ಬೆಳಗ್ಗೆ ಏಳು ಗಂಟೆಗೆ ಭೂಕಂಪನದ ಅನುಭವವಾಗಿದೆ. ಆ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.7 ಎಂದು ಅಳೆಯಲಾಗಿದೆ. ಸೋಮವಾರ ಸಂಜೆ ಅಸ್ಸಾಂನಲ್ಲಿ 3.6 ತೀವ್ರತೆಯ ಭೂಕಂಪನದ ಅನುಭವವಾಗಿದೆ.

ಇದರ ಕೇಂದ್ರಬಿಂದುವು ಬ್ರಹ್ಮಪುತ್ರದ ದಕ್ಷಿಣ ದಂಡೆಯಲ್ಲಿರುವ ಪೂರ್ವ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಭೂಮಿಯಿಂದ 23 ಕಿಮೀ ಆಳದಲ್ಲಿದೆ.

ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್ ಮತ್ತು ನಾಗಾವ್ ಜಿಲ್ಲೆಗಳಲ್ಲಿ ಕೂಡ ಕಂಪನದ ಅನುಭವವಾಗಿದೆ. ನಾಗಾಲ್ಯಾಂಡ್ ಮತ್ತು ಮಣಿಪುರದ ಕೆಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:48 am, Tue, 16 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ