AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಬೆಳಗ್ಗೆ 8.43ರ ಸುಮಾರಿಗೆ ಸಂಭವಿಸಿದೆ.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ
ಭೂಕಂಪImage Credit source: Mint
ನಯನಾ ರಾಜೀವ್
|

Updated on:Jan 16, 2024 | 9:52 AM

Share

ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಬೆಳಗ್ಗೆ 8.43ರ ಸುಮಾರಿಗೆ ಕಂಪನ ಸಂಭವಿಸಿದೆ. ಈ ಭೂಕಂಪದಲ್ಲಿ ಇದುವರೆಗೆ ಯಾವುದೇ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ, ಭೂಕಂಪನದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವುದು ಕಂಡು ಬಂದಿದೆ.

ಈ ಭೂಕಂಪದ ಆಳವನ್ನು 5 ಕಿಲೋಮೀಟರ್ ಎಂದು ಅಳೆಯಲಾಗಿದೆ. ಚೀನಾದ ಜಿಜಾಂಗ್ ಪ್ರಾಂತ್ಯದಲ್ಲೂ ಬೆಳಗ್ಗೆ ಏಳು ಗಂಟೆಗೆ ಭೂಕಂಪನದ ಅನುಭವವಾಗಿದೆ. ಆ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.7 ಎಂದು ಅಳೆಯಲಾಗಿದೆ. ಸೋಮವಾರ ಸಂಜೆ ಅಸ್ಸಾಂನಲ್ಲಿ 3.6 ತೀವ್ರತೆಯ ಭೂಕಂಪನದ ಅನುಭವವಾಗಿದೆ.

ಇದರ ಕೇಂದ್ರಬಿಂದುವು ಬ್ರಹ್ಮಪುತ್ರದ ದಕ್ಷಿಣ ದಂಡೆಯಲ್ಲಿರುವ ಪೂರ್ವ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಭೂಮಿಯಿಂದ 23 ಕಿಮೀ ಆಳದಲ್ಲಿದೆ.

ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್ ಮತ್ತು ನಾಗಾವ್ ಜಿಲ್ಲೆಗಳಲ್ಲಿ ಕೂಡ ಕಂಪನದ ಅನುಭವವಾಗಿದೆ. ನಾಗಾಲ್ಯಾಂಡ್ ಮತ್ತು ಮಣಿಪುರದ ಕೆಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:48 am, Tue, 16 January 24

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು