ಗಂಡನ ಮನೆ ಲೂಟಿ ಮಾಡಿ ಫೇಸ್​ಬುಕ್​ನಲ್ಲಿ ಪರಿಚಯವಾದವನೊಂದಿಗೆ ಓಡಿ ಹೋದ ಮಹಿಳೆ

ಫೇಸ್​ಬುಕ್​ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಓಡಿ ಹೋಗಲು ಮಹಿಳೆಯೊಬ್ಬಳು ಪತಿಯ ಮನೆಯನ್ನು ಲೂಟಿ ಮಾಡಿ ಚಿನ್ನಾಭರಣ ಕದ್ದು ಹೋಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮಹಿಳೆ ಅಬಿರಾಲ್, 2017 ರಲ್ಲಿ ಪಂಜಾಬ್‌ನ ಮೊಹಾಲಿಯ ವಿನೋದ್ ಕುಮಾರ್ ಅವರನ್ನು ವಿವಾಹವಾದರು. ಆದರೆ, ನಂತರ ಅವರು ರಾಯ್ ಬರೇಲಿಯ ಫೈಜಾನ್ ಅಹ್ಮದ್​ನೊಂದಿಗೆ ರಿಲೇಷನ್​ಶಿಪ್​ನಲ್ಲಿದ್ದಳು.

ಗಂಡನ ಮನೆ ಲೂಟಿ ಮಾಡಿ ಫೇಸ್​ಬುಕ್​ನಲ್ಲಿ ಪರಿಚಯವಾದವನೊಂದಿಗೆ ಓಡಿ ಹೋದ ಮಹಿಳೆ
ಮದುವೆImage Credit source: The Economic Times
Follow us
ನಯನಾ ರಾಜೀವ್
|

Updated on: Jan 09, 2025 | 3:00 PM

ಮಹಿಳೆಯೊಬ್ಬಳು ಗಂಡನ ಮನೆ ಲುಟಿ ಮಾಡಿ ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ನೇಹಿತನೊಂದಿಗೆ ಓಡಿ ಹೋಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಪತ್ನಿ ಕದ್ದಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಿಯಕರನೇ ತನ್ನ ಪತ್ನಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪಿಸಿ ಕರೆದೊಯ್ದಿದ್ದಾನೆ ಎಂದೂ ಪತಿ ಹೇಳಿಕೊಂಡಿದ್ದಾನೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮಹಿಳೆ ಅಬಿರಾಲ್, 2017 ರಲ್ಲಿ ಪಂಜಾಬ್‌ನ ಮೊಹಾಲಿಯ ವಿನೋದ್ ಕುಮಾರ್ ಅವರನ್ನು ವಿವಾಹವಾದರು. ಆದರೆ, ನಂತರ ಅವರು ರಾಯ್ ಬರೇಲಿಯ ಫೈಜಾನ್ ಅಹ್ಮದ್​ನೊಂದಿಗೆ ರಿಲೇಷನ್​ಶಿಪ್​ನಲ್ಲಿದ್ದಳು.

ಡಿಸೆಂಬರ್ 2024 ರಲ್ಲಿ, ಅಬಿರಾಲ್ ತನ್ನ ಪತಿಯನ್ನು ತೊರೆದು ತನ್ನ ಪ್ರೇಮಿ ಅಹ್ಮದ್ ಭೇಟಿಯಾಗಿ, ಎರಡು ದಿನಗಳ ಬಳಿಕ ಮದುವೆಯಾಗಿದ್ದಳು.

ಮತ್ತಷ್ಟು ಓದಿ: ಕನ್ಯೆ ಸಿಗದ ಯುವ ರೈತರೇ ಇವರ ಟಾರ್ಗೆಟ್: ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ ಜಾಲ?

ಮದುವೆ ವಿಚಾರ ತಿಳಿದ ಪತಿ ರಾಯ್ ಬರೇಲಿ ಪೊಲೀಸರಿಗೆ ದೂರು ನೀಡಿದ್ದರು. ಅಹ್ಮದ್ ತನ್ನ ಪತ್ನಿಯನ್ನು ದಾರಿತಪ್ಪಿಸಿದ್ದಾನೆ, ಆಕೆ ಹೋಗುವಾಗ 5 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಫೋನ್​ಗಳನ್ನು ಕದ್ದುಹೋಗಿದ್ದಾಳೆ ಎಂದು ಹೇಳಿದ್ದಾರೆ. ಮಹಿಳೆ ತನ್ನ ಪ್ರೇಮಿಯೊಂದಿಗೆ ಇರಲು ಬಯಸಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿವಕಾಂತ್ ಪಾಂಡೆ ಹೇಳಿದ್ದಾರೆ. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ಶಿವಕುಮಾರ್ ಸ್ಥಿತಿ ನೋಡಿದರೆ ನನ್ನಲ್ಲಿ ಕರುಣೆ ಹುಟ್ಟುತ್ತದೆ: ಆರ್ ಅಶೋಕ
ಶಿವಕುಮಾರ್ ಸ್ಥಿತಿ ನೋಡಿದರೆ ನನ್ನಲ್ಲಿ ಕರುಣೆ ಹುಟ್ಟುತ್ತದೆ: ಆರ್ ಅಶೋಕ
ಸುರ್ಜೆವಾಲಾ ಭೇಟಿ ನಾಯಕರ ಆಂತರಿಕ ಕಾದಾಟವನ್ನು ತಹಬದಿಗೆ ತರುವುದೆ?‘
ಸುರ್ಜೆವಾಲಾ ಭೇಟಿ ನಾಯಕರ ಆಂತರಿಕ ಕಾದಾಟವನ್ನು ತಹಬದಿಗೆ ತರುವುದೆ?‘