AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಮನೆ ಲೂಟಿ ಮಾಡಿ ಫೇಸ್​ಬುಕ್​ನಲ್ಲಿ ಪರಿಚಯವಾದವನೊಂದಿಗೆ ಓಡಿ ಹೋದ ಮಹಿಳೆ

ಫೇಸ್​ಬುಕ್​ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಓಡಿ ಹೋಗಲು ಮಹಿಳೆಯೊಬ್ಬಳು ಪತಿಯ ಮನೆಯನ್ನು ಲೂಟಿ ಮಾಡಿ ಚಿನ್ನಾಭರಣ ಕದ್ದು ಹೋಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮಹಿಳೆ ಅಬಿರಾಲ್, 2017 ರಲ್ಲಿ ಪಂಜಾಬ್‌ನ ಮೊಹಾಲಿಯ ವಿನೋದ್ ಕುಮಾರ್ ಅವರನ್ನು ವಿವಾಹವಾದರು. ಆದರೆ, ನಂತರ ಅವರು ರಾಯ್ ಬರೇಲಿಯ ಫೈಜಾನ್ ಅಹ್ಮದ್​ನೊಂದಿಗೆ ರಿಲೇಷನ್​ಶಿಪ್​ನಲ್ಲಿದ್ದಳು.

ಗಂಡನ ಮನೆ ಲೂಟಿ ಮಾಡಿ ಫೇಸ್​ಬುಕ್​ನಲ್ಲಿ ಪರಿಚಯವಾದವನೊಂದಿಗೆ ಓಡಿ ಹೋದ ಮಹಿಳೆ
ಮದುವೆImage Credit source: The Economic Times
ನಯನಾ ರಾಜೀವ್
|

Updated on: Jan 09, 2025 | 3:00 PM

Share

ಮಹಿಳೆಯೊಬ್ಬಳು ಗಂಡನ ಮನೆ ಲುಟಿ ಮಾಡಿ ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ನೇಹಿತನೊಂದಿಗೆ ಓಡಿ ಹೋಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಪತ್ನಿ ಕದ್ದಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಿಯಕರನೇ ತನ್ನ ಪತ್ನಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪಿಸಿ ಕರೆದೊಯ್ದಿದ್ದಾನೆ ಎಂದೂ ಪತಿ ಹೇಳಿಕೊಂಡಿದ್ದಾನೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮಹಿಳೆ ಅಬಿರಾಲ್, 2017 ರಲ್ಲಿ ಪಂಜಾಬ್‌ನ ಮೊಹಾಲಿಯ ವಿನೋದ್ ಕುಮಾರ್ ಅವರನ್ನು ವಿವಾಹವಾದರು. ಆದರೆ, ನಂತರ ಅವರು ರಾಯ್ ಬರೇಲಿಯ ಫೈಜಾನ್ ಅಹ್ಮದ್​ನೊಂದಿಗೆ ರಿಲೇಷನ್​ಶಿಪ್​ನಲ್ಲಿದ್ದಳು.

ಡಿಸೆಂಬರ್ 2024 ರಲ್ಲಿ, ಅಬಿರಾಲ್ ತನ್ನ ಪತಿಯನ್ನು ತೊರೆದು ತನ್ನ ಪ್ರೇಮಿ ಅಹ್ಮದ್ ಭೇಟಿಯಾಗಿ, ಎರಡು ದಿನಗಳ ಬಳಿಕ ಮದುವೆಯಾಗಿದ್ದಳು.

ಮತ್ತಷ್ಟು ಓದಿ: ಕನ್ಯೆ ಸಿಗದ ಯುವ ರೈತರೇ ಇವರ ಟಾರ್ಗೆಟ್: ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ ಜಾಲ?

ಮದುವೆ ವಿಚಾರ ತಿಳಿದ ಪತಿ ರಾಯ್ ಬರೇಲಿ ಪೊಲೀಸರಿಗೆ ದೂರು ನೀಡಿದ್ದರು. ಅಹ್ಮದ್ ತನ್ನ ಪತ್ನಿಯನ್ನು ದಾರಿತಪ್ಪಿಸಿದ್ದಾನೆ, ಆಕೆ ಹೋಗುವಾಗ 5 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಫೋನ್​ಗಳನ್ನು ಕದ್ದುಹೋಗಿದ್ದಾಳೆ ಎಂದು ಹೇಳಿದ್ದಾರೆ. ಮಹಿಳೆ ತನ್ನ ಪ್ರೇಮಿಯೊಂದಿಗೆ ಇರಲು ಬಯಸಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿವಕಾಂತ್ ಪಾಂಡೆ ಹೇಳಿದ್ದಾರೆ. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್