AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್

ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದದ ಮೂಲಕ ಭಾರತದ ಮೇಲೆ ವಿಧಿಸಲಾಗಿದ್ದ ಶೇ. 50ರಷ್ಟು ತೆರಿಗೆಯನ್ನು ಶೇ. 18ಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿಯಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಈ ಮೂಲಕ ಆಪ್ತ ಸ್ನೇಹಿತರಾಗಿದ್ದ ಟ್ರಂಪ್ ಹಾಗೂ ಮೋದಿಯ ನಡುವಿನ ಬಿರುಕು ಮುಚ್ಚಿದಂತಾಗಿದೆ. ಆದರೆ, ಭಾರತೀಯರಿಗೆ ಇದಕ್ಕಿಂತಲೂ ಹೆಚ್ಚು ಖುಷಿಯಾಗಿದ್ದು ಅಮೆರಿಕ ಬಿಡುಗಡೆ ಮಾಡಿರುವ ಕಾಶ್ಮೀರವನ್ನು ಒಳಗೊಂಡಿರುವ ಭಾರತದ ನಕ್ಷೆಯ ಕಾರಣಕ್ಕೆ. ಈ ಮೂಲಕ ಟ್ರಂಪ್ ಸದ್ದಿಲ್ಲದೇ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ್ದಾರೆ.

ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್
Us Released Indisn Map With PokImage Credit source: x
ಸುಷ್ಮಾ ಚಕ್ರೆ
|

Updated on: Feb 07, 2026 | 10:46 PM

Share

ನವದೆಹಲಿ, ಫೆಬ್ರವರಿ 7: ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದೇವೆ ಎಂಬ ಕಾರಣಕ್ಕೆ ಭಾರತದ ಮೇಲೆ ಮುನಿಸಿಕೊಂಡಿದ್ದ ಡೊನಾಲ್ಡ್ ಟ್ರಂಪ್ (Donald Trump) ಇದ್ದಕ್ಕಿದ್ದಂತೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಭಾರತದ ಮೇಲಿನ ಒಟ್ಟು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಇದಕ್ಕೆ ಯಾವ ಪ್ರತಿಕ್ರಿಯೆಯನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಗಳ ಜೊತೆ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳುತ್ತಾ ತಮ್ಮದೇ ಆದ ಕಾರ್ಯತಂತ್ರ ರೂಪಿಸಿದ್ದರು. ಇದರಿಂದ ಸಹಜವಾಗಿಯೇ ಟ್ರಂಪ್​ಗೆ ತಲೆಬಿಸಿ ಹೆಚ್ಚಾಗಿತ್ತು. ಕೊನೆಗೆ ಮತ್ತೆ ಇದ್ದಕ್ಕಿದ್ದಂತೆ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದ ಡೊನಾಲ್ಡ್ ಟ್ರಂಪ್ ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿದ್ದರು.

ಇದಕ್ಕೆ ಖುಷಿಯಾಗಿಯೇ ಒಪ್ಪಿದ್ದ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದರು. ಈ ಮೂಲಕ ಭಾರತದ ಮೇಲೆ ವಿಧಿಸಲಾಗಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸಲಾಗಿತ್ತು. ಇದರ ಜೊತೆಗೆ ಅಮೆರಿಕ ಕೆಲವು ಷರತ್ತುಗಳನ್ನು ಕೂಡ ವಿಧಿಸಿರುವುದಾಗಿ ಹೇಳಿಕೊಂಡಿದೆ. ಆದರೆ. ಆ ಬಗ್ಗೆ ಭಾರತ ಇನ್ನೂ ಸ್ಪಷ್ಟವಾದ ಮಾಹಿತಿ ನೀಡಿಲ್ಲ. ವಿಶ್ವದ ದೊಡ್ಡಣ್ಣನ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡದ್ದಕ್ಕಿಂತ ಖುಷಿಯ ಸಂಗತಿ ಮತ್ತೊಂದಿದೆ. ನಿನ್ನೆ ಭಾರತದ ಜೊತೆಗಿನ ಒಪ್ಪಂದದ ನಕ್ಷೆಯೊಂದನ್ನು ಅಮೆರಿಕ ಬಿಡುಗಡೆ ಮಾಡಿದೆ. ಈ ನಕ್ಷೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂಬಂತೆ ಚಿತ್ರಿಸಲಾಗಿದೆ.

ಚೀನಾ ತನ್ನ ಪ್ರದೇಶದ ಭಾಗವೆಂದು ಹೇಳಿಕೊಳ್ಳುವ ಭಾರತದ ಗಡಿಯಲ್ಲಿರುವ ಅಕ್ಸಾಯ್ ಚಿನ್ ಅನ್ನು ಸಹ ಭಾರತದ ನಕ್ಷೆಯಲ್ಲಿ ಸೇರಿಸಲಾಗಿದೆ. ಹೀಗಾಗಿ, ಪಾಕಿಸ್ತಾನ ಮತ್ತು ಚೀನಾದ ಗಡಿ ವಿವಾದಕ್ಕೆ ಭಾರತಕ್ಕೆ ಅಮೆರಿಕ ಬೆಂಬಲ ನೀಡುತ್ತಿದೆಯೇ? ಎಂಬ ಚರ್ಚೆ ಶುರುವಾಗಿದೆ. ಭಾರತದ ನಕ್ಷೆಯಲ್ಲಿ ಅಮೆರಿಕ ಕಾಶ್ಮೀರದ ಪೂರ್ಣ ಚಿತ್ರಣವನ್ನು ನೀಡಿರುವುದು ಪಾಕಿಸ್ತಾನಕ್ಕೆ ಬಿಸಿ ತುಪ್ಪದಂತಾಗಿದೆ. ಟ್ರಂಪ್ ಅವರ ವಿರುದ್ಧ ಹೇಳಿಕೆಯನ್ನೂ ನೀಡಲಾಗದೆ, ಇದನ್ನು ಸಹಿಸಿಕೊಳ್ಳಲೂ ಸಾಧ್ಯವಾಗದೆ ಪಾಕಿಸ್ತಾನ ಒದ್ದಾಡುತ್ತಿದೆ.

ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ಹೀಗಾಗಿ, ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಘೋಷಣೆಯು ರಾಜತಾಂತ್ರಿಕವಾಗಿ ಮಾತ್ರವಲ್ಲದೆ ಭಾರತದೊಂದಿಗಿನ ಗಡಿ ವಿವಾದದ ದೃಷ್ಟಿಯಿಂದಲೂ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ಕೊಟ್ಟಿರುವುದಂತೂ ನಿಜ. ಭಾರತ ಮತ್ತು ಯುಎಸ್ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಕೂಡಲೇ, ಯುಎಸ್ ವ್ಯಾಪಾರ ಪ್ರತಿನಿಧಿ ಕಚೇರಿಯು ಭಾರತದ ಭೂಪ್ರದೇಶವನ್ನು ಸ್ಪಷ್ಟವಾಗಿ ಗುರುತಿಸುವ ಭಾರತದ ನಕ್ಷೆಯನ್ನು ಬಿಡುಗಡೆ ಮಾಡಿತು. ಅಮೆರಿಕದ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ಹಂಚಿಕೊಳ್ಳಲಾದ ನಕ್ಷೆಯು ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಪ್ರದೇಶವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಇದರಲ್ಲಿ ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶ (ಪಿಒಕೆ) ಭಾರತದ ಭಾಗವಾಗಿದೆ. ಈ ಪೋಸ್ಟ್ ಈ ಪ್ರದೇಶದ ಮೇಲಿನ ಭಾರತದ ಹಕ್ಕನ್ನು ಸ್ಪಷ್ಟವಾಗಿ ಸೂಚಿಸುತ್ತದೆ.

ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಇಬ್ಬರೂ ಜಾಗತಿಕ ವೇದಿಕೆಯಲ್ಲಿ ತಾವು ಗಟ್ಟಿಯಾಗಿ ನೆಲೆಗೊಳ್ಳಲು ಅಮೆರಿಕವನ್ನು ಮನವೊಲಿಸಲು ಶ್ರಮಿಸುತ್ತಿರುವುದರಿಂದ ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಘೋಷಣೆಯ ನಂತರದ ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಪಾಕಿಸ್ತಾನಕ್ಕೆ ದೊಡ್ಡ ಮುಜುಗರವನ್ನುಂಟುಮಾಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ

ಇದಲ್ಲದೆ, ಚೀನಾ ತನ್ನ ಪ್ರದೇಶದ ಭಾಗವೆಂದು ಹೇಳಿಕೊಳ್ಳುವ ಅಕ್ಸಾಯ್ ಚಿನ್ ಅನ್ನು ಸಹ ಭಾರತದ ನಕ್ಷೆಯಲ್ಲಿ ಸೇರಿಸಲಾಗಿದೆ. ಅಮೆರಿಕದ ಈ ಪೋಸ್ಟ್ ಉದ್ದೇಶಪೂರ್ವಕ ಅಥವಾ ಪ್ರಾಸಂಗಿಕವಾಗಿದ್ದರೂ ಸಹ ಅದು ಪಾಕಿಸ್ತಾನಕ್ಕೆ ಬಲವಾದ ರಾಜತಾಂತ್ರಿಕ ಸಂದೇಶವನ್ನು ಕಳುಹಿಸಿದೆ. ಅಮೆರಿಕ ಈ ರೀತಿ ಪಿಒಕೆಯನ್ನು ಭಾರತದ ನಕ್ಷೆಯೊಳಗೆ ಸೇರಿಸಿದ್ದು ಉದ್ದೇಶಪೂರ್ವಕವಾಗಿಯಾ? ಅಲ್ಲವಾ? ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಆದರೆ, ಭಾರತೀಯರಿಗಂತೂ ವ್ಯಾಪಾರ ಒಪ್ಪಂದಕ್ಕಿಂತಲೂ ಅಮೆರಿಕದ ಈ ಗಡಿ ನಿಲುವಿನ ಬಗ್ಗೆ ಸಂತೋಷ ಹೆಚ್ಚಾಗಿದೆ ಎಂದೇ ಹೇಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು