AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72 ವರ್ಷ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಲಸಿಕೆ ಕೆಂದ್ರಕ್ಕೆ ಸಾಗಿದ ಪೊಲೀಸ್​ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋ ವೈರಲ್​

ಹೃದಯಸ್ಪರ್ಶಿ ವಿಡಿಯೋ ಇದೀಗ ಬಾರೀ ಸುದ್ದಿಯಲ್ಲಿದೆ. ಇಲ್ಲಿಯವರೆಗೆ 60 ರಿಟ್ವೀಟ್​ ಮತ್ತು 420 ಲೈಕ್ಸ್​ಗಳನ್ನು ಪಡೆದುಕೊಂಡಿದೆ. 6,600ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

72 ವರ್ಷ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಲಸಿಕೆ ಕೆಂದ್ರಕ್ಕೆ ಸಾಗಿದ ಪೊಲೀಸ್​ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋ ವೈರಲ್​
72 ವರ್ಷ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಲಸಿಕೆ ಕೆಂದ್ರಕ್ಕೆ ಸಾಗಿದ ಪೊಲೀಸ್​ ಸಿಬ್ಬಂದಿ
TV9 Web
| Edited By: |

Updated on:Jul 05, 2021 | 11:47 AM

Share

ಪೊಲೀಸರು ಮತ್ತು ಸಶಸ್ತ್ರ ಪಡೆ ಜನರನ್ನು ರಕ್ಷಿಸಲು ಪ್ರತಿ ಕ್ಷಣವೂ ಕರ್ತವ್ಯಕ್ಕೆ ಬದ್ಧರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಜನರ ಏಳಿಗೆಯನ್ನು ಬಯಸುತ್ತಾ ರಕ್ಷಣೆಗೆಗಾಗಿ ನಿಂತಿರುತ್ತಾರೆ. ಇಲ್ಲೊಂದು ಹೃದಸ್ಪರ್ಶಿ ವಿಡಿಯೋ ಬಾರೀ ಸುದ್ದಿಯಲ್ಲಿದೆ.  72 ವರ್ಷದ ವಯಸ್ಕರನ್ನು ಹೆಗಲೆ ಮೇಲೆ ಹೊತ್ತು ಸಾಗಿದ ಪೊಲೀಸ್​ ಸಿಬ್ಬಂದಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪೊಲೀಸ್​ ಸಿಬ್ಬಂದಿಗೆ ನೆಟ್ಟಿಗರು, ಸಲಾಂ.. ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಎಲ್ಲರ ಮನಗೆದ್ದಿದೆ. ಸಾಂಕ್ರಾಮಿಕ ರೋಗ ಹರಡುತ್ತಿದ್ದ ಕಠಿಣ ಸಮಯದಲ್ಲಿ ಭರವಸೆಯ ದಾರಿ ದೀಪವಾಗಿ ಪೊಲೀಸ್​ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಕರ್ತವ್ಯಬದ್ಧ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಕ್ಲಿಪ್​ಅನ್ನು ಈಶಾನ್ಯ ಪ್ರದೇಶ ಅಭಿವೃದ್ಧಿಯ ಕೇಂದ್ರ ಸಚಿವರಾಗಿರುವ ಡಾ. ಜಿತೇಂದ್ರ ಸಿಂಗ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಮೋಹನ್​ ಸಿಂಗ್​ ಎಂಬ ಪೊಲೀಸ್​ ಸಿಬ್ಬಂದಿ 72 ವರ್ಷದ ಅಬ್ದುಲ್​ ಗನಿ ಎಂಬ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಕೊರೊನಾ ಲಸಿಕೆ ಕೇಂದ್ರಕ್ಕೆ ಕರೆದೊಯ್ಯುತ್ತಿದ್ದಾರೆ. ಇವರು ರಾಜ್ಯದ ರಿಯಾಸಿ ಜಿಲ್ಲೆಗೆ ಸಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಲಸಿಕೆ ಕೆಂದ್ರಕ್ಕೆ 72 ರ್ಷದ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ರಿಯಾಸಿ ಜಿಲ್ಲೆಗೆ ಸಾಗಿದ ಎಸ್​ಪಿಒ ಮೋಹನ್​ ಸಿಂಗ್​ರನ್ನು ನೋಡಿದರೆ ಹೆಮ್ಮೆಯಾಗುತ್ತದೆ ಎಂದು ಬರೆದಿಕೊಳ್ಳಲಾಗಿದೆ. ಇಂಡಿಯಾ ಫೈಟ್ಸ್​ ಕೊರೊನಾ ಎಂಬ ಹ್ಯಾಶ್​ಟ್ಯಾಗ್​ನೊಂದಿಗೆ ಟ್ವೀಟ್​ ಹಂಚಿಕೊಳ್ಳಲಾಗಿದೆ.

ಹೃದಯಸ್ಪರ್ಶಿ ವಿಡಿಯೋ ಇದೀಗ ಬಾರೀ ಸುದ್ದಿಯಲ್ಲಿದೆ. ಇಲ್ಲಿಯವರೆಗೆ 60 ರಿಟ್ವೀಟ್​ ಮತ್ತು 420 ಲೈಕ್ಸ್​ಗಳನ್ನು ಪಡೆದುಕೊಂಡಿದೆ. 6,600ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಮೋಹನ್​ ಸಿಂಗ್​ ಅವರಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ತವ್ಯ ಬದ್ಧತೆಗೆ ಶ್ಲಾಘನೆ ವ್ಯಕ್ತವಾಗಿದೆ. ಇವರ ಮಾನವೀಯ ವರ್ತನೆಯನ್ನು ಶ್ಲಾಘಿಸಲೇಬೇಕು.. ಧನ್ಯವಾದಗಳು ಎಂದು ಇನ್ನು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ನಿವೃತ್ತ ಚಾಲಕನನ್ನು ಕೂರಿಸಿಕೊಂಡು ಕಾರು ಚಾಲನೆ; ಹೃದಯಸ್ಪರ್ಶಿ ಕೊಡುಗೆ ನೀಡಿದ ಕೊಪ್ಪಳ ತಹಶೀಲ್ದಾರ್

Published On - 11:45 am, Mon, 5 July 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ