AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ

ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಭದ್ರತಾ ಪಡೆಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ
ಸಾಂದರ್ಭಿಕ ಚಿತ್ರ
guruganesh bhat
|

Updated on:Apr 02, 2021 | 12:19 PM

Share

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ದೊರಕಿದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದವು. ಪುಲ್ವಾಮಾ ಜಿಲ್ಲೆಯ ಕಕಾಪೊರಾ ಪ್ರದೇಶದ ಘಾಟ್ ಮೊಹಲ್ಲಾ ಎಂಬ ಸ್ಥಳದ ಬಳಿ ಈ ಗುಂಡಿನ ಚಕಮಕಿ ನಡೆದಿದೆ ಎಂದು ಆಂಗ್ಲ ಸುದ್ದಿ ಜಾಲತಾಣ ಡಿಎನ್​ಎ ವರದಿ ಮಾಡಿದೆ.

2019ರ ಪುಲ್ವಾಮಾ ದಾಳಿ

ಪಾಕಿಸ್ತಾನದ ಉಗ್ರ 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ. ಹೆದ್ದಾರಿ ಮೇಲೆ ಸಾಗುತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನಗಳನ್ನು ಗುರಿಯಾಗಿಸಿ ಉಗ್ರ ದಾಳಿ ಮಾಡಿದ್ದ. ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಈ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಬಳಿಕ, ಉಗ್ರರ ಈ ದುಷ್ಕೃತ್ಯಕ್ಕೆ ತಿರುಗೇಟು ನೀಡಿದ ಭಾರತ, ಫೆ. 26ರಂದು ಪಾಕ್ ಆಕ್ರಮಿತ ಕಾಶ್ಮೀರ ಭಾಗಕ್ಕೆ ತೆರಳಿ ಉಗ್ರರ ಶಿಬಿರಗಳನ್ನು ಹೇಳಹೆಸರಿಲ್ಲದಂತೆ ಮಾಡಿತ್ತು. ಭಾರತೀಯ ವಾಯುಪಡೆ ಮತ್ತು ಭೂಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಅಟ್ಟಹಾಸವನ್ನು ಹಿಮ್ಮೆಟ್ಟಿಸುವಂತೆ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಇಂದಿಗೆ ಪುಲ್ವಾಮ ಘಟನೆ ನಡೆದು 2 ವರ್ಷಗಳಾಗುತ್ತಿವೆ.

ಘಟನೆಯ ದಿನ ಏನಾಗಿತ್ತು? ಅಂದು 78 ವಾಹನಗಳಲ್ಲಿ 2500 ಸಿಆರ್​ಪಿಎಫ್ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದರು. ಕೇಂದ್ರ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿ ರಜೆ ಮುಗಿಸಿ ಕರ್ತವ್ಯಕ್ಕೆ ಪುನಃ ಕಣಿವೆಗೆ ಮರಳುತ್ತಿದ್ದರು. 78 ವಾಹನಗಳಿಗೆ ಬೆಂಗಾವಲಾಗಿದ್ದ CRPF ಯೋಧರ ಬಸ್ಸುಗಳು ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಆವಂತಿಪುರದ ಲಾಟೂಮೋಡೆ ಎಂಬಲ್ಲಿಗೆ ತಲುಪಿತ್ತು.

ಆ ವೇಳೆ, ಹೆದ್ದಾರಿಯ ಎಡ ಮಾರ್ಗದಲ್ಲಿ ಸ್ಪೋಟಕಗಳನ್ನು ಹೊಂದಿದ್ದ ಬಸ್ ಒಂದು ಆಗಮಿಸಿತು. ಭಾರತೀಯ ಸೇನೆ ಬೆಂಗಾವಲು ಪಡೆಯ ಬಸ್​ನ್ನು ಹಿಂದಿಕ್ಕಿ, ಢಿಕ್ಕಿ ಹೊಡೆದು ಸ್ಫೋಟಗೊಂಡಿತು. ಈ ಭೀಕರ ಆತ್ಮಾಹುತಿ ದಾಳಿಗೆ ಸೇನಾ ವಾಹನಗಳು ಭಸ್ಮಗೊಂಡವು. 40 ಯೋಧರು ಹುತಾತ್ಮರಾದರು. 35 ಮಂದಿ ಗಾಯಗೊಂಡರು.

ಪುಲ್ವಾಮದ ಅವಂತಿಪುರದ ಬಳಿ, ಮಧ್ಯಾಹ್ನ 3.15ರ ವೇಳೆಗೆ ವರದಿಯಾದ ಈ ದಾಳಿಯಲ್ಲಿ ಒಂದು ಬಸ್​ನಲ್ಲಿದ್ದ 40ರಷ್ಟು ಯೋಧರು ಮೃತಪಟ್ಟಿದ್ದರು. 80 ಕೆ.ಜಿ.ಯಷ್ಟು ಸ್ಫೋಟಕಗಳನ್ನು ದಾಳಿಗೆ ಬಳಸಲಾಗಿತ್ತು. 1989ರ ಬಳಿಕ ಯೋಧರನ್ನು ಗುರಿಯಾಗಿಸಿ, ಭಯೋತ್ಪಾದಕರು ನಡೆಸಿದ ಅತಿ ಭೀಕರ ದಾಳಿ ಇದಾಗಿತ್ತು.

ಇದನ್ನೂ ಓದಿ: ಬಾಲಾಕೋಟ್​ ದಾಳಿಗೆ 2 ವರ್ಷ: ವೈರಿ ನೆಲದಲ್ಲೂ ಮುಗುಳ್ನಗುತ್ತಿದ್ದ ಧೀರ ಅಭಿನಂದನ್​ ವರ್ಧಮಾನ್

ಬಾಲಾಕೋಟ್ ದಾಳಿಗೆ 2 ವರ್ಷ: ಭಾರತ-ಪಾಕ್ ನಡುವೆ ಹೊಸ ಕದನವಿರಾಮ ಒಪ್ಪಂದ; ಬದ್ಧವಾಗಿರುವುದೇ ಪಾಕ್?

(Jammu Kashmir Pulwama Encounter 2 to 3 terrorists trapped)

Published On - 12:12 pm, Fri, 2 April 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ